Homeಮುಖಪುಟಸಂವಿಧಾನ ಓದದ ಮೋದಿ ಅದನ್ನು 'ಖಾಲಿ ಪುಸ್ತಕ' ಎನ್ನುತ್ತಾರೆ: ರಾಹುಲ್ ಗಾಂಧಿ

ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

ನನ್ನ ಕೈಯ್ಯಲ್ಲಿ ಇರುವ ಸಂವಿಧಾನದ ಪ್ರತಿ ಪ್ರಧಾನಿ ಮೋದಿಗೆ, ಖಾಲಿಯಾಗಿರುವ ‘ಕೆಂಪು ಪುಸ್ತಕ’ವಾಗಿ ಕಾಣುವುದು ಏಕೆಂದರೆ ಅವರು ಎಂದಿಗೂ ಅದನ್ನು ಓದದ ಕಾರಣಕ್ಕೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಭಾರತದ ಆತ್ಮವನ್ನು ಒಳಗೊಂಡಿದೆ. ಅದು ರಾಷ್ಟ್ರೀಯ ಐಕಾನ್‌ಗಳಾದ ಬಿರ್ಸಾ ಮುಂಡಾ, ಡಾ ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ರೂಪಿಸಿದ ತತ್ವಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಸಂವಿಧಾನ ಓದದ

ರ‍್ಯಾಲಿಯಲ್ಲಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸಿದ ಅವರು, “ಪುಸ್ತಕದ ಕೆಂಪು ಬಣ್ಣದ ಬಗ್ಗೆ ಬಿಜೆಪಿಗೆ ಆಕ್ಷೇಪವಿದೆ, ಆದರೆ ಇದರ ಬಣ್ಣ ಕೆಂಪು ಅಥವಾ ನೀಲಿ ಎಂಬ ವಿಚಾರವಾಗಿ ನಮಗೆ ಯಾವುದೆ ತಕರಾರಿಲ್ಲ. ಅದನ್ನು (ಸಂವಿಧಾನ) ಸಂರಕ್ಷಿಸಲು ನಾವು ಬದ್ಧರಾಗಿದ್ದು, ಅನುಸರಿಸಲು ಸಿದ್ಧರಿದ್ದೇವೆ. ನಾನು ಹಿಡಿದಿರುವ ಈ ಸಂವಿಧಾನವು (ಪುಸ್ತಕ) ಖಾಲಿಯಾಗಿದೆ ಎಂದು ಮೋದಿ ಅವರು ಭಾವಿಸುತ್ತಾರೆ, ಏಕೆಂದರೆ ಅವರು ಅದನ್ನು ತಮ್ಮ ಜೀವಮಾನದಲ್ಲಿ ಓದಲಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದರೆ ಮೋದಿ ಅವರೆ, ಈ ಪುಸ್ತಕವು ಖಾಲಿಯಾಗಿಲ್ಲ. ಇದು ಭಾರತದ ಆತ್ಮ ಮತ್ತು ಜ್ಞಾನವನ್ನು ಹೊಂದಿದೆ. ಇದು ಬಿರ್ಸಾ ಮುಂಡಾ, ಬುದ್ಧ, ಮಹಾತ್ಮ ಫುಲೆ, ಡಾ. ಅಂಬೇಡ್ಕರ್, ಮಹಾತ್ಮ ಗಾಂಧಿಯವರಂತಹ ರಾಷ್ಟ್ರೀಯ ಐಕಾನ್‌ಗಳು ರೂಪಿಸಿದ ತತ್ವಗಳನ್ನು ಒಳಗೊಂಡಿದೆ. ನೀವು ಪುಸ್ತಕವನ್ನು ಖಾಲಿ ಎಂದು ಕರೆದರೆ, ಈ ಎಲ್ಲಾ ಐಕಾನ್‌ಗಲನ್ನು ನೀವು ಅವಮಾನಿಸಿದಿರಿ ಎಂದರ್ಥ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದವರು ನಿರ್ಧಾರ ಕೈಗೊಳ್ಳುವಲ್ಲಿ ಪ್ರಾತಿನಿಧ್ಯವನ್ನು ಪಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಓದದ

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ಪ್ರದರ್ಶಿಸಿದ “ಕೆಂಪು ಪುಸ್ತಕ” ವನ್ನು “ನಗರ ನಕ್ಸಲಿಸಂ” ಗೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಷ್ಟ್ರೀಯ ಐಕಾನ್‌ಗಳನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಆದಿವಾಸಿಗಳ ಬದಲಿಗೆ ವನವಾಸಿ ಎಂದು ಉಲ್ಲೇಖಿಸುವ ಮೂಲಕ ಆದಿವಾಸಿಗಳನ್ನು ಅವಮಾನಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ. “ಆದಿವಾಸಿಗಳು ದೇಶದ ಮೊದಲ ಮಾಲೀಕರು. ಜಲ, ನೆಲ ಮತ್ತು ಕಾಡಿನ ಮೇಲೆ ಅವರಿಗೆ ಮೊದಲ ಹಕ್ಕಿದೆ. ಆದರೆ ಬಿಜೆಪಿಯು ಆದಿವಾಸಿಗಳು ಯಾವುದೇ ಹಕ್ಕುಗಳಿಲ್ಲದೆ ಕಾಡಿನಲ್ಲಿ ಉಳಿಯಬೇಕೆಂದು ಬಯಸುತ್ತದೆ. ಬಿರ್ಸಾ ಮುಂಡಾ ಇದಕ್ಕಾಗಿ ಹೋರಾಡಿ ತನ್ನ ಪ್ರಾಣ ತ್ಯಾಗ ಮಾಡಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಣಾಳಿಕೆಯನ್ನು ಎತ್ತಿ ಹಿಡಿದ ಗಾಂಧಿ, ಮಹಿಳೆಯರು, ರೈತರು ಮತ್ತು ಯುವಕರಿಗೆ ಮಾಸಿಕ 3,000 ಸಹಾಯ ಮತ್ತು ಉಚಿತ ಬಸ್ ಪ್ರಯಾಣ, 3 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 4,000 ರೂ. ನೀಡುತ್ತದೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ಬೇಡಿಕೆಯನ್ನು ಪುನರುಚ್ಚರಿಸಿದ ಅವರು, ಮಹಾರಾಷ್ಟ್ರದಲ್ಲಿ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗಗಳ ಸಂಖ್ಯೆ ಮತ್ತು ಸಂಪನ್ಮೂಲಗಳಲ್ಲಿ ಅವರ ಪಾಲನ್ನು ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿ 8%ದಷ್ಟು ಬುಡಕಟ್ಟು ಸಮುದಾಯದ ಜನರು ಇದ್ದರೂ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಅವರ ಪಾಲು ಕೇವಲ 1% ಮಾತ್ರ ಇದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...