Homeಮುಖಪುಟಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಚುನಾವಣಾ ಆಯೋಗ ಕೇಂದ್ರದಲ್ಲಿರುವ ‘ಅಪಾಯಕಾರಿ’ ನರೇಂದ್ರ ಮೋದಿ ಸರ್ಕಾರದ ‘ಏಜೆಂಟ್’ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ‘ಬೆದರಿಕೆ’ ಒಡ್ಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಆ.17) ಹೇಳಿದರು.

ಬಿಹಾರದ ಸಸರಾಮ್‌ನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರೆ’ಯ ಚಾಲನಾ ಕಾರ್ಯಕ್ರಮದಲ್ಲಿ ಜನರು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿರುವವರೆಗೆ ಸಂವಿಧಾನ ಅಪಾಯದಲ್ಲಿರುತ್ತದೆ. ಈ ಸರ್ಕಾರ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಈ ಅವಧಿಯಲ್ಲಿ 1 ಕೋಟಿ ಹೊಸ ಮತದಾರರ ಹೆಸರುಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಮಾಡಿರುವ ಆರೋಪಗಳನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಖರ್ಗೆ ಅವರು, “ಎಲ್ಲರೂ ಬಿಜೆಪಿ ನೇತೃತ್ವದ ಒಕ್ಕೂಟಕ್ಕೆ ಮತ ಚಲಾಯಿಸಿದಂತೆ ಕಾಣುತ್ತದೆ” ಎಂದರು.

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳ ಮೊದಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯೊಂದಿಗೆ ಬಿಹಾರದಲ್ಲಿ ಇದೇ ರೀತಿಯ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದ ಖರ್ಗೆ ಅವರು, “ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಮಾರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗವು ತನ್ನ ಮಾತಿಗೆ ವಿಧೇಯರಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಮೋದಿ ಸರ್ಕಾರವು ಚುನಾವಣಾ ಆಯೋಗದ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಇರಬೇಕೆಂದು ನಿರ್ಧರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿಕೊಳ್ಳಬೇಕೆಂಬ ಸುಪ್ರೀಂ ಕೋರ್ಟ್‌ನ ಸಲಹೆಯನ್ನು  ನಿರ್ಲಕ್ಷಿಸಿದೆ ಎಂದು ಖರ್ಗೆ ಆರೋಪಿಸಿದರು.

ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪು ಕೋಟೆ ಮೇಲೆ ನಿಂತು, ದೇಶದ ಸ್ವಾತಂತ್ರ್ಯದ ಶ್ರೇಯಸ್ಸು ಆರ್‌ಎಸ್‌ಎಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಸ್ವಯಂಸೇವಕರು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಗಾಗಿ ಕೆಲಸ ಮಾಡಿದ್ದರು. ಬ್ರಿಟಿಷರಿಗೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ಕ್ಷಮೆಯಂತಹ ಕೃಪೆಗಳನ್ನು ಬಯಸುತ್ತಿದ್ದರು ಎಂದು ಖರ್ಗೆ ಹೇಳಿದರು.

ತಮ್ಮ ತಾಯ್ನಾಡಿಗಾಗಿ ರಕ್ತ, ಬೆವರು ಮತ್ತು ಕಣ್ಣೀರು ಸುರಿಸಿದ್ದ ದೇಶದ ಸ್ವಾತಂತ್ರ್ಯ ಹೋರಾಟಗಾರರು, ನರೇಂದ್ರ ಮೋದಿಯವರ ಮಾತು ಕೇಳಿ ತಮ್ಮ ಸಮಾಧಿಯಲ್ಲೇ ನೋವು ಪಡುತ್ತಿರಬಹುದು. ಮೋದಿ ತುಂಬಾ ಅಪಾಯಕಾರಿ ವ್ಯಕ್ತಿ ಎಂದು ತೋರುತ್ತದೆ. ಅವರು ಸಂವಿಧಾನ ಮತ್ತು ಅದರಲ್ಲಿ ಪ್ರತಿಪಾದಿಸಲಾದ ಮತದಾನದ ಹಕ್ಕಿಗೆ ಅಪಾಯ ಉಂಟು ಮಾಡುತ್ತಿದ್ದಾರೆ. ಅವರನ್ನು ಸಿಂಹಾಸನದಿಂದ ಕೆಳಗಿಳಿಸುವ ಮೂಲಕ ಈ ಹಕ್ಕುಗಳನ್ನು ರಕ್ಷಿಸುವುದು ಜನರ ಕರ್ತವ್ಯ. 1942ರ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ವೀರಾವೇಶದಿಂದ ಹೋರಾಡಿದ ಬಿಹಾರದ ಜನರು ಈ ಸಂದರ್ಭಕ್ಕೆ ತಕ್ಕಂತೆ ಎದ್ದು ನಿಲ್ಲುತ್ತಾರೆ ಎಂದು ನನಗೆ ಭರವಸೆ ಇದೆ ಎಂದರು.

ಆರ್‌ಎಸ್‌ಎಸ್ ಯಾವಾಗಲೂ ಪ್ರಜಾಪ್ರಭುತ್ವವನ್ನು ವಿರೋಧಿಸುತ್ತದೆ. ಅದು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಪರಿಚಯಿಸಿದ್ದಕ್ಕಾಗಿ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಿತ್ತು. ಸಬಲೀಕರಣಗೊಳಿಸುತ್ತಿದ್ದ ಮಹಿಳೆಯರು ಒಂದು ದಿನ ನೆಹರು ವಿರುದ್ಧ ತಿರುಗಿ ಬಿದ್ದು ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಆರ್‌ಎಸ್‌ಎಸ್‌ನವರು ಅಪಹಾಸ್ಯ ಮಾಡಿದ್ದರು. ಆ ಮನಸ್ಥಿತಿ ಇಂದಿಗೂ ಅವರಲ್ಲಿ ಚಾಲ್ತಿಯಲ್ಲಿದೆ” ಎಂದು ಹೇಳಿದರು.

ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸಿದ ಖರ್ಗೆ, ಸರ್ಕಾರವನ್ನು ‘ಕುರುಡರು’ ಮತ್ತು ‘ಕಿವುಡರಂತೆ’ ಕಾಣುವ ಜನರು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...