Homeಮುಖಪುಟಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ನಮಗೆ ಸಂವಿಧಾನವೇ ಹೆಚ್ಚು: ಲೋಕಸಭೆಯಲ್ಲಿ ಅಧೀರ್ ಚೌಧರಿ

ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ನಮಗೆ ಸಂವಿಧಾನವೇ ಹೆಚ್ಚು: ಲೋಕಸಭೆಯಲ್ಲಿ ಅಧೀರ್ ಚೌಧರಿ

- Advertisement -
- Advertisement -

‘INDIA’ ಮತ್ತು ‘ಭಾರತ್’ ನಡುವೆ ಅನಗತ್ಯ ಬಿರುಕು ಮೂಡಿಸಲು ಪ್ರಯತ್ನಿಸಬಾರದು, ಏಕೆಂದರೆ ಭಾರತದ ಸಂವಿಧಾನದ ಪ್ರಕಾರ ಎರಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ಹೇಳಿದ್ದಾರೆ.

ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನದಂದು ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಚೌಧರಿ, ”ಸಂವಿಧಾನದ ಮುನ್ನುಡಿಯನ್ನು ಓದುತ್ತಾ, ಇದು ನಮಗೆ ಭಗವದ್ಗೀತೆ ಕುರಾನ್ ಮತ್ತು ಬೈಬಲ್‌ನಂತಹ ಪವಿತ್ರ ಗ್ರಂಥಗಳಿಗಿಂತ ಕಡಿಮೆಯಿಲ್ಲ” ಎಂದು ಹೇಳಿದರು.

”ಈ ಸಂವಿಧಾನವು ನಮಗೆ ಗೀತಾ, ಕುರಾನ್ ಮತ್ತು ಬೈಬಲ್‌ಗಿಂತ ಕಡಿಮೆಯಿಲ್ಲ. 1ನೇ ವಿಧಿ ಹೇಳುತ್ತದೆ, INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ…” ಅಂದರೆ INDIA ಮತ್ತು ಭಾರತಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಎರಡರ ನಡುವೆ ಅನಗತ್ಯವಾಗಿ ಬಿರುಕು ಮೂಡಿಸಲು ಪ್ರಯತ್ನಿಸದಿದ್ದರೆ, ಅದು ಉತ್ತಮವಾಗಿರುತ್ತದೆ” ಎಂದು ಹೇಳಿದರು.

ಸಾಮಾನ್ಯವಾಗಿ ‘ಇಂಡಿಯಾದ ರಾಷ್ಟ್ರಪತಿ’ ಎಂದು ಬಳಸಲಾಗುತ್ತದೆ. ಆದರೆ G20 ಔತಣಕೂಟದ ಆಹ್ವಾನದಲ್ಲಿ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ಕಳುಹಿಸಲಾಯಿತು. ಇದು INDIA ಮತ್ತು ಭಾರತ ನಡುವಿನ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇಂದು ಲೋಕಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ ಚೌಧರಿ ಪ್ರಸ್ತಾಪಿಸಿದರು. 26 ವಿರೋಧ ಪಕ್ಷಗಳು ಒಗ್ಗೂಡಿ ತನ್ನನ್ನು ತಾನು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (I.N.D.I.A) ಎಂದು ಒfಕೂಟ ರಚನೆ ಮಾಡಿದವು. ಹಾಗಾಗಿ ಈ ‘INDIA’ ಎನ್ನುವ ಹೆಸರಿನ ಮೇಲೆ ಕೇಂದ್ರ ಬಿಜೆಪಿ ದಾಳಿ ನಡೆಸುತ್ತಿದೆ.

ಈ ಮಧ್ಯೆ ‘ನಾರಿ ಶಕ್ತಿ ವಂದನ್ ಅಧಿನಿಯಮ್’ (ಮಹಿಳಾ ಮೀಸಲಾತಿ ಮಸೂದೆ)ಯ ಶ್ರೇಯವನ್ನು ನಮ್ಮದು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

”ಮಹಿಳಾ ಮೀಸಲಾತಿಯನ್ನು ಪಿಎಂ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಂದರು. ಅಂದಿನಿಂದ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಲು ಕಾಂಗ್ರೆಸ್ ಕಾನೂನು ತರಲು ಪ್ರಯತ್ನಿಸುತ್ತಿದೆ. ಇದು ಕೆಲವೊಮ್ಮೆ ಲೋಕಸಭೆಯಲ್ಲಿ ಅಂಗೀಕಾರವಾಗುತ್ತಿತ್ತು, ಆದರೆ ರಾಜ್ಯಸಭೆಯಲ್ಲಿ ವಿಫಲವಾಗಿದೆ ಮತ್ತು ಪ್ರತಿಯಾಗಿ. ಮನಮೋಹನ್ ಸರ್ಕಾರ ತಂದ ಮಸೂದೆ ಇನ್ನೂ ಸಕ್ರಿಯವಾಗಿದೆ” ಚೌಧರಿ ಪ್ರತಿಪಾದಿಸಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ: ಪ್ರಧಾನಿ ಮೋದಿಗೆ ‘ಬೇಷರತ್ ಬೆಂಬಲ’ ನೀಡಿದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...