Homeಕರ್ನಾಟಕಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು...

ಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು…

- Advertisement -
- Advertisement -

ರಾಷ್ಟ್ರಕವಿ, ನಾಡಗೀತೆಯ ರಚನೆಗಾರ, ವಿಶ್ವಮಾನವ ಸಂದೇಶ ಸಾರಿದ ಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಒಂದು ದಿನ ಮೊದಲೇ ಇಂದು ಭದ್ರಾವತಿಯಲ್ಲಿ ನೂರಾರು ಜನ ಸೇರಿ ಸಂವಿಧಾನದ ಮುನ್ನಡಿಯ ಓದು ಮತ್ತು ಸಹಭೋಜನದ ಸಹಬಾಳ್ವೆಯ ಕಾರ್ಯಕ್ರಮ ನಡೆಸಿದರು.

ವಿವಿಧ ಸಮುದಾಯಗಳ ನೂರಾರು ಜನರು ಭದ್ರಾವತಿಯ ಒಂದೆಡೆ ಸೇರಿ ಸಾಮರಸ್ಯದ ಸಂಕೇತವಾಗಿ ಸಹಭೋಜನ ನಡೆಸಿದ್ದರಲ್ಲದೇ ಸಂವಿಧಾನದ ಮುನ್ನುಡಿಯನ್ನು ಸಾಮೂಹಿಕವಾಗಿ ಓದುವ ಮೂಲಕ ಭಾರತ ಸರ್ವಧರ್ಮಗಳ ದೇಶ ಎಂಬುದನ್ನು ಸಾರಿದರು.

ವಿಡಿಯೋ ನೋಡಿ

ಸಿಎಎ, ಎನ್‌ಆರ್‌ಸಿ ಸೇರಿದಂತೆ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ನಮ್ಮಲ್ಲಿ ಆತಂಕ ಹುಟ್ಟಿಸಿವೆ. ಇಷ್ಟು ದಿನ ಅನ್ಯೋನವಾಗಿದ್ದ ನಮ್ಮಲ್ಲಿ ಬಿರುಕು ಮೂಡಿಸಲು ಮುಂದಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಾಡಬಹುದಾದ ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದೇವೆ. ನಮ್ಮ ಕುವೆಂಪುರವರ ಜನ್ಮದಿನದ ನೆಪದಲ್ಲಿ ಇದನ್ನು ಆರಂಭಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಆಯೋಜಕರು ತಿಳಿಸಿದ್ದಾರೆ.

ಭದ್ರಾವತಿಯ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಐಕ್ಯತೆ ಮೆರೆದಿದ್ದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಡಿ.ಸಿ ಮಾಯಣ್ಣ, ಚಿಂತಕರಾದ ಪ್ರೊ. ಎಂ ಚಂದ್ರಶೇಖರಯ್ಯ, ಛಲವಾದಿ ಮಹಾಸಭಾದ ಪೇಪರ್ ಸುರೇಶ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ರಾಜು.ಜಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಉಪ ಮೇಯರ್ ಮಹಮ್ಮದ್ ಸನಾವುಲ್ಲಾ, ಮುರ್ತುಜ ಖಾನ್, ಖಾದರ್, ಜಾವಿದ್, ಜೆ.ಬಿ.ಟಿ ಬಾಬು, ಸಿ.ಕೆ ಅಸ್ಮತ್ ಪಾಷ, ಪೀರ್ ಷರೀಫ್, ಆಮ್ ಆದ್ಮಿ ಪಾರ್ಟಿಯ ರವಿಕುಮಾರ್, ಪರಮೇಶ್ವರಚಾರ್, ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾದ ಅಬೂಲ್ ಖೈರ್, ಕ್ರೈಸ್ತ ಮುಖಂಡ ರಾದ ಸೆಲ್ವರಾಜ್, ಬಾಸ್ಕರ್, ಮಾಜಿ ನಗರಸಭಾ ಸದಸ್ಯರಾದ ಚನ್ನಪ್ಪ, ಟಿಪ್ಪು ಸುಲ್ತಾನ್, ಫ್ರಾನ್ಸಿಸ್, ವಕೀಲರಾದ ಶಿವಕುಮಾರ್, ಟಿಪ್ಪು ಸಮಿತಿಯ ಮೆಹಬೂಬ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಹಸ್ರ ಕಡೆ ಸಹಭೋಜನ ಹೆಸರಿನಲ್ಲಿ ಹಲವು ಪ್ರಜ್ಞಾವಂತರು ನೀಡಿದ್ದ ಕರೆಗೆ ಓಗೊಟ್ಟು ಕಾರ್ಯಕ್ರಮ ನಡೆದಿದೆ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ದೇಶ. ಇದನ್ನು ಧರ್ಮದ ಆಧಾರಲ್ಲಿ ವಿಭಜಿಸಲು ಬಿಡುವುದಿಲ್ಲ ಎಂದು ಹಲವು ಜನರು ಡಿಸೆಂಬರ್‌ 29ರಂದು ರಾಜ್ಯದ ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಸಹಸ್ರ ಸಹಭೋಜನ ಕಾರ್ಯಕ್ರಮ ನಡೆಸಲಿದ್ದಾರೆ. ಭದ್ರಾವತಿಯಲ್ಲಿಯೂ ಸಹ ನಾಳೆ ಭಾನುವಾರ ಹತ್ತಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...