Homeಕರ್ನಾಟಕಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು...

ಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು…

- Advertisement -
- Advertisement -

ರಾಷ್ಟ್ರಕವಿ, ನಾಡಗೀತೆಯ ರಚನೆಗಾರ, ವಿಶ್ವಮಾನವ ಸಂದೇಶ ಸಾರಿದ ಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಒಂದು ದಿನ ಮೊದಲೇ ಇಂದು ಭದ್ರಾವತಿಯಲ್ಲಿ ನೂರಾರು ಜನ ಸೇರಿ ಸಂವಿಧಾನದ ಮುನ್ನಡಿಯ ಓದು ಮತ್ತು ಸಹಭೋಜನದ ಸಹಬಾಳ್ವೆಯ ಕಾರ್ಯಕ್ರಮ ನಡೆಸಿದರು.

ವಿವಿಧ ಸಮುದಾಯಗಳ ನೂರಾರು ಜನರು ಭದ್ರಾವತಿಯ ಒಂದೆಡೆ ಸೇರಿ ಸಾಮರಸ್ಯದ ಸಂಕೇತವಾಗಿ ಸಹಭೋಜನ ನಡೆಸಿದ್ದರಲ್ಲದೇ ಸಂವಿಧಾನದ ಮುನ್ನುಡಿಯನ್ನು ಸಾಮೂಹಿಕವಾಗಿ ಓದುವ ಮೂಲಕ ಭಾರತ ಸರ್ವಧರ್ಮಗಳ ದೇಶ ಎಂಬುದನ್ನು ಸಾರಿದರು.

ವಿಡಿಯೋ ನೋಡಿ

ಸಿಎಎ, ಎನ್‌ಆರ್‌ಸಿ ಸೇರಿದಂತೆ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ನಮ್ಮಲ್ಲಿ ಆತಂಕ ಹುಟ್ಟಿಸಿವೆ. ಇಷ್ಟು ದಿನ ಅನ್ಯೋನವಾಗಿದ್ದ ನಮ್ಮಲ್ಲಿ ಬಿರುಕು ಮೂಡಿಸಲು ಮುಂದಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಾಡಬಹುದಾದ ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದೇವೆ. ನಮ್ಮ ಕುವೆಂಪುರವರ ಜನ್ಮದಿನದ ನೆಪದಲ್ಲಿ ಇದನ್ನು ಆರಂಭಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಆಯೋಜಕರು ತಿಳಿಸಿದ್ದಾರೆ.

ಭದ್ರಾವತಿಯ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಐಕ್ಯತೆ ಮೆರೆದಿದ್ದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಡಿ.ಸಿ ಮಾಯಣ್ಣ, ಚಿಂತಕರಾದ ಪ್ರೊ. ಎಂ ಚಂದ್ರಶೇಖರಯ್ಯ, ಛಲವಾದಿ ಮಹಾಸಭಾದ ಪೇಪರ್ ಸುರೇಶ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ರಾಜು.ಜಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಉಪ ಮೇಯರ್ ಮಹಮ್ಮದ್ ಸನಾವುಲ್ಲಾ, ಮುರ್ತುಜ ಖಾನ್, ಖಾದರ್, ಜಾವಿದ್, ಜೆ.ಬಿ.ಟಿ ಬಾಬು, ಸಿ.ಕೆ ಅಸ್ಮತ್ ಪಾಷ, ಪೀರ್ ಷರೀಫ್, ಆಮ್ ಆದ್ಮಿ ಪಾರ್ಟಿಯ ರವಿಕುಮಾರ್, ಪರಮೇಶ್ವರಚಾರ್, ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾದ ಅಬೂಲ್ ಖೈರ್, ಕ್ರೈಸ್ತ ಮುಖಂಡ ರಾದ ಸೆಲ್ವರಾಜ್, ಬಾಸ್ಕರ್, ಮಾಜಿ ನಗರಸಭಾ ಸದಸ್ಯರಾದ ಚನ್ನಪ್ಪ, ಟಿಪ್ಪು ಸುಲ್ತಾನ್, ಫ್ರಾನ್ಸಿಸ್, ವಕೀಲರಾದ ಶಿವಕುಮಾರ್, ಟಿಪ್ಪು ಸಮಿತಿಯ ಮೆಹಬೂಬ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಹಸ್ರ ಕಡೆ ಸಹಭೋಜನ ಹೆಸರಿನಲ್ಲಿ ಹಲವು ಪ್ರಜ್ಞಾವಂತರು ನೀಡಿದ್ದ ಕರೆಗೆ ಓಗೊಟ್ಟು ಕಾರ್ಯಕ್ರಮ ನಡೆದಿದೆ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ದೇಶ. ಇದನ್ನು ಧರ್ಮದ ಆಧಾರಲ್ಲಿ ವಿಭಜಿಸಲು ಬಿಡುವುದಿಲ್ಲ ಎಂದು ಹಲವು ಜನರು ಡಿಸೆಂಬರ್‌ 29ರಂದು ರಾಜ್ಯದ ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಸಹಸ್ರ ಸಹಭೋಜನ ಕಾರ್ಯಕ್ರಮ ನಡೆಸಲಿದ್ದಾರೆ. ಭದ್ರಾವತಿಯಲ್ಲಿಯೂ ಸಹ ನಾಳೆ ಭಾನುವಾರ ಹತ್ತಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...