Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...