Homeಮುಖಪುಟಬಿಕ್ಕಟ್ಟು ಎದುರಿಸಿದಾಗಲೆಲ್ಲಾ ಭಾರತವನ್ನು ಸಂವಿಧಾನ ಒಗ್ಗೂಡಿಸುತ್ತದೆ: ಸಿಜೆಐ ಬಿಆರ್ ಗವಾಯಿ

ಬಿಕ್ಕಟ್ಟು ಎದುರಿಸಿದಾಗಲೆಲ್ಲಾ ಭಾರತವನ್ನು ಸಂವಿಧಾನ ಒಗ್ಗೂಡಿಸುತ್ತದೆ: ಸಿಜೆಐ ಬಿಆರ್ ಗವಾಯಿ

- Advertisement -
- Advertisement -

ಬಿಕ್ಕಟ್ಟು ಎದುರಿಸಿದಾಗಲೆಲ್ಲಾ ದೇಶವು ಒಗ್ಗಟ್ಟಿನಿಂದ ಮತ್ತು ಬಲಿಷ್ಠವಾಗಿ ಉಳಿದಿದೆ; ಇದರ ಕೀರ್ತಿ ಸಂವಿಧಾನಕ್ಕೆ ಸಲ್ಲಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಶನಿವಾರ ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ವಕೀಲರ ಕೊಠಡಿಗಳು ಮತ್ತು ಬಹು ಹಂತದ ಪಾರ್ಕಿಂಗ್ ಉದ್ಘಾಟನೆಯ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಸಿಜೆಐ ಗವಾಯಿ, “ಸಂವಿಧಾನವನ್ನು ರಚಿಸುವಾಗ ಮತ್ತು ಅದರ ಅಂತಿಮ ಕರಡನ್ನು ಸಂವಿಧಾನ ಸಭೆಯ ಮುಂದೆ ಮಂಡಿಸಿದಾಗ, ಆ ಸಮಯದಲ್ಲಿ ಕೆಲವರು ಸಂವಿಧಾನವು ತುಂಬಾ ಫೆಡರಲ್ ಎಂದು ಹೇಳುತ್ತಿದ್ದರು. ಆದರೆ, ಕೆಲವರು ಅದು ತುಂಬಾ ಏಕೀಕೃತ ಎಂದು ಹೇಳುತ್ತಿದ್ದರು” ಎಂದು ಅವರು ಹೇಳಿದರು.

“ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಸಂವಿಧಾನವು ಸಂಪೂರ್ಣವಾಗಿ ಫೆಡರಲ್ ಅಥವಾ ಸಂಪೂರ್ಣವಾಗಿ ಏಕೀಕೃತವಲ್ಲ ಎಂದು ಉತ್ತರಿಸಿದ್ದರು. ಆದರೆ ನಾನು ನಿಮಗೆ ಹೇಳಬಹುದಾದ ಒಂದು ವಿಷಯವೆಂದರೆ, ಶಾಂತಿ ಮತ್ತು ಯುದ್ಧದ ಸಮಯದಲ್ಲಿ ಭಾರತವನ್ನು ಒಗ್ಗಟ್ಟಿನಿಂದ ಮತ್ತು ಬಲಿಷ್ಠವಾಗಿಡುವ ಸಂವಿಧಾನವನ್ನು ನಾವು ನೀಡಿದ್ದೇವೆ” ಎಂದು ಸಿಜೆಐ ಗವಾಯಿ ಹೇಳಿದರು.

ಸಂವಿಧಾನದಿಂದಾಗಿ ಸ್ವಾತಂತ್ರ್ಯದ ನಂತರ ಭಾರತ ಅಭಿವೃದ್ಧಿಯ ಹಾದಿಯಲ್ಲಿದೆ ಎಂದು ಅವರು ಹೇಳಿದರು.

“ಇಂದು ನಮ್ಮ ನೆರೆಯ ರಾಷ್ಟ್ರಗಳ ಸ್ಥಿತಿ ಹೇಗಿದೆ ಎಂದು ನಾವು ನೋಡುತ್ತಿದ್ದೇವೆ. ಸ್ವಾತಂತ್ರ್ಯದ ನಂತರ ಭಾರತ ಅಭಿವೃದ್ಧಿಯತ್ತ ಪಯಣ ಬೆಳೆಸುತ್ತಿದೆ. ದೇಶದಲ್ಲಿ ಬಿಕ್ಕಟ್ಟು ಉಂಟಾದಾಗಲೆಲ್ಲಾ ಅದು ಒಗ್ಗಟ್ಟಿನಿಂದ ಮತ್ತು ಬಲಿಷ್ಠವಾಗಿ ಉಳಿದಿದೆ. ಇದರ ಕೀರ್ತಿ ಸಂವಿಧಾನಕ್ಕೆ ಸಲ್ಲಬೇಕು” ಎಂದು ಅವರು ಹೇಳಿದರು.

“ನ್ಯಾಯದ ಅಗತ್ಯವಿರುವ ಈ ದೇಶದ ಕೊನೆಯ ನಾಗರಿಕನನ್ನು ತಲುಪುವುದು ನಮ್ಮ ಮೂಲಭೂತ ಕರ್ತವ್ಯ. ಅದು ಶಾಸಕಾಂಗವಾಗಲಿ, ಕಾರ್ಯಾಂಗವಾಗಲಿ ಅಥವಾ ನ್ಯಾಯಾಂಗವಾಗಲಿ, ಪ್ರತಿಯೊಬ್ಬರೂ ಆ ನಾಗರಿಕನನ್ನು ತಲುಪಬೇಕು” ಎಂದು ಸಿಜೆಐ ಸಭೆಗೆ ತಿಳಿಸಿದರು.

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...