Homeಮುಖಪುಟಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

ಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮ ದೇಶದ ಸಂಸತ್ತಿಗೆ ಅದರದೆ ಆದ ಘನತೆ ಗೌರವ ಇದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರೆಲ್ಲರ ಮಾನವನ್ನು  ಕಾಪಾಡುತ್ತ ಬಂದಿದೆ. ನಮ್ಮ ರಾಷ್ಟ್ರ , ಧರ್ಮ ನಿರಪೇಕ್ಷವಾದ ರಾಷ್ಟ್ರವಾದರೂ ಸಹ ಹಲವಾರು ಮತ ಧರ್ಮಗಳನ್ನು ತನ್ನ ಒಡಲಲ್ಲಿ ಇದು ಇಂಬಿಟ್ಟುಕೊಂಡಿದೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಯೂ ತನಗೆ ಇಷ್ಟ ಬಂದ ಧರ್ಮವನ್ನು ಸೇರುವ ಅದರ ತತ್ವಗಳನ್ನು ಅನುಸರಿಸುವ ಸ್ವಾತಂತ್ರ್ಯವಿದೆ. ಹಾಗಂತ ಎಲ್ಲರೂ ಧರ್ಮದ ಅಡಿಯಲ್ಲಿಯೆ ಬದುಕಬೇಕು ಎಂದೆನಿಲ್ಲ. ಅದೆಷ್ಟೋ ಜನರಿಗೆ ಧರ್ಮ ಒಂದು ಅಫೀಮಾಗಿ ಕಾಣಿಸಿದೆ. ಅಂಥವರು ತಮ್ಮ ವಿವೇಚನೆಯಂತೆ ಭಾರತದ ಸೌರ್ವಭೌಮತ್ವಕ್ಕೆ ದಕ್ಕೆಯಾಗದಂತೆ ವರ್ತಿಸುವ ಉದಾಹರಣೆಗಳು ಸಾಕಷ್ಟು ಇವೆ. ಗುಡಿ ಗುಂಡಾರ ಚರ್ಚು ಮಸೀದಿ ಗುರುದ್ವಾರ ಅನುಭವ ಮಂಟಪ ಮುಂತಾದವು ನಮ್ಮಲ್ಲಿ ಸಾಲು ಸಾಲಾಗಿ ಸಿಕ್ಕುತ್ತವೆ. ಆಯಾ ಧರ್ಮಿಯರು ತಮ್ಮ ತಮ್ಮ ನಂಬಿಕೆ ಆಚರಣೆಗಳನ್ನು ಮುನ್ನಡೆಸಿಕೊಂಡು ಹೊರಟಿದ್ದಾರೆ.

ಯಾವುದೆ ಧರ್ಮ ಇನ್ನೊಂದು ಧರ್ಮದ ಮೇಲೆ ಆಕ್ರಮಣ ನಡೆಸಬಾರದು. ಧರ್ಮದ ಮೂಲ ತಳಹದಿಯೆ ದಯೆ, ಪ್ರೀತಿ, ವಿಶ್ವಾಸ, ಅಂತಃಕರಣ ಎಂಬುದನ್ನು ನಾವು ಯಾರೂ ಮರೆಯಬಾರದು. ಆಯಾ ಧರ್ಮದ ಮೂಲಭೂತ ತತ್ವಗಳ ಕುರಿತು ಆರೋಗ್ಯಕರವಾಗಿ ಚಿಂತಿಸಬಹುದೆ ಹೊರತು ಆಕ್ರಮಣಕಾರಿಯಾಗಿ ಅದರ ವಿರುದ್ಧ ದಂಡೆತ್ತಿ ಹೋಗುವುದಲ್ಲ. ಸಮಾಜದಲ್ಲಿ ವಿಚಾರಗಳನ್ನು ಹರಿಬಿಡುವ ಮೂಲಕ ಧರ್ಮದ ಆಚರಣೆಗಳು ತಪ್ಪಾಗಿದ್ದರೆ ಅವನ್ನು ಒಪ್ಪಮಾಡಲು ಶ್ರಮಿಸಬೇಕಾದುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ.

ಮೂಲತಃ ಧರ್ಮ ಸಂಸ್ಥಾಪಕರು ಯಾರಿಗೂ ಕೇಡುಂಟು ಮಾಡದ, ಎಲ್ಲರಿಗೂ ಒಳಿತನ್ನು ಉಂಟು ಮಾಡುವ ತತ್ವಗಳಿಂದ ಧರ್ಮವನ್ನು ಕಟ್ಟಿಕೊಟ್ಟಿದ್ದಾರೆ. ಆದರೆ ಅವನ್ನು ಆಚರಣೆಗೆ ತರಬೇಕಾದ ಮುಲ್ಲಾ ಪಾದ್ರಿ ಪೂಜಾರಿಗಳು ತಮ್ಮ ತಪ್ಪು ಗ್ರಹಿಕೆಯಿಂದ ಮೂಲ ಗ್ರಂಥದ ತತ್ವಗಳನ್ನು ಜಾರಿಗೆ ತರುವಲ್ಲಿ ಸೋತು ಹೋಗಿದ್ದಾರೆ. ಇದರಿಂದಾಗಿ ಧರ್ಮ ವಿವೇಚನೆಯ ಮಾರ್ಗವಾಗುವ ಬದಲು ಇಂದು ಧರ್ಮ ಬಂಧನದವಾಗಿದೆ. ಸ್ವಚ್ಚಂದ ಹಕ್ಕಿಯನ್ನು ಕೂಡಿಹಾಕಿ ಅದರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ.

ಕೃಪೆ: ಪಂಜು ಗಂಗೊಳ್ಳಿ

ಭಾರತದ ಇಂದಿನ ಪರಿಸ್ಥಿತಿ ಎಂದಿಗಿಂತಲೂ ತುಂಬಾ ಭೀಕರವಾಗಿದೆ. ಧರ್ಮದ ಆಶಯಗಳು ಸಂಸತ್ತನ್ನು ಪ್ರವೇಶಿಸಿದ್ದರೆ ಯಾರಿಗೂ ತೊಂದರೆ ಇರುತ್ತಿರಲಿಲ್ಲ. ಆದರೆ  ಅಧರ್ಮದ ಹಿನ್ನೆಲೆಯ ಉಗ್ರವಾದ ನಮ್ಮ ಸಂಸತ್ತನ್ನು ಪ್ರವೇಶಿಸಿದೆ. ಮೊನ್ನೆ ಮೊನ್ನೆಯ ಸಂಸತ್ತಿನ ಆರಂಭದಲ್ಲಿ ಮೊಳಗಿದ ಜೈಶ್ರೀರಾಮ್, ತಕ್ಬಿರ್ ಅಲ್ಲಾಹು ಅಕ್ಬರ್, ಜೈ ಕಾಳಿ ಮಾತೆ ಎಂಬ ಮಾತುಗಳು ಅವರವ ಅಂತಃಕರಣದಿಂದ ಬಂದಿದ್ದರೆ ಯಾವ ಪ್ರಶ್ನೆಯೂ ನಮ್ಮಲ್ಲಿ ಮೊಳೆಯುತ್ತಿರಲಿಲ್ಲ. ಆದರೆ ಆ ಘೋಷಣೆಗಳ ಹಿಂದೆ ದೇಶದ ಜನರ ಭಾವನಾತ್ಮಕ ಮನಸ್ಸುಗಳನ್ನು ಉಪಯೋಗಿಸಿಕೊಂಡು ಮೇಲೇರಬೇಕೆಂಬ ತುಡಿತ ಇವರಲ್ಲಿ ಇದ್ದದ್ದು ಯಾರಿಗಾದರೂ ಕಾಣುತ್ತದೆ. ನಿಜವಾದ ಧರ್ಮದ ತಿರುಳುಗಳು ಓಟ್ ಬ್ಯಾಂಕ್ ಮಾಡಿಕೊಂಡರೆ ಯಾರದೂ ತಕರಾರು ಇಲ್ಲ. ಆದರೆ ಧರ್ಮದ ತತ್ವಗಳನ್ನು ಮೂಲೆಗುಂಪು ಮಾಡಿ, ಆ ತತ್ವಗಳನ್ನು ತಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ಓಟಿನ ರಾಜಕಾರಣ ಮಾಡುವುದು ಇದೆಯಲ್ಲ ಇದು ಜನತೆಯನ್ನು ಗಂಡಾಂತರಕ್ಕೆ ದೂಡಬಲ್ಲುದು.

ಕೃಪೆ: ಪಿ ಮಹಮ್ಮದ್

ಈ ಮನೋಭಾವದ ಹಿನ್ನೆಲೆಯ ಜೈಶ್ರೀರಾಮ ಘೋಷಣೆ ತುಂಬಾ ಅಪಾಯಕಾರಿಯಾದ ಬೆಳವಣಿಗೆ. ಜೈಶ್ರೀರಾಮ ಘೋಷಣೆ ಕೂಗುವುದು ಸಂವಿಧಾನ ವಿರೋಧಿ ಅಲ್ಲ, ಆದರೆ ಆ ಘೋಷಣೆಯೊಳಗೆ ಇನ್ನೊಬ್ಬರ ಕೆರಳಿಸುವುದು, ಅವಮಾನಿಸುವುದು, ತುಚ್ಛವಾಗಿ ಕಾಣುವುದು ಇದೆಯಲ್ಲ ಇದು ಒಳ್ಳೆಯ ಬೆಳವಣಿಗೆ ಅಲ್ಲ. ಜೈ ಶ್ರೀರಾಮ ಘೋಷಣೆ ಕೂಗಿದಾಕ್ಷಣ ಅವರನ್ನು ಮಮತಾ ಬ್ಯಾನರ್ಜಿ ಜೈಲಿಗೆ ಅಟ್ಟುವುದು ಎಷ್ಟು ತಪ್ಪೋ, ಮಮತಾ ಅವರನ್ನು ಕಂಡಾಕ್ಷಣ ಅವರ ಚಿತ್ತಾವಣೆಗಾಗಿ ಜೈ ಶ್ರೀರಾಮ ಕೂಗುವುದು ಕೂಡ ತಪ್ಪು.

ಮತ್ತೊಂದು ಸಂಗತಿ : ಧರ್ಮದ ಆಚರಣೆಗಳು , ತತ್ವಗಳು ತೀರಾ ಖಾಸಗಿಯಾದ ಸಂಗತಿಗಳು. ಗಂಡ ಹೆಂಡತಿಯ ಸಂಬಂಧದಂತೆ ಅದು ಅಂತರಂಗದ ಸತ್ಯ. ಅದನ್ನು ಎಲ್ಲರಿಗೂ ಕಾಣಿಸುವಂತೆ ತೋರಿಸುವ ಅಗತ್ಯತೆ ಕಾಣುವುದಿಲ್ಲ. ಎಲ್ಲರಿಗೂ ಕಾಣಲಿ ಎಂಬಂತೆ ಧರ್ಮದ ಆಚರಣೆಗಳು ಮಾಡುತ್ತಿದ್ದರೆ ಅದು ಕೇವಲ ಆಡಂಬರದ ಆಚರಣೆಯಾಗುತ್ತದೆ. ಅಂತರಂಗದ ಆಚರಣೆ ಆಗಿರುವುದಿಲ್ಲ. ಧರ್ಮ ನಮ್ಮ ನಮ್ಮ ಮನದ ಕೊಳೆಯನ್ನು ತೊಳೆಯಲು ಉಪಯೋಗಿಸಿಕೊಳ್ಳಬೇಕೇ ಹೊರತು, ನಮ್ಮ ಅಂತರಂಗಕ್ಕೆ ಎಲ್ಲಿಯದೋ ಕಸ ಕಡ್ಡಿ ತಂದು ಹಾಕುವುದಕ್ಕೆ ಅಲ್ಲ. ಧರ್ಮ ಹರಿವ ನೀರಿನಂತೆ ನಿರ್ಮಲ. ನಿಷ್ಕಲ್ಮಶ. ಅದು ನಿಂತ ನೀರಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡರೆ ನಮ್ಮ ಸಂಸತ್ ಸದಸ್ಯರು ಭಾರತವನ್ನು ಊಧ್ರ್ವಮುಖದತ್ತ ಕೊಂಡು ಹೋಗಬಲ್ಲರು.

ಸ್ವವಿಮರ್ಶೆ , ಆತ್ಮವಲೋಕನ ಇಲ್ಲದೆ ನಾ ಹೆಚ್ಚು ನೀ ಹೆಚ್ಚು ಎಂಬ ದಾಟಿಯಲ್ಲಿ ಹೊರಟ ಸಂಸದರ ಮಾತು ವರ್ತನೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದೆ ಹೋದರೆ ನಮ್ಮ ಭಾರತದ ಸಂಸತ್ತು ಅಧರ್ಮ ಸಂಸತ್ತಾಗಿ ಮಾರ್ಪಾಟಾಗುತ್ತದೆ. ಸಂತೆಯ ಗದ್ದಲ,  ಬಲಶಾಲಿಯ ನಡೆ ನುಡಿಗಳೆ ಶ್ರೇಷ್ಠ ಎಂಬ ಕಾಡು ನ್ಯಾಯ ಸಂಸತ್ತು ಪ್ರವೇಶಿಸಿದರೆ ದೇಶದ ಜನತೆ ಮತ ಧರ್ಮಗಳ ನೆಪದಲ್ಲಿ ಹತರಾಗುವ ಕಾಲ ದೂರವಿಲ್ಲವೆನಿಸುತ್ತದೆ. ಧರ್ಮ ಅಫೀಮಾಗಿ ಮಾರ್ಪಟ್ಟಾಗ ಇದೆಲ್ಲ ಸಾಧ್ಯವಾಗುತ್ತದೆ. ಭಾರತ ನಿಜವಾದ ಧರ್ಮದ ಆಶಯಗಳನ್ನು ಹೊತ್ತುಕೊಂಡು ಹೋಗಲಿ. ಸಂವಿಧಾನದ ಮಾನವನ್ನು ಸಂಸದರು ಹಾಳು ಮಾಡದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...