Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...