Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...