Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...