Homeಮುಖಪುಟಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಚುನಾವಣಾ ಆಯೋಗ ಕೇಂದ್ರದಲ್ಲಿರುವ ‘ಅಪಾಯಕಾರಿ’ ನರೇಂದ್ರ ಮೋದಿ ಸರ್ಕಾರದ ‘ಏಜೆಂಟ್’ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ‘ಬೆದರಿಕೆ’ ಒಡ್ಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಆ.17) ಹೇಳಿದರು.

ಬಿಹಾರದ ಸಸರಾಮ್‌ನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರೆ’ಯ ಚಾಲನಾ ಕಾರ್ಯಕ್ರಮದಲ್ಲಿ ಜನರು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿರುವವರೆಗೆ ಸಂವಿಧಾನ ಅಪಾಯದಲ್ಲಿರುತ್ತದೆ. ಈ ಸರ್ಕಾರ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಈ ಅವಧಿಯಲ್ಲಿ 1 ಕೋಟಿ ಹೊಸ ಮತದಾರರ ಹೆಸರುಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಮಾಡಿರುವ ಆರೋಪಗಳನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಖರ್ಗೆ ಅವರು, “ಎಲ್ಲರೂ ಬಿಜೆಪಿ ನೇತೃತ್ವದ ಒಕ್ಕೂಟಕ್ಕೆ ಮತ ಚಲಾಯಿಸಿದಂತೆ ಕಾಣುತ್ತದೆ” ಎಂದರು.

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳ ಮೊದಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯೊಂದಿಗೆ ಬಿಹಾರದಲ್ಲಿ ಇದೇ ರೀತಿಯ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದ ಖರ್ಗೆ ಅವರು, “ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಮಾರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗವು ತನ್ನ ಮಾತಿಗೆ ವಿಧೇಯರಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಮೋದಿ ಸರ್ಕಾರವು ಚುನಾವಣಾ ಆಯೋಗದ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಇರಬೇಕೆಂದು ನಿರ್ಧರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿಕೊಳ್ಳಬೇಕೆಂಬ ಸುಪ್ರೀಂ ಕೋರ್ಟ್‌ನ ಸಲಹೆಯನ್ನು  ನಿರ್ಲಕ್ಷಿಸಿದೆ ಎಂದು ಖರ್ಗೆ ಆರೋಪಿಸಿದರು.

ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪು ಕೋಟೆ ಮೇಲೆ ನಿಂತು, ದೇಶದ ಸ್ವಾತಂತ್ರ್ಯದ ಶ್ರೇಯಸ್ಸು ಆರ್‌ಎಸ್‌ಎಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಸ್ವಯಂಸೇವಕರು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಗಾಗಿ ಕೆಲಸ ಮಾಡಿದ್ದರು. ಬ್ರಿಟಿಷರಿಗೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ಕ್ಷಮೆಯಂತಹ ಕೃಪೆಗಳನ್ನು ಬಯಸುತ್ತಿದ್ದರು ಎಂದು ಖರ್ಗೆ ಹೇಳಿದರು.

ತಮ್ಮ ತಾಯ್ನಾಡಿಗಾಗಿ ರಕ್ತ, ಬೆವರು ಮತ್ತು ಕಣ್ಣೀರು ಸುರಿಸಿದ್ದ ದೇಶದ ಸ್ವಾತಂತ್ರ್ಯ ಹೋರಾಟಗಾರರು, ನರೇಂದ್ರ ಮೋದಿಯವರ ಮಾತು ಕೇಳಿ ತಮ್ಮ ಸಮಾಧಿಯಲ್ಲೇ ನೋವು ಪಡುತ್ತಿರಬಹುದು. ಮೋದಿ ತುಂಬಾ ಅಪಾಯಕಾರಿ ವ್ಯಕ್ತಿ ಎಂದು ತೋರುತ್ತದೆ. ಅವರು ಸಂವಿಧಾನ ಮತ್ತು ಅದರಲ್ಲಿ ಪ್ರತಿಪಾದಿಸಲಾದ ಮತದಾನದ ಹಕ್ಕಿಗೆ ಅಪಾಯ ಉಂಟು ಮಾಡುತ್ತಿದ್ದಾರೆ. ಅವರನ್ನು ಸಿಂಹಾಸನದಿಂದ ಕೆಳಗಿಳಿಸುವ ಮೂಲಕ ಈ ಹಕ್ಕುಗಳನ್ನು ರಕ್ಷಿಸುವುದು ಜನರ ಕರ್ತವ್ಯ. 1942ರ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ವೀರಾವೇಶದಿಂದ ಹೋರಾಡಿದ ಬಿಹಾರದ ಜನರು ಈ ಸಂದರ್ಭಕ್ಕೆ ತಕ್ಕಂತೆ ಎದ್ದು ನಿಲ್ಲುತ್ತಾರೆ ಎಂದು ನನಗೆ ಭರವಸೆ ಇದೆ ಎಂದರು.

ಆರ್‌ಎಸ್‌ಎಸ್ ಯಾವಾಗಲೂ ಪ್ರಜಾಪ್ರಭುತ್ವವನ್ನು ವಿರೋಧಿಸುತ್ತದೆ. ಅದು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಪರಿಚಯಿಸಿದ್ದಕ್ಕಾಗಿ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಿತ್ತು. ಸಬಲೀಕರಣಗೊಳಿಸುತ್ತಿದ್ದ ಮಹಿಳೆಯರು ಒಂದು ದಿನ ನೆಹರು ವಿರುದ್ಧ ತಿರುಗಿ ಬಿದ್ದು ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಆರ್‌ಎಸ್‌ಎಸ್‌ನವರು ಅಪಹಾಸ್ಯ ಮಾಡಿದ್ದರು. ಆ ಮನಸ್ಥಿತಿ ಇಂದಿಗೂ ಅವರಲ್ಲಿ ಚಾಲ್ತಿಯಲ್ಲಿದೆ” ಎಂದು ಹೇಳಿದರು.

ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸಿದ ಖರ್ಗೆ, ಸರ್ಕಾರವನ್ನು ‘ಕುರುಡರು’ ಮತ್ತು ‘ಕಿವುಡರಂತೆ’ ಕಾಣುವ ಜನರು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...