Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...