Homeಕರ್ನಾಟಕಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು...

ಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು…

- Advertisement -
- Advertisement -

ರಾಷ್ಟ್ರಕವಿ, ನಾಡಗೀತೆಯ ರಚನೆಗಾರ, ವಿಶ್ವಮಾನವ ಸಂದೇಶ ಸಾರಿದ ಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಒಂದು ದಿನ ಮೊದಲೇ ಇಂದು ಭದ್ರಾವತಿಯಲ್ಲಿ ನೂರಾರು ಜನ ಸೇರಿ ಸಂವಿಧಾನದ ಮುನ್ನಡಿಯ ಓದು ಮತ್ತು ಸಹಭೋಜನದ ಸಹಬಾಳ್ವೆಯ ಕಾರ್ಯಕ್ರಮ ನಡೆಸಿದರು.

ವಿವಿಧ ಸಮುದಾಯಗಳ ನೂರಾರು ಜನರು ಭದ್ರಾವತಿಯ ಒಂದೆಡೆ ಸೇರಿ ಸಾಮರಸ್ಯದ ಸಂಕೇತವಾಗಿ ಸಹಭೋಜನ ನಡೆಸಿದ್ದರಲ್ಲದೇ ಸಂವಿಧಾನದ ಮುನ್ನುಡಿಯನ್ನು ಸಾಮೂಹಿಕವಾಗಿ ಓದುವ ಮೂಲಕ ಭಾರತ ಸರ್ವಧರ್ಮಗಳ ದೇಶ ಎಂಬುದನ್ನು ಸಾರಿದರು.

ವಿಡಿಯೋ ನೋಡಿ

ಸಿಎಎ, ಎನ್‌ಆರ್‌ಸಿ ಸೇರಿದಂತೆ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ನಮ್ಮಲ್ಲಿ ಆತಂಕ ಹುಟ್ಟಿಸಿವೆ. ಇಷ್ಟು ದಿನ ಅನ್ಯೋನವಾಗಿದ್ದ ನಮ್ಮಲ್ಲಿ ಬಿರುಕು ಮೂಡಿಸಲು ಮುಂದಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಾಡಬಹುದಾದ ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದೇವೆ. ನಮ್ಮ ಕುವೆಂಪುರವರ ಜನ್ಮದಿನದ ನೆಪದಲ್ಲಿ ಇದನ್ನು ಆರಂಭಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಆಯೋಜಕರು ತಿಳಿಸಿದ್ದಾರೆ.

ಭದ್ರಾವತಿಯ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಐಕ್ಯತೆ ಮೆರೆದಿದ್ದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಡಿ.ಸಿ ಮಾಯಣ್ಣ, ಚಿಂತಕರಾದ ಪ್ರೊ. ಎಂ ಚಂದ್ರಶೇಖರಯ್ಯ, ಛಲವಾದಿ ಮಹಾಸಭಾದ ಪೇಪರ್ ಸುರೇಶ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ರಾಜು.ಜಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಉಪ ಮೇಯರ್ ಮಹಮ್ಮದ್ ಸನಾವುಲ್ಲಾ, ಮುರ್ತುಜ ಖಾನ್, ಖಾದರ್, ಜಾವಿದ್, ಜೆ.ಬಿ.ಟಿ ಬಾಬು, ಸಿ.ಕೆ ಅಸ್ಮತ್ ಪಾಷ, ಪೀರ್ ಷರೀಫ್, ಆಮ್ ಆದ್ಮಿ ಪಾರ್ಟಿಯ ರವಿಕುಮಾರ್, ಪರಮೇಶ್ವರಚಾರ್, ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾದ ಅಬೂಲ್ ಖೈರ್, ಕ್ರೈಸ್ತ ಮುಖಂಡ ರಾದ ಸೆಲ್ವರಾಜ್, ಬಾಸ್ಕರ್, ಮಾಜಿ ನಗರಸಭಾ ಸದಸ್ಯರಾದ ಚನ್ನಪ್ಪ, ಟಿಪ್ಪು ಸುಲ್ತಾನ್, ಫ್ರಾನ್ಸಿಸ್, ವಕೀಲರಾದ ಶಿವಕುಮಾರ್, ಟಿಪ್ಪು ಸಮಿತಿಯ ಮೆಹಬೂಬ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಹಸ್ರ ಕಡೆ ಸಹಭೋಜನ ಹೆಸರಿನಲ್ಲಿ ಹಲವು ಪ್ರಜ್ಞಾವಂತರು ನೀಡಿದ್ದ ಕರೆಗೆ ಓಗೊಟ್ಟು ಕಾರ್ಯಕ್ರಮ ನಡೆದಿದೆ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ದೇಶ. ಇದನ್ನು ಧರ್ಮದ ಆಧಾರಲ್ಲಿ ವಿಭಜಿಸಲು ಬಿಡುವುದಿಲ್ಲ ಎಂದು ಹಲವು ಜನರು ಡಿಸೆಂಬರ್‌ 29ರಂದು ರಾಜ್ಯದ ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಸಹಸ್ರ ಸಹಭೋಜನ ಕಾರ್ಯಕ್ರಮ ನಡೆಸಲಿದ್ದಾರೆ. ಭದ್ರಾವತಿಯಲ್ಲಿಯೂ ಸಹ ನಾಳೆ ಭಾನುವಾರ ಹತ್ತಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...