Homeಕರ್ನಾಟಕಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು...

ಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು…

- Advertisement -
- Advertisement -

ರಾಷ್ಟ್ರಕವಿ, ನಾಡಗೀತೆಯ ರಚನೆಗಾರ, ವಿಶ್ವಮಾನವ ಸಂದೇಶ ಸಾರಿದ ಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಒಂದು ದಿನ ಮೊದಲೇ ಇಂದು ಭದ್ರಾವತಿಯಲ್ಲಿ ನೂರಾರು ಜನ ಸೇರಿ ಸಂವಿಧಾನದ ಮುನ್ನಡಿಯ ಓದು ಮತ್ತು ಸಹಭೋಜನದ ಸಹಬಾಳ್ವೆಯ ಕಾರ್ಯಕ್ರಮ ನಡೆಸಿದರು.

ವಿವಿಧ ಸಮುದಾಯಗಳ ನೂರಾರು ಜನರು ಭದ್ರಾವತಿಯ ಒಂದೆಡೆ ಸೇರಿ ಸಾಮರಸ್ಯದ ಸಂಕೇತವಾಗಿ ಸಹಭೋಜನ ನಡೆಸಿದ್ದರಲ್ಲದೇ ಸಂವಿಧಾನದ ಮುನ್ನುಡಿಯನ್ನು ಸಾಮೂಹಿಕವಾಗಿ ಓದುವ ಮೂಲಕ ಭಾರತ ಸರ್ವಧರ್ಮಗಳ ದೇಶ ಎಂಬುದನ್ನು ಸಾರಿದರು.

ವಿಡಿಯೋ ನೋಡಿ

ಸಿಎಎ, ಎನ್‌ಆರ್‌ಸಿ ಸೇರಿದಂತೆ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ನಮ್ಮಲ್ಲಿ ಆತಂಕ ಹುಟ್ಟಿಸಿವೆ. ಇಷ್ಟು ದಿನ ಅನ್ಯೋನವಾಗಿದ್ದ ನಮ್ಮಲ್ಲಿ ಬಿರುಕು ಮೂಡಿಸಲು ಮುಂದಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಾಡಬಹುದಾದ ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದೇವೆ. ನಮ್ಮ ಕುವೆಂಪುರವರ ಜನ್ಮದಿನದ ನೆಪದಲ್ಲಿ ಇದನ್ನು ಆರಂಭಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಆಯೋಜಕರು ತಿಳಿಸಿದ್ದಾರೆ.

ಭದ್ರಾವತಿಯ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಐಕ್ಯತೆ ಮೆರೆದಿದ್ದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಡಿ.ಸಿ ಮಾಯಣ್ಣ, ಚಿಂತಕರಾದ ಪ್ರೊ. ಎಂ ಚಂದ್ರಶೇಖರಯ್ಯ, ಛಲವಾದಿ ಮಹಾಸಭಾದ ಪೇಪರ್ ಸುರೇಶ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ರಾಜು.ಜಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಉಪ ಮೇಯರ್ ಮಹಮ್ಮದ್ ಸನಾವುಲ್ಲಾ, ಮುರ್ತುಜ ಖಾನ್, ಖಾದರ್, ಜಾವಿದ್, ಜೆ.ಬಿ.ಟಿ ಬಾಬು, ಸಿ.ಕೆ ಅಸ್ಮತ್ ಪಾಷ, ಪೀರ್ ಷರೀಫ್, ಆಮ್ ಆದ್ಮಿ ಪಾರ್ಟಿಯ ರವಿಕುಮಾರ್, ಪರಮೇಶ್ವರಚಾರ್, ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾದ ಅಬೂಲ್ ಖೈರ್, ಕ್ರೈಸ್ತ ಮುಖಂಡ ರಾದ ಸೆಲ್ವರಾಜ್, ಬಾಸ್ಕರ್, ಮಾಜಿ ನಗರಸಭಾ ಸದಸ್ಯರಾದ ಚನ್ನಪ್ಪ, ಟಿಪ್ಪು ಸುಲ್ತಾನ್, ಫ್ರಾನ್ಸಿಸ್, ವಕೀಲರಾದ ಶಿವಕುಮಾರ್, ಟಿಪ್ಪು ಸಮಿತಿಯ ಮೆಹಬೂಬ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಹಸ್ರ ಕಡೆ ಸಹಭೋಜನ ಹೆಸರಿನಲ್ಲಿ ಹಲವು ಪ್ರಜ್ಞಾವಂತರು ನೀಡಿದ್ದ ಕರೆಗೆ ಓಗೊಟ್ಟು ಕಾರ್ಯಕ್ರಮ ನಡೆದಿದೆ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ದೇಶ. ಇದನ್ನು ಧರ್ಮದ ಆಧಾರಲ್ಲಿ ವಿಭಜಿಸಲು ಬಿಡುವುದಿಲ್ಲ ಎಂದು ಹಲವು ಜನರು ಡಿಸೆಂಬರ್‌ 29ರಂದು ರಾಜ್ಯದ ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಸಹಸ್ರ ಸಹಭೋಜನ ಕಾರ್ಯಕ್ರಮ ನಡೆಸಲಿದ್ದಾರೆ. ಭದ್ರಾವತಿಯಲ್ಲಿಯೂ ಸಹ ನಾಳೆ ಭಾನುವಾರ ಹತ್ತಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...