Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...