Homeಕರ್ನಾಟಕಬೆಂಗಳೂರು | ಜ.23ರಂದು ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್‍ಯಾಲಿ

ಬೆಂಗಳೂರು | ಜ.23ರಂದು ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲು ರಾಜ್ಯದ ದಲಿತ ಸಂಘಟನೆಗಳು ಮುಂದಾಗಿವೆ.

ಇಂದು (ಜ.18) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪ್ರಮುಖರು, “ಜನವರಿ 23ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್‌) ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. 20 ರಿಂದ 30 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘಟನೆಗಳು ಪ್ರತಿಭಟನಾ ರ್‍ಯಾಲಿ ನಡೆಸಲು ಮುಂದಾಗಿವೆ. ಅವುಗಳು ಹೀಗಿವೆ.. (ಪ್ರೆಸ್‌ ನೋಟ್‌ನಲ್ಲಿದ್ದಂತೆ) 

  • ಗೃಹಮಂತ್ರಿ ಅಮಿತ್ ಶಾ ಸಂಪುಟದಿಂದ ವಜಾ ಆಗಬೇಕು ಮತ್ತು ಅವರು ಮಾಡಿದ ತಪ್ಪಿಗಾಗಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮೆ ಕೇಳಬೇಕು. ಅಲ್ಲಿಯವರೆಗೂ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ.
  • ಅಹಿಂದ ಸಮುದಾಯಗಳ ಸರ್ವೋಚ್ಚ ನಾಯಕ ಹಾಗೂ ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಸ್ವಾಭಿಮಾನಿ ದಲಿತ ನಾಯಕ ಪ್ರಿಯಾಂಕ್ ಖರ್ಗೆ ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ತೇಜೋವಧೆ ಮಾಡಲು ಯತ್ನಿಸುತ್ತಿರುವ ಬಿಜೆಪಿ ತನ್ನ ಕುತಂತ್ರಗಳನ್ನು ಕೂಡಲೇ ನಿಲ್ಲಿಸಬೇಕು.
  • ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ಕಾಂತರಾಜು ಆಯೋಗದ ಜಾತಿ ಜನಗಣತಿ ವರದಿಯನ್ನು ಯಾವುದೇ ನೆಪ ಹೇಳದೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕಡ್ಡಾಯವಾಗಿ ಮಂಡಿಸಿ, ಅನುಷ್ಠಾನಗೊಳಿಸಬೇಕು.
  • ದಲಿತ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಕೂಡಲೇ ದಲಿತ ಸಂಘಟನೆಗಳ ಸಭೆಯನ್ನು ಕರೆಯಬೇಕು.

2014ರಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಇಡೀ ದೇಶವನ್ನು ಹಿಂಚಲನೆಗೆ ದೂಡಲಾಗಿದೆ. ಚಾತುರ್ವರ್ಣ ವೈದಿಕ ಸಿದ್ದಾಂತದ ಪ್ರತಿಪಾದಕರಾದ ಮೋದಿ ಮತ್ತು ಅಮಿತ್‌ ಶಾ ಸಾಂವಿಧಾನಿಕವಾಗಿ ಮತ್ತು ಪ್ರಜಾಸತಾತ್ಮಕವಾಗಿ ಆಡಳಿತ ನಡೆಸದೆ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಬಳಸಿಕೊಂಡು ಇಡೀ ದೇಶವನ್ನು ಭಯ ಮತ್ತು ತಲ್ಲಣಗಳಿಗೆ ದೂಡಿದ್ದಾರೆ. ಎಲ್ಲಾ ಪ್ರಜಾಸತಾತ್ಮಕ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು, ಮೌಲ್ಯಗಳನ್ನು ನಾಶ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಸುಳ್ಳು ಮೊಕದ್ದಮೆಗಳನ್ನು ಹೂಡಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಅವರನ್ನೆಲ್ಲ ಜೈಲಿಗೆ ತಳ್ಳಲಾಗುತ್ತಿದೆ. ಇಲ್ಲವೇ ಬೆದರಿಸಿ ಬಾಯಿ ಮುಚ್ಚಿಸಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಮುಖರಾದ ಮಾವಳ್ಳಿ ಶಂಕರ್, ಎನ್‌. ವೆಂಕಟೇಶ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್‌ ಮತ್ತು ಜೀವನಹಳ್ಳ ವೆಂಕಟೇಶ್ ಇದ್ದರು.

ಇದನ್ನೂ ಓದಿ : ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...