Homeಮುಖಪುಟಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

ಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮ ದೇಶದ ಸಂಸತ್ತಿಗೆ ಅದರದೆ ಆದ ಘನತೆ ಗೌರವ ಇದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರೆಲ್ಲರ ಮಾನವನ್ನು  ಕಾಪಾಡುತ್ತ ಬಂದಿದೆ. ನಮ್ಮ ರಾಷ್ಟ್ರ , ಧರ್ಮ ನಿರಪೇಕ್ಷವಾದ ರಾಷ್ಟ್ರವಾದರೂ ಸಹ ಹಲವಾರು ಮತ ಧರ್ಮಗಳನ್ನು ತನ್ನ ಒಡಲಲ್ಲಿ ಇದು ಇಂಬಿಟ್ಟುಕೊಂಡಿದೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಯೂ ತನಗೆ ಇಷ್ಟ ಬಂದ ಧರ್ಮವನ್ನು ಸೇರುವ ಅದರ ತತ್ವಗಳನ್ನು ಅನುಸರಿಸುವ ಸ್ವಾತಂತ್ರ್ಯವಿದೆ. ಹಾಗಂತ ಎಲ್ಲರೂ ಧರ್ಮದ ಅಡಿಯಲ್ಲಿಯೆ ಬದುಕಬೇಕು ಎಂದೆನಿಲ್ಲ. ಅದೆಷ್ಟೋ ಜನರಿಗೆ ಧರ್ಮ ಒಂದು ಅಫೀಮಾಗಿ ಕಾಣಿಸಿದೆ. ಅಂಥವರು ತಮ್ಮ ವಿವೇಚನೆಯಂತೆ ಭಾರತದ ಸೌರ್ವಭೌಮತ್ವಕ್ಕೆ ದಕ್ಕೆಯಾಗದಂತೆ ವರ್ತಿಸುವ ಉದಾಹರಣೆಗಳು ಸಾಕಷ್ಟು ಇವೆ. ಗುಡಿ ಗುಂಡಾರ ಚರ್ಚು ಮಸೀದಿ ಗುರುದ್ವಾರ ಅನುಭವ ಮಂಟಪ ಮುಂತಾದವು ನಮ್ಮಲ್ಲಿ ಸಾಲು ಸಾಲಾಗಿ ಸಿಕ್ಕುತ್ತವೆ. ಆಯಾ ಧರ್ಮಿಯರು ತಮ್ಮ ತಮ್ಮ ನಂಬಿಕೆ ಆಚರಣೆಗಳನ್ನು ಮುನ್ನಡೆಸಿಕೊಂಡು ಹೊರಟಿದ್ದಾರೆ.

ಯಾವುದೆ ಧರ್ಮ ಇನ್ನೊಂದು ಧರ್ಮದ ಮೇಲೆ ಆಕ್ರಮಣ ನಡೆಸಬಾರದು. ಧರ್ಮದ ಮೂಲ ತಳಹದಿಯೆ ದಯೆ, ಪ್ರೀತಿ, ವಿಶ್ವಾಸ, ಅಂತಃಕರಣ ಎಂಬುದನ್ನು ನಾವು ಯಾರೂ ಮರೆಯಬಾರದು. ಆಯಾ ಧರ್ಮದ ಮೂಲಭೂತ ತತ್ವಗಳ ಕುರಿತು ಆರೋಗ್ಯಕರವಾಗಿ ಚಿಂತಿಸಬಹುದೆ ಹೊರತು ಆಕ್ರಮಣಕಾರಿಯಾಗಿ ಅದರ ವಿರುದ್ಧ ದಂಡೆತ್ತಿ ಹೋಗುವುದಲ್ಲ. ಸಮಾಜದಲ್ಲಿ ವಿಚಾರಗಳನ್ನು ಹರಿಬಿಡುವ ಮೂಲಕ ಧರ್ಮದ ಆಚರಣೆಗಳು ತಪ್ಪಾಗಿದ್ದರೆ ಅವನ್ನು ಒಪ್ಪಮಾಡಲು ಶ್ರಮಿಸಬೇಕಾದುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ.

ಮೂಲತಃ ಧರ್ಮ ಸಂಸ್ಥಾಪಕರು ಯಾರಿಗೂ ಕೇಡುಂಟು ಮಾಡದ, ಎಲ್ಲರಿಗೂ ಒಳಿತನ್ನು ಉಂಟು ಮಾಡುವ ತತ್ವಗಳಿಂದ ಧರ್ಮವನ್ನು ಕಟ್ಟಿಕೊಟ್ಟಿದ್ದಾರೆ. ಆದರೆ ಅವನ್ನು ಆಚರಣೆಗೆ ತರಬೇಕಾದ ಮುಲ್ಲಾ ಪಾದ್ರಿ ಪೂಜಾರಿಗಳು ತಮ್ಮ ತಪ್ಪು ಗ್ರಹಿಕೆಯಿಂದ ಮೂಲ ಗ್ರಂಥದ ತತ್ವಗಳನ್ನು ಜಾರಿಗೆ ತರುವಲ್ಲಿ ಸೋತು ಹೋಗಿದ್ದಾರೆ. ಇದರಿಂದಾಗಿ ಧರ್ಮ ವಿವೇಚನೆಯ ಮಾರ್ಗವಾಗುವ ಬದಲು ಇಂದು ಧರ್ಮ ಬಂಧನದವಾಗಿದೆ. ಸ್ವಚ್ಚಂದ ಹಕ್ಕಿಯನ್ನು ಕೂಡಿಹಾಕಿ ಅದರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ.

ಕೃಪೆ: ಪಂಜು ಗಂಗೊಳ್ಳಿ

ಭಾರತದ ಇಂದಿನ ಪರಿಸ್ಥಿತಿ ಎಂದಿಗಿಂತಲೂ ತುಂಬಾ ಭೀಕರವಾಗಿದೆ. ಧರ್ಮದ ಆಶಯಗಳು ಸಂಸತ್ತನ್ನು ಪ್ರವೇಶಿಸಿದ್ದರೆ ಯಾರಿಗೂ ತೊಂದರೆ ಇರುತ್ತಿರಲಿಲ್ಲ. ಆದರೆ  ಅಧರ್ಮದ ಹಿನ್ನೆಲೆಯ ಉಗ್ರವಾದ ನಮ್ಮ ಸಂಸತ್ತನ್ನು ಪ್ರವೇಶಿಸಿದೆ. ಮೊನ್ನೆ ಮೊನ್ನೆಯ ಸಂಸತ್ತಿನ ಆರಂಭದಲ್ಲಿ ಮೊಳಗಿದ ಜೈಶ್ರೀರಾಮ್, ತಕ್ಬಿರ್ ಅಲ್ಲಾಹು ಅಕ್ಬರ್, ಜೈ ಕಾಳಿ ಮಾತೆ ಎಂಬ ಮಾತುಗಳು ಅವರವ ಅಂತಃಕರಣದಿಂದ ಬಂದಿದ್ದರೆ ಯಾವ ಪ್ರಶ್ನೆಯೂ ನಮ್ಮಲ್ಲಿ ಮೊಳೆಯುತ್ತಿರಲಿಲ್ಲ. ಆದರೆ ಆ ಘೋಷಣೆಗಳ ಹಿಂದೆ ದೇಶದ ಜನರ ಭಾವನಾತ್ಮಕ ಮನಸ್ಸುಗಳನ್ನು ಉಪಯೋಗಿಸಿಕೊಂಡು ಮೇಲೇರಬೇಕೆಂಬ ತುಡಿತ ಇವರಲ್ಲಿ ಇದ್ದದ್ದು ಯಾರಿಗಾದರೂ ಕಾಣುತ್ತದೆ. ನಿಜವಾದ ಧರ್ಮದ ತಿರುಳುಗಳು ಓಟ್ ಬ್ಯಾಂಕ್ ಮಾಡಿಕೊಂಡರೆ ಯಾರದೂ ತಕರಾರು ಇಲ್ಲ. ಆದರೆ ಧರ್ಮದ ತತ್ವಗಳನ್ನು ಮೂಲೆಗುಂಪು ಮಾಡಿ, ಆ ತತ್ವಗಳನ್ನು ತಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ಓಟಿನ ರಾಜಕಾರಣ ಮಾಡುವುದು ಇದೆಯಲ್ಲ ಇದು ಜನತೆಯನ್ನು ಗಂಡಾಂತರಕ್ಕೆ ದೂಡಬಲ್ಲುದು.

ಕೃಪೆ: ಪಿ ಮಹಮ್ಮದ್

ಈ ಮನೋಭಾವದ ಹಿನ್ನೆಲೆಯ ಜೈಶ್ರೀರಾಮ ಘೋಷಣೆ ತುಂಬಾ ಅಪಾಯಕಾರಿಯಾದ ಬೆಳವಣಿಗೆ. ಜೈಶ್ರೀರಾಮ ಘೋಷಣೆ ಕೂಗುವುದು ಸಂವಿಧಾನ ವಿರೋಧಿ ಅಲ್ಲ, ಆದರೆ ಆ ಘೋಷಣೆಯೊಳಗೆ ಇನ್ನೊಬ್ಬರ ಕೆರಳಿಸುವುದು, ಅವಮಾನಿಸುವುದು, ತುಚ್ಛವಾಗಿ ಕಾಣುವುದು ಇದೆಯಲ್ಲ ಇದು ಒಳ್ಳೆಯ ಬೆಳವಣಿಗೆ ಅಲ್ಲ. ಜೈ ಶ್ರೀರಾಮ ಘೋಷಣೆ ಕೂಗಿದಾಕ್ಷಣ ಅವರನ್ನು ಮಮತಾ ಬ್ಯಾನರ್ಜಿ ಜೈಲಿಗೆ ಅಟ್ಟುವುದು ಎಷ್ಟು ತಪ್ಪೋ, ಮಮತಾ ಅವರನ್ನು ಕಂಡಾಕ್ಷಣ ಅವರ ಚಿತ್ತಾವಣೆಗಾಗಿ ಜೈ ಶ್ರೀರಾಮ ಕೂಗುವುದು ಕೂಡ ತಪ್ಪು.

ಮತ್ತೊಂದು ಸಂಗತಿ : ಧರ್ಮದ ಆಚರಣೆಗಳು , ತತ್ವಗಳು ತೀರಾ ಖಾಸಗಿಯಾದ ಸಂಗತಿಗಳು. ಗಂಡ ಹೆಂಡತಿಯ ಸಂಬಂಧದಂತೆ ಅದು ಅಂತರಂಗದ ಸತ್ಯ. ಅದನ್ನು ಎಲ್ಲರಿಗೂ ಕಾಣಿಸುವಂತೆ ತೋರಿಸುವ ಅಗತ್ಯತೆ ಕಾಣುವುದಿಲ್ಲ. ಎಲ್ಲರಿಗೂ ಕಾಣಲಿ ಎಂಬಂತೆ ಧರ್ಮದ ಆಚರಣೆಗಳು ಮಾಡುತ್ತಿದ್ದರೆ ಅದು ಕೇವಲ ಆಡಂಬರದ ಆಚರಣೆಯಾಗುತ್ತದೆ. ಅಂತರಂಗದ ಆಚರಣೆ ಆಗಿರುವುದಿಲ್ಲ. ಧರ್ಮ ನಮ್ಮ ನಮ್ಮ ಮನದ ಕೊಳೆಯನ್ನು ತೊಳೆಯಲು ಉಪಯೋಗಿಸಿಕೊಳ್ಳಬೇಕೇ ಹೊರತು, ನಮ್ಮ ಅಂತರಂಗಕ್ಕೆ ಎಲ್ಲಿಯದೋ ಕಸ ಕಡ್ಡಿ ತಂದು ಹಾಕುವುದಕ್ಕೆ ಅಲ್ಲ. ಧರ್ಮ ಹರಿವ ನೀರಿನಂತೆ ನಿರ್ಮಲ. ನಿಷ್ಕಲ್ಮಶ. ಅದು ನಿಂತ ನೀರಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡರೆ ನಮ್ಮ ಸಂಸತ್ ಸದಸ್ಯರು ಭಾರತವನ್ನು ಊಧ್ರ್ವಮುಖದತ್ತ ಕೊಂಡು ಹೋಗಬಲ್ಲರು.

ಸ್ವವಿಮರ್ಶೆ , ಆತ್ಮವಲೋಕನ ಇಲ್ಲದೆ ನಾ ಹೆಚ್ಚು ನೀ ಹೆಚ್ಚು ಎಂಬ ದಾಟಿಯಲ್ಲಿ ಹೊರಟ ಸಂಸದರ ಮಾತು ವರ್ತನೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದೆ ಹೋದರೆ ನಮ್ಮ ಭಾರತದ ಸಂಸತ್ತು ಅಧರ್ಮ ಸಂಸತ್ತಾಗಿ ಮಾರ್ಪಾಟಾಗುತ್ತದೆ. ಸಂತೆಯ ಗದ್ದಲ,  ಬಲಶಾಲಿಯ ನಡೆ ನುಡಿಗಳೆ ಶ್ರೇಷ್ಠ ಎಂಬ ಕಾಡು ನ್ಯಾಯ ಸಂಸತ್ತು ಪ್ರವೇಶಿಸಿದರೆ ದೇಶದ ಜನತೆ ಮತ ಧರ್ಮಗಳ ನೆಪದಲ್ಲಿ ಹತರಾಗುವ ಕಾಲ ದೂರವಿಲ್ಲವೆನಿಸುತ್ತದೆ. ಧರ್ಮ ಅಫೀಮಾಗಿ ಮಾರ್ಪಟ್ಟಾಗ ಇದೆಲ್ಲ ಸಾಧ್ಯವಾಗುತ್ತದೆ. ಭಾರತ ನಿಜವಾದ ಧರ್ಮದ ಆಶಯಗಳನ್ನು ಹೊತ್ತುಕೊಂಡು ಹೋಗಲಿ. ಸಂವಿಧಾನದ ಮಾನವನ್ನು ಸಂಸದರು ಹಾಳು ಮಾಡದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...