Homeಮುಖಪುಟಸಂವಿಧಾನ ಓದದ ಮೋದಿ ಅದನ್ನು 'ಖಾಲಿ ಪುಸ್ತಕ' ಎನ್ನುತ್ತಾರೆ: ರಾಹುಲ್ ಗಾಂಧಿ

ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

ನನ್ನ ಕೈಯ್ಯಲ್ಲಿ ಇರುವ ಸಂವಿಧಾನದ ಪ್ರತಿ ಪ್ರಧಾನಿ ಮೋದಿಗೆ, ಖಾಲಿಯಾಗಿರುವ ‘ಕೆಂಪು ಪುಸ್ತಕ’ವಾಗಿ ಕಾಣುವುದು ಏಕೆಂದರೆ ಅವರು ಎಂದಿಗೂ ಅದನ್ನು ಓದದ ಕಾರಣಕ್ಕೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಭಾರತದ ಆತ್ಮವನ್ನು ಒಳಗೊಂಡಿದೆ. ಅದು ರಾಷ್ಟ್ರೀಯ ಐಕಾನ್‌ಗಳಾದ ಬಿರ್ಸಾ ಮುಂಡಾ, ಡಾ ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ರೂಪಿಸಿದ ತತ್ವಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಸಂವಿಧಾನ ಓದದ

ರ‍್ಯಾಲಿಯಲ್ಲಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸಿದ ಅವರು, “ಪುಸ್ತಕದ ಕೆಂಪು ಬಣ್ಣದ ಬಗ್ಗೆ ಬಿಜೆಪಿಗೆ ಆಕ್ಷೇಪವಿದೆ, ಆದರೆ ಇದರ ಬಣ್ಣ ಕೆಂಪು ಅಥವಾ ನೀಲಿ ಎಂಬ ವಿಚಾರವಾಗಿ ನಮಗೆ ಯಾವುದೆ ತಕರಾರಿಲ್ಲ. ಅದನ್ನು (ಸಂವಿಧಾನ) ಸಂರಕ್ಷಿಸಲು ನಾವು ಬದ್ಧರಾಗಿದ್ದು, ಅನುಸರಿಸಲು ಸಿದ್ಧರಿದ್ದೇವೆ. ನಾನು ಹಿಡಿದಿರುವ ಈ ಸಂವಿಧಾನವು (ಪುಸ್ತಕ) ಖಾಲಿಯಾಗಿದೆ ಎಂದು ಮೋದಿ ಅವರು ಭಾವಿಸುತ್ತಾರೆ, ಏಕೆಂದರೆ ಅವರು ಅದನ್ನು ತಮ್ಮ ಜೀವಮಾನದಲ್ಲಿ ಓದಲಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದರೆ ಮೋದಿ ಅವರೆ, ಈ ಪುಸ್ತಕವು ಖಾಲಿಯಾಗಿಲ್ಲ. ಇದು ಭಾರತದ ಆತ್ಮ ಮತ್ತು ಜ್ಞಾನವನ್ನು ಹೊಂದಿದೆ. ಇದು ಬಿರ್ಸಾ ಮುಂಡಾ, ಬುದ್ಧ, ಮಹಾತ್ಮ ಫುಲೆ, ಡಾ. ಅಂಬೇಡ್ಕರ್, ಮಹಾತ್ಮ ಗಾಂಧಿಯವರಂತಹ ರಾಷ್ಟ್ರೀಯ ಐಕಾನ್‌ಗಳು ರೂಪಿಸಿದ ತತ್ವಗಳನ್ನು ಒಳಗೊಂಡಿದೆ. ನೀವು ಪುಸ್ತಕವನ್ನು ಖಾಲಿ ಎಂದು ಕರೆದರೆ, ಈ ಎಲ್ಲಾ ಐಕಾನ್‌ಗಲನ್ನು ನೀವು ಅವಮಾನಿಸಿದಿರಿ ಎಂದರ್ಥ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದವರು ನಿರ್ಧಾರ ಕೈಗೊಳ್ಳುವಲ್ಲಿ ಪ್ರಾತಿನಿಧ್ಯವನ್ನು ಪಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಓದದ

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ಪ್ರದರ್ಶಿಸಿದ “ಕೆಂಪು ಪುಸ್ತಕ” ವನ್ನು “ನಗರ ನಕ್ಸಲಿಸಂ” ಗೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಷ್ಟ್ರೀಯ ಐಕಾನ್‌ಗಳನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಆದಿವಾಸಿಗಳ ಬದಲಿಗೆ ವನವಾಸಿ ಎಂದು ಉಲ್ಲೇಖಿಸುವ ಮೂಲಕ ಆದಿವಾಸಿಗಳನ್ನು ಅವಮಾನಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ. “ಆದಿವಾಸಿಗಳು ದೇಶದ ಮೊದಲ ಮಾಲೀಕರು. ಜಲ, ನೆಲ ಮತ್ತು ಕಾಡಿನ ಮೇಲೆ ಅವರಿಗೆ ಮೊದಲ ಹಕ್ಕಿದೆ. ಆದರೆ ಬಿಜೆಪಿಯು ಆದಿವಾಸಿಗಳು ಯಾವುದೇ ಹಕ್ಕುಗಳಿಲ್ಲದೆ ಕಾಡಿನಲ್ಲಿ ಉಳಿಯಬೇಕೆಂದು ಬಯಸುತ್ತದೆ. ಬಿರ್ಸಾ ಮುಂಡಾ ಇದಕ್ಕಾಗಿ ಹೋರಾಡಿ ತನ್ನ ಪ್ರಾಣ ತ್ಯಾಗ ಮಾಡಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಣಾಳಿಕೆಯನ್ನು ಎತ್ತಿ ಹಿಡಿದ ಗಾಂಧಿ, ಮಹಿಳೆಯರು, ರೈತರು ಮತ್ತು ಯುವಕರಿಗೆ ಮಾಸಿಕ 3,000 ಸಹಾಯ ಮತ್ತು ಉಚಿತ ಬಸ್ ಪ್ರಯಾಣ, 3 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 4,000 ರೂ. ನೀಡುತ್ತದೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ಬೇಡಿಕೆಯನ್ನು ಪುನರುಚ್ಚರಿಸಿದ ಅವರು, ಮಹಾರಾಷ್ಟ್ರದಲ್ಲಿ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗಗಳ ಸಂಖ್ಯೆ ಮತ್ತು ಸಂಪನ್ಮೂಲಗಳಲ್ಲಿ ಅವರ ಪಾಲನ್ನು ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿ 8%ದಷ್ಟು ಬುಡಕಟ್ಟು ಸಮುದಾಯದ ಜನರು ಇದ್ದರೂ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಅವರ ಪಾಲು ಕೇವಲ 1% ಮಾತ್ರ ಇದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...