Homeಮುಖಪುಟಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

ಭಾರತ ಸಂವಿಧಾನವು ಸ್ವ-ಆಡಳಿತ, ಘನತೆ, ಸ್ವಾತಂತ್ರ್ಯದ ಸ್ವದೇಶಿ ಉತ್ಪನ್ನ: ಸಿಜೆಐ ಬಣ್ಣನೆ

- Advertisement -
- Advertisement -

ಭಾರತದ ಸಂವಿಧಾನವು ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಒಂದು ಗಮನಾರ್ಹವಾದ ಸ್ವದೇಶಿ ಉತ್ಪನ್ನವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಶನಿವಾರ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಕೆಲವರು ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಶ್ಲಾಘನೀಯ ಪದಗಳಲ್ಲಿ ಮಾತನಾಡುತ್ತಿದ್ದರೆ, ಇನ್ನೂ ಅನೇಕರು ಅದರ ಯಶಸ್ಸಿನ ಬಗ್ಗೆ ಸಿನಿಕರಾಗಿದ್ದಾರೆ” ಎಂದು ವಿಷಾದಿಸಿದ್ದಾರೆ.

“ಸಂವಿಧಾನವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದ್ದರೂ, ಇನ್ನು ಹೆಚ್ಚಿನ ಕೆಲಸವನ್ನು ಸಾಧಿಸಬೇಕಾಗಿದೆ. ಹಿಂದೆ ಇದ್ದ ಬಹುದೊಡ್ಡ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯುವ ಕಾನೂನು ವಿದ್ಯಾರ್ಥಿಗಳು ಮತ್ತು ಪದವೀಧರರು ಸಾಂವಿಧಾನಿಕ ಮೌಲ್ಯಗಳಿಂದ ಮಾರ್ಗದರ್ಶನ ಪಡೆದರೆ, ಅವರು ಎಂದಿಗೂ ವಿಫಲರಾಗುವುದಿಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಉಲ್ಲೇಖಿಸಿದ ಸಿಜೆಐ, “ಇದು ಸಂವಿಧಾನಕ್ಕೆ ಒಂದು ಚಿಕ್ಕ ಆದರೆ ತೂಕದ ಭಾಗವಾಗಿದೆ” ಎಂದು ಶ್ಲಾಘಿಸಿದ್ದಾರೆ. “ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ” ಎಂದು ಸ್ಮರಿಸಿದ್ದಾರೆ.

“ಇದು (ಸಂವಿಧಾನ) ಅಳೆಯಲಾಗದಷ್ಟು ಮಹತ್ವದ್ದಾಗಿದೆ. ಏಕೆಂದರೆ ಇದು ಭಾರತದ ಪ್ರಜೆಗಳಿಗೆ ಪೌರತ್ವದ ಸ್ಥಾನಮಾನ ನೀಡುತ್ತದೆ. ವಸಾಹತುಶಾಹಿ ಅಧಿಕಾರವು ನಮಗೆ ಸಂವಿಧಾನವನ್ನು ಅನುಗ್ರಹದ ಕ್ರಿಯೆಯಾಗಿ ನೀಡಲಿಲ್ಲ. ನಮ್ಮದು (ಸಂವಿಧಾನ) ಒಂದು ದಾಖಲೆಯಾಗಿದೆ. ಸ್ವ-ಆಡಳಿತ, ಘನತೆ ಮತ್ತು ಸ್ವಾತಂತ್ರ್ಯದ ಉತ್ಪನ್ನವಾಗಿದೆ” ಎಂದಿದ್ದಾರೆ.

“ನಮ್ಮ ಸಂವಿಧಾನದ ಯಶಸ್ಸನ್ನು ಸಾಮಾನ್ಯವಾಗಿ ಎರಡು ವಿರುದ್ಧ ತುದಿಗಳಿಂದ ನೋಡಲಾಗುತ್ತದೆ. ಕೆಲವರು ನಮ್ಮ ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ವ್ಯಂಗ್ಯವಾಗಿ ಮಾತನಾಡುತ್ತಾರೆ, ಇತರರು ನಮ್ಮ ಸಂವಿಧಾನದ ಯಶಸ್ಸಿನ ಸಿನಿಕತನವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಂವಿಧಾನವನ್ನು ಅದು ಹೊರಹೊಮ್ಮಿದ (ವಸಾಹತುಶಾಹಿ ಕಾಲಘಟ್ಟ) ಸಂದರ್ಭದಿಂದ ನೋಡಿದಾಗ, ಅದು ಗಮನಾರ್ಹವಾದುದೇನೂ ಅಲ್ಲ” ಎಂದಿರುವ ಭಾರತದ ಮುಖ್ಯ ನ್ಯಾಯಾಧೀಶರು, “ಸಂವಿಧಾನವು ಹೆಚ್ಚು ನ್ಯಾಯಯುತ ಮತ್ತು ಪ್ರಜಾಪ್ರಭುತ್ವ ಸಮಾಜದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ಇಟ್ಟಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಆದರೆ ನಾವು ವಿಶ್ರಾಂತಿ ಪಡೆಯುವವರೆಗೆ ಹೆಚ್ಚಿನ ಕೆಲಸಗಳನ್ನು ಸಾಧಿಸಬೇಕಾಗಿದೆ. ನಮ್ಮ ಸಮಾಜವನ್ನು ಛಿದ್ರಗೊಳಿಸಿರುವ ಆಳವಾಗಿ ಬೇರೂರಿರುವ ಅಸಮಾನತೆ ಇಂದಿಗೂ ಮುಂದುವರೆದಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಎದುರಿಸಿದ ತೊಂದರೆಗಳ ಕುರಿತು ಮಾತನಾಡಿದ ಸಿಜೆಐ ಚಂದ್ರಚೂಡ್, “ನಾವು ಇಂದು ಟೇಕ್‌ ಇಟ್‌ ಫಾರ್‌ ಗ್ರಾನ್‌ಟೆಡ್‌ ಎಂದು ಭಾವಿಸಿರುವ ಅನೇಕ ಸಾಂವಿಧಾನಿಕ ಹಕ್ಕುಗಳು ಮತ್ತು ಪರಿಹಾರಗಳಿಗಾಗಿ ಭಾರತೀಯರು ಬಾಬಾ ಸಾಹೇಬರಿಗೆ ಋಣಿಯಾಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜಾತಿಯಿಂದ ರೋಗಗ್ರಸ್ತವಾಗಿರುವ ಸಮಾಜದಿಂದಾಗಿ ಬಾಬಾ ಸಾಹೇಬರ ವಿರುದ್ಧ ತಡೆಗೋಡೆಗಳನ್ನು ಜೋಡಿಸಲಾಗಿದೆ. ಆದರೂ ಅವರು ನಮ್ಮ ದೇಶದ ಇತಿಹಾಸದಲ್ಲಿ, ಬಹುಶಃ ವಿಶ್ವದ ಅತ್ಯಂತ ಎತ್ತರದ ವ್ಯಕ್ತಿಗಳಲ್ಲಿ ಒಬ್ಬರಾದರು” ಎಂದಿದ್ದಾರೆ ಸಿಜೆಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...