Homeಮುಖಪುಟಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಚುನಾವಣಾ ಆಯೋಗ ಕೇಂದ್ರದಲ್ಲಿರುವ ‘ಅಪಾಯಕಾರಿ’ ನರೇಂದ್ರ ಮೋದಿ ಸರ್ಕಾರದ ‘ಏಜೆಂಟ್’ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ‘ಬೆದರಿಕೆ’ ಒಡ್ಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಆ.17) ಹೇಳಿದರು.

ಬಿಹಾರದ ಸಸರಾಮ್‌ನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರೆ’ಯ ಚಾಲನಾ ಕಾರ್ಯಕ್ರಮದಲ್ಲಿ ಜನರು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿರುವವರೆಗೆ ಸಂವಿಧಾನ ಅಪಾಯದಲ್ಲಿರುತ್ತದೆ. ಈ ಸರ್ಕಾರ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಈ ಅವಧಿಯಲ್ಲಿ 1 ಕೋಟಿ ಹೊಸ ಮತದಾರರ ಹೆಸರುಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಮಾಡಿರುವ ಆರೋಪಗಳನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಖರ್ಗೆ ಅವರು, “ಎಲ್ಲರೂ ಬಿಜೆಪಿ ನೇತೃತ್ವದ ಒಕ್ಕೂಟಕ್ಕೆ ಮತ ಚಲಾಯಿಸಿದಂತೆ ಕಾಣುತ್ತದೆ” ಎಂದರು.

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳ ಮೊದಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯೊಂದಿಗೆ ಬಿಹಾರದಲ್ಲಿ ಇದೇ ರೀತಿಯ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದ ಖರ್ಗೆ ಅವರು, “ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಮಾರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗವು ತನ್ನ ಮಾತಿಗೆ ವಿಧೇಯರಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಮೋದಿ ಸರ್ಕಾರವು ಚುನಾವಣಾ ಆಯೋಗದ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಇರಬೇಕೆಂದು ನಿರ್ಧರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿಕೊಳ್ಳಬೇಕೆಂಬ ಸುಪ್ರೀಂ ಕೋರ್ಟ್‌ನ ಸಲಹೆಯನ್ನು  ನಿರ್ಲಕ್ಷಿಸಿದೆ ಎಂದು ಖರ್ಗೆ ಆರೋಪಿಸಿದರು.

ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪು ಕೋಟೆ ಮೇಲೆ ನಿಂತು, ದೇಶದ ಸ್ವಾತಂತ್ರ್ಯದ ಶ್ರೇಯಸ್ಸು ಆರ್‌ಎಸ್‌ಎಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಸ್ವಯಂಸೇವಕರು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಗಾಗಿ ಕೆಲಸ ಮಾಡಿದ್ದರು. ಬ್ರಿಟಿಷರಿಗೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ಕ್ಷಮೆಯಂತಹ ಕೃಪೆಗಳನ್ನು ಬಯಸುತ್ತಿದ್ದರು ಎಂದು ಖರ್ಗೆ ಹೇಳಿದರು.

ತಮ್ಮ ತಾಯ್ನಾಡಿಗಾಗಿ ರಕ್ತ, ಬೆವರು ಮತ್ತು ಕಣ್ಣೀರು ಸುರಿಸಿದ್ದ ದೇಶದ ಸ್ವಾತಂತ್ರ್ಯ ಹೋರಾಟಗಾರರು, ನರೇಂದ್ರ ಮೋದಿಯವರ ಮಾತು ಕೇಳಿ ತಮ್ಮ ಸಮಾಧಿಯಲ್ಲೇ ನೋವು ಪಡುತ್ತಿರಬಹುದು. ಮೋದಿ ತುಂಬಾ ಅಪಾಯಕಾರಿ ವ್ಯಕ್ತಿ ಎಂದು ತೋರುತ್ತದೆ. ಅವರು ಸಂವಿಧಾನ ಮತ್ತು ಅದರಲ್ಲಿ ಪ್ರತಿಪಾದಿಸಲಾದ ಮತದಾನದ ಹಕ್ಕಿಗೆ ಅಪಾಯ ಉಂಟು ಮಾಡುತ್ತಿದ್ದಾರೆ. ಅವರನ್ನು ಸಿಂಹಾಸನದಿಂದ ಕೆಳಗಿಳಿಸುವ ಮೂಲಕ ಈ ಹಕ್ಕುಗಳನ್ನು ರಕ್ಷಿಸುವುದು ಜನರ ಕರ್ತವ್ಯ. 1942ರ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ವೀರಾವೇಶದಿಂದ ಹೋರಾಡಿದ ಬಿಹಾರದ ಜನರು ಈ ಸಂದರ್ಭಕ್ಕೆ ತಕ್ಕಂತೆ ಎದ್ದು ನಿಲ್ಲುತ್ತಾರೆ ಎಂದು ನನಗೆ ಭರವಸೆ ಇದೆ ಎಂದರು.

ಆರ್‌ಎಸ್‌ಎಸ್ ಯಾವಾಗಲೂ ಪ್ರಜಾಪ್ರಭುತ್ವವನ್ನು ವಿರೋಧಿಸುತ್ತದೆ. ಅದು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಪರಿಚಯಿಸಿದ್ದಕ್ಕಾಗಿ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಿತ್ತು. ಸಬಲೀಕರಣಗೊಳಿಸುತ್ತಿದ್ದ ಮಹಿಳೆಯರು ಒಂದು ದಿನ ನೆಹರು ವಿರುದ್ಧ ತಿರುಗಿ ಬಿದ್ದು ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಆರ್‌ಎಸ್‌ಎಸ್‌ನವರು ಅಪಹಾಸ್ಯ ಮಾಡಿದ್ದರು. ಆ ಮನಸ್ಥಿತಿ ಇಂದಿಗೂ ಅವರಲ್ಲಿ ಚಾಲ್ತಿಯಲ್ಲಿದೆ” ಎಂದು ಹೇಳಿದರು.

ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸಿದ ಖರ್ಗೆ, ಸರ್ಕಾರವನ್ನು ‘ಕುರುಡರು’ ಮತ್ತು ‘ಕಿವುಡರಂತೆ’ ಕಾಣುವ ಜನರು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...