Homeಕರ್ನಾಟಕಏ.26ರಂದು ದಾವಣಗೆರೆಯಲ್ಲಿ ಬೃಹತ್ 'ಸಂವಿಧಾನ ಸಂರಕ್ಷಕರ ಸಮಾವೇಶ'

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

- Advertisement -
- Advertisement -

“ಸ್ವಾತಂತ್ರ್ಯ”ದ ಜಾಗದಲ್ಲಿ ಸರ್ವಾಧಿಕಾರ, “ಸಮಾನತೆ”ಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ,”ಸೋದರತ್ವ”ದ ಜಾಗದಲ್ಲಿ ಸನಾತನವಾದ, “ಸಾಮಾಜಿಕ ನ್ಯಾಯ”ದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡುತ್ತಿರುವ ದೊಡ್ಡ ಅಪಾಯವನ್ನು ದೇಶ ಎದುರಿಸುತ್ತಿದೆ ಎಂದು ಎದ್ದೇಳು ಕರ್ನಾಟಕದ ಬೆಂಗಳೂರಿನ ಶ್ರೀಗೌರಿ ಹೇಳಿದ್ದಾರೆ.

ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ ಸಮಾವೇಶ” ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆ ಮಾರಿನ ಮಹಾಯಾನಕ್ಕೆ ವೇದಿಕೆಯಾಗುತ್ತಿದೆ. ಏಪ್ರಿಲ್ 26ರಂದು ಶನಿವಾರ ಕರುನಾಡಿನ ಕೇಂದ್ರ ನಗರಿಯ ಹೈಸ್ಕೂಲ್‌ ಫೀಲ್ಡ್‌ ಬಳಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅತಿಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರ್ಕಾರಿ ಶಿಕ್ಷಣ, ಸರ್ಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಇವು ಲೂಟಿಕೋರ ದಂಧೆಗಳಾಗಿ ಪರಿವರ್ತನೆಯಾಗಿವೆ. ನಿರುದ್ಯೋಗ ವೇಗಗತಿಯಲ್ಲಿ ಹೆಚ್ಚಾಗುತ್ತಿದೆ. ಉದ್ಯೋಗ ಸಿಕ್ಕರೂ ಘನತೆಯಿಂದ ಬದುಕುವ ವೇತನವಿಲ್ಲ. ಜನಸಾಮಾನ್ಯರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ, ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. “ನಾಡಲ್ಲವೋ ಇದು ವಿಷದ ಸಮುದ್ರ” ಎಂಬಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಗೌರಿ ಹೇಳಿದ್ದಾರೆ.

ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬೇಕಿದೆ. ಸ್ವಾತಂತ್ರ್ಯದ ದೀವಿಗೆ ಈಗ ನಮ್ಮ ಕೈಯಲ್ಲಿದೆ. ಅದನ್ನು ಹಿಡಿದುಕೊಂಡು ನಾಡಿಗೆ ಬೆಳಕು ನೀಡಬೇಕಿದೆ. ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನವಾಗಿದೆ “ಸಂವಿಧಾನ ಸಂರಕ್ಷಕರ ಸಮಾವೇಶ”. ಈ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕ ತಂಡಗಳು ಬರಲಿವೆ. ದೇಶದ ಮತ್ತು ರಾಜ್ಯದ ಜನಚಳವಳಿಗಳ ಮುಂದಾಳುಗಳು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಕಸವುಭರಿತ ಸಾಂಸ್ಕೃತಿಕ ತಂಡಗಳು “ಕಲಾ ಕಹಳೆ” ಮೊಳಗಿಸಲಿವೆ. ಈ ಅಭೂತವಪೂರ್ವ ಕಾರ್ಯಕ್ರಮದಲ್ಲಿ ನೀವು ಪಾಲ್ಗೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...