Homeಮುಖಪುಟಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

ಸಂವಿಧಾನದ ಆಶಯ ಮಣ್ಣು ಪಾಲು ಮಾಡಲಿರುವ ಸಂಸದರು

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮ ದೇಶದ ಸಂಸತ್ತಿಗೆ ಅದರದೆ ಆದ ಘನತೆ ಗೌರವ ಇದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರೆಲ್ಲರ ಮಾನವನ್ನು  ಕಾಪಾಡುತ್ತ ಬಂದಿದೆ. ನಮ್ಮ ರಾಷ್ಟ್ರ , ಧರ್ಮ ನಿರಪೇಕ್ಷವಾದ ರಾಷ್ಟ್ರವಾದರೂ ಸಹ ಹಲವಾರು ಮತ ಧರ್ಮಗಳನ್ನು ತನ್ನ ಒಡಲಲ್ಲಿ ಇದು ಇಂಬಿಟ್ಟುಕೊಂಡಿದೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಯೂ ತನಗೆ ಇಷ್ಟ ಬಂದ ಧರ್ಮವನ್ನು ಸೇರುವ ಅದರ ತತ್ವಗಳನ್ನು ಅನುಸರಿಸುವ ಸ್ವಾತಂತ್ರ್ಯವಿದೆ. ಹಾಗಂತ ಎಲ್ಲರೂ ಧರ್ಮದ ಅಡಿಯಲ್ಲಿಯೆ ಬದುಕಬೇಕು ಎಂದೆನಿಲ್ಲ. ಅದೆಷ್ಟೋ ಜನರಿಗೆ ಧರ್ಮ ಒಂದು ಅಫೀಮಾಗಿ ಕಾಣಿಸಿದೆ. ಅಂಥವರು ತಮ್ಮ ವಿವೇಚನೆಯಂತೆ ಭಾರತದ ಸೌರ್ವಭೌಮತ್ವಕ್ಕೆ ದಕ್ಕೆಯಾಗದಂತೆ ವರ್ತಿಸುವ ಉದಾಹರಣೆಗಳು ಸಾಕಷ್ಟು ಇವೆ. ಗುಡಿ ಗುಂಡಾರ ಚರ್ಚು ಮಸೀದಿ ಗುರುದ್ವಾರ ಅನುಭವ ಮಂಟಪ ಮುಂತಾದವು ನಮ್ಮಲ್ಲಿ ಸಾಲು ಸಾಲಾಗಿ ಸಿಕ್ಕುತ್ತವೆ. ಆಯಾ ಧರ್ಮಿಯರು ತಮ್ಮ ತಮ್ಮ ನಂಬಿಕೆ ಆಚರಣೆಗಳನ್ನು ಮುನ್ನಡೆಸಿಕೊಂಡು ಹೊರಟಿದ್ದಾರೆ.

ಯಾವುದೆ ಧರ್ಮ ಇನ್ನೊಂದು ಧರ್ಮದ ಮೇಲೆ ಆಕ್ರಮಣ ನಡೆಸಬಾರದು. ಧರ್ಮದ ಮೂಲ ತಳಹದಿಯೆ ದಯೆ, ಪ್ರೀತಿ, ವಿಶ್ವಾಸ, ಅಂತಃಕರಣ ಎಂಬುದನ್ನು ನಾವು ಯಾರೂ ಮರೆಯಬಾರದು. ಆಯಾ ಧರ್ಮದ ಮೂಲಭೂತ ತತ್ವಗಳ ಕುರಿತು ಆರೋಗ್ಯಕರವಾಗಿ ಚಿಂತಿಸಬಹುದೆ ಹೊರತು ಆಕ್ರಮಣಕಾರಿಯಾಗಿ ಅದರ ವಿರುದ್ಧ ದಂಡೆತ್ತಿ ಹೋಗುವುದಲ್ಲ. ಸಮಾಜದಲ್ಲಿ ವಿಚಾರಗಳನ್ನು ಹರಿಬಿಡುವ ಮೂಲಕ ಧರ್ಮದ ಆಚರಣೆಗಳು ತಪ್ಪಾಗಿದ್ದರೆ ಅವನ್ನು ಒಪ್ಪಮಾಡಲು ಶ್ರಮಿಸಬೇಕಾದುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ.

ಮೂಲತಃ ಧರ್ಮ ಸಂಸ್ಥಾಪಕರು ಯಾರಿಗೂ ಕೇಡುಂಟು ಮಾಡದ, ಎಲ್ಲರಿಗೂ ಒಳಿತನ್ನು ಉಂಟು ಮಾಡುವ ತತ್ವಗಳಿಂದ ಧರ್ಮವನ್ನು ಕಟ್ಟಿಕೊಟ್ಟಿದ್ದಾರೆ. ಆದರೆ ಅವನ್ನು ಆಚರಣೆಗೆ ತರಬೇಕಾದ ಮುಲ್ಲಾ ಪಾದ್ರಿ ಪೂಜಾರಿಗಳು ತಮ್ಮ ತಪ್ಪು ಗ್ರಹಿಕೆಯಿಂದ ಮೂಲ ಗ್ರಂಥದ ತತ್ವಗಳನ್ನು ಜಾರಿಗೆ ತರುವಲ್ಲಿ ಸೋತು ಹೋಗಿದ್ದಾರೆ. ಇದರಿಂದಾಗಿ ಧರ್ಮ ವಿವೇಚನೆಯ ಮಾರ್ಗವಾಗುವ ಬದಲು ಇಂದು ಧರ್ಮ ಬಂಧನದವಾಗಿದೆ. ಸ್ವಚ್ಚಂದ ಹಕ್ಕಿಯನ್ನು ಕೂಡಿಹಾಕಿ ಅದರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ.

ಕೃಪೆ: ಪಂಜು ಗಂಗೊಳ್ಳಿ

ಭಾರತದ ಇಂದಿನ ಪರಿಸ್ಥಿತಿ ಎಂದಿಗಿಂತಲೂ ತುಂಬಾ ಭೀಕರವಾಗಿದೆ. ಧರ್ಮದ ಆಶಯಗಳು ಸಂಸತ್ತನ್ನು ಪ್ರವೇಶಿಸಿದ್ದರೆ ಯಾರಿಗೂ ತೊಂದರೆ ಇರುತ್ತಿರಲಿಲ್ಲ. ಆದರೆ  ಅಧರ್ಮದ ಹಿನ್ನೆಲೆಯ ಉಗ್ರವಾದ ನಮ್ಮ ಸಂಸತ್ತನ್ನು ಪ್ರವೇಶಿಸಿದೆ. ಮೊನ್ನೆ ಮೊನ್ನೆಯ ಸಂಸತ್ತಿನ ಆರಂಭದಲ್ಲಿ ಮೊಳಗಿದ ಜೈಶ್ರೀರಾಮ್, ತಕ್ಬಿರ್ ಅಲ್ಲಾಹು ಅಕ್ಬರ್, ಜೈ ಕಾಳಿ ಮಾತೆ ಎಂಬ ಮಾತುಗಳು ಅವರವ ಅಂತಃಕರಣದಿಂದ ಬಂದಿದ್ದರೆ ಯಾವ ಪ್ರಶ್ನೆಯೂ ನಮ್ಮಲ್ಲಿ ಮೊಳೆಯುತ್ತಿರಲಿಲ್ಲ. ಆದರೆ ಆ ಘೋಷಣೆಗಳ ಹಿಂದೆ ದೇಶದ ಜನರ ಭಾವನಾತ್ಮಕ ಮನಸ್ಸುಗಳನ್ನು ಉಪಯೋಗಿಸಿಕೊಂಡು ಮೇಲೇರಬೇಕೆಂಬ ತುಡಿತ ಇವರಲ್ಲಿ ಇದ್ದದ್ದು ಯಾರಿಗಾದರೂ ಕಾಣುತ್ತದೆ. ನಿಜವಾದ ಧರ್ಮದ ತಿರುಳುಗಳು ಓಟ್ ಬ್ಯಾಂಕ್ ಮಾಡಿಕೊಂಡರೆ ಯಾರದೂ ತಕರಾರು ಇಲ್ಲ. ಆದರೆ ಧರ್ಮದ ತತ್ವಗಳನ್ನು ಮೂಲೆಗುಂಪು ಮಾಡಿ, ಆ ತತ್ವಗಳನ್ನು ತಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ಓಟಿನ ರಾಜಕಾರಣ ಮಾಡುವುದು ಇದೆಯಲ್ಲ ಇದು ಜನತೆಯನ್ನು ಗಂಡಾಂತರಕ್ಕೆ ದೂಡಬಲ್ಲುದು.

ಕೃಪೆ: ಪಿ ಮಹಮ್ಮದ್

ಈ ಮನೋಭಾವದ ಹಿನ್ನೆಲೆಯ ಜೈಶ್ರೀರಾಮ ಘೋಷಣೆ ತುಂಬಾ ಅಪಾಯಕಾರಿಯಾದ ಬೆಳವಣಿಗೆ. ಜೈಶ್ರೀರಾಮ ಘೋಷಣೆ ಕೂಗುವುದು ಸಂವಿಧಾನ ವಿರೋಧಿ ಅಲ್ಲ, ಆದರೆ ಆ ಘೋಷಣೆಯೊಳಗೆ ಇನ್ನೊಬ್ಬರ ಕೆರಳಿಸುವುದು, ಅವಮಾನಿಸುವುದು, ತುಚ್ಛವಾಗಿ ಕಾಣುವುದು ಇದೆಯಲ್ಲ ಇದು ಒಳ್ಳೆಯ ಬೆಳವಣಿಗೆ ಅಲ್ಲ. ಜೈ ಶ್ರೀರಾಮ ಘೋಷಣೆ ಕೂಗಿದಾಕ್ಷಣ ಅವರನ್ನು ಮಮತಾ ಬ್ಯಾನರ್ಜಿ ಜೈಲಿಗೆ ಅಟ್ಟುವುದು ಎಷ್ಟು ತಪ್ಪೋ, ಮಮತಾ ಅವರನ್ನು ಕಂಡಾಕ್ಷಣ ಅವರ ಚಿತ್ತಾವಣೆಗಾಗಿ ಜೈ ಶ್ರೀರಾಮ ಕೂಗುವುದು ಕೂಡ ತಪ್ಪು.

ಮತ್ತೊಂದು ಸಂಗತಿ : ಧರ್ಮದ ಆಚರಣೆಗಳು , ತತ್ವಗಳು ತೀರಾ ಖಾಸಗಿಯಾದ ಸಂಗತಿಗಳು. ಗಂಡ ಹೆಂಡತಿಯ ಸಂಬಂಧದಂತೆ ಅದು ಅಂತರಂಗದ ಸತ್ಯ. ಅದನ್ನು ಎಲ್ಲರಿಗೂ ಕಾಣಿಸುವಂತೆ ತೋರಿಸುವ ಅಗತ್ಯತೆ ಕಾಣುವುದಿಲ್ಲ. ಎಲ್ಲರಿಗೂ ಕಾಣಲಿ ಎಂಬಂತೆ ಧರ್ಮದ ಆಚರಣೆಗಳು ಮಾಡುತ್ತಿದ್ದರೆ ಅದು ಕೇವಲ ಆಡಂಬರದ ಆಚರಣೆಯಾಗುತ್ತದೆ. ಅಂತರಂಗದ ಆಚರಣೆ ಆಗಿರುವುದಿಲ್ಲ. ಧರ್ಮ ನಮ್ಮ ನಮ್ಮ ಮನದ ಕೊಳೆಯನ್ನು ತೊಳೆಯಲು ಉಪಯೋಗಿಸಿಕೊಳ್ಳಬೇಕೇ ಹೊರತು, ನಮ್ಮ ಅಂತರಂಗಕ್ಕೆ ಎಲ್ಲಿಯದೋ ಕಸ ಕಡ್ಡಿ ತಂದು ಹಾಕುವುದಕ್ಕೆ ಅಲ್ಲ. ಧರ್ಮ ಹರಿವ ನೀರಿನಂತೆ ನಿರ್ಮಲ. ನಿಷ್ಕಲ್ಮಶ. ಅದು ನಿಂತ ನೀರಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡರೆ ನಮ್ಮ ಸಂಸತ್ ಸದಸ್ಯರು ಭಾರತವನ್ನು ಊಧ್ರ್ವಮುಖದತ್ತ ಕೊಂಡು ಹೋಗಬಲ್ಲರು.

ಸ್ವವಿಮರ್ಶೆ , ಆತ್ಮವಲೋಕನ ಇಲ್ಲದೆ ನಾ ಹೆಚ್ಚು ನೀ ಹೆಚ್ಚು ಎಂಬ ದಾಟಿಯಲ್ಲಿ ಹೊರಟ ಸಂಸದರ ಮಾತು ವರ್ತನೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದೆ ಹೋದರೆ ನಮ್ಮ ಭಾರತದ ಸಂಸತ್ತು ಅಧರ್ಮ ಸಂಸತ್ತಾಗಿ ಮಾರ್ಪಾಟಾಗುತ್ತದೆ. ಸಂತೆಯ ಗದ್ದಲ,  ಬಲಶಾಲಿಯ ನಡೆ ನುಡಿಗಳೆ ಶ್ರೇಷ್ಠ ಎಂಬ ಕಾಡು ನ್ಯಾಯ ಸಂಸತ್ತು ಪ್ರವೇಶಿಸಿದರೆ ದೇಶದ ಜನತೆ ಮತ ಧರ್ಮಗಳ ನೆಪದಲ್ಲಿ ಹತರಾಗುವ ಕಾಲ ದೂರವಿಲ್ಲವೆನಿಸುತ್ತದೆ. ಧರ್ಮ ಅಫೀಮಾಗಿ ಮಾರ್ಪಟ್ಟಾಗ ಇದೆಲ್ಲ ಸಾಧ್ಯವಾಗುತ್ತದೆ. ಭಾರತ ನಿಜವಾದ ಧರ್ಮದ ಆಶಯಗಳನ್ನು ಹೊತ್ತುಕೊಂಡು ಹೋಗಲಿ. ಸಂವಿಧಾನದ ಮಾನವನ್ನು ಸಂಸದರು ಹಾಳು ಮಾಡದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...