Homeಕರ್ನಾಟಕಏ.26ರಂದು ದಾವಣಗೆರೆಯಲ್ಲಿ ಬೃಹತ್ 'ಸಂವಿಧಾನ ಸಂರಕ್ಷಕರ ಸಮಾವೇಶ'

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

- Advertisement -
- Advertisement -

“ಸ್ವಾತಂತ್ರ್ಯ”ದ ಜಾಗದಲ್ಲಿ ಸರ್ವಾಧಿಕಾರ, “ಸಮಾನತೆ”ಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ,”ಸೋದರತ್ವ”ದ ಜಾಗದಲ್ಲಿ ಸನಾತನವಾದ, “ಸಾಮಾಜಿಕ ನ್ಯಾಯ”ದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡುತ್ತಿರುವ ದೊಡ್ಡ ಅಪಾಯವನ್ನು ದೇಶ ಎದುರಿಸುತ್ತಿದೆ ಎಂದು ಎದ್ದೇಳು ಕರ್ನಾಟಕದ ಬೆಂಗಳೂರಿನ ಶ್ರೀಗೌರಿ ಹೇಳಿದ್ದಾರೆ.

ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ ಸಮಾವೇಶ” ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆ ಮಾರಿನ ಮಹಾಯಾನಕ್ಕೆ ವೇದಿಕೆಯಾಗುತ್ತಿದೆ. ಏಪ್ರಿಲ್ 26ರಂದು ಶನಿವಾರ ಕರುನಾಡಿನ ಕೇಂದ್ರ ನಗರಿಯ ಹೈಸ್ಕೂಲ್‌ ಫೀಲ್ಡ್‌ ಬಳಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅತಿಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರ್ಕಾರಿ ಶಿಕ್ಷಣ, ಸರ್ಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಇವು ಲೂಟಿಕೋರ ದಂಧೆಗಳಾಗಿ ಪರಿವರ್ತನೆಯಾಗಿವೆ. ನಿರುದ್ಯೋಗ ವೇಗಗತಿಯಲ್ಲಿ ಹೆಚ್ಚಾಗುತ್ತಿದೆ. ಉದ್ಯೋಗ ಸಿಕ್ಕರೂ ಘನತೆಯಿಂದ ಬದುಕುವ ವೇತನವಿಲ್ಲ. ಜನಸಾಮಾನ್ಯರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ, ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. “ನಾಡಲ್ಲವೋ ಇದು ವಿಷದ ಸಮುದ್ರ” ಎಂಬಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಗೌರಿ ಹೇಳಿದ್ದಾರೆ.

ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬೇಕಿದೆ. ಸ್ವಾತಂತ್ರ್ಯದ ದೀವಿಗೆ ಈಗ ನಮ್ಮ ಕೈಯಲ್ಲಿದೆ. ಅದನ್ನು ಹಿಡಿದುಕೊಂಡು ನಾಡಿಗೆ ಬೆಳಕು ನೀಡಬೇಕಿದೆ. ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನವಾಗಿದೆ “ಸಂವಿಧಾನ ಸಂರಕ್ಷಕರ ಸಮಾವೇಶ”. ಈ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕ ತಂಡಗಳು ಬರಲಿವೆ. ದೇಶದ ಮತ್ತು ರಾಜ್ಯದ ಜನಚಳವಳಿಗಳ ಮುಂದಾಳುಗಳು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಕಸವುಭರಿತ ಸಾಂಸ್ಕೃತಿಕ ತಂಡಗಳು “ಕಲಾ ಕಹಳೆ” ಮೊಳಗಿಸಲಿವೆ. ಈ ಅಭೂತವಪೂರ್ವ ಕಾರ್ಯಕ್ರಮದಲ್ಲಿ ನೀವು ಪಾಲ್ಗೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...