Homeಮುಖಪುಟಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ, ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ  ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ವಯನಾಡ್ ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಪಡಿಂಜರಥರ ರಸ್ತೆಯುದ್ದಕ್ಕೂ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ, ದೇಶದ ಒಗ್ಗಟ್ಟು, ಮತ್ತು ಏಕತೆಗಾಗಿ ಅಜ್ಜಿ ಇಂದಿರಾ ಗಾಂಧಿ ಮತ್ತು ತಂದೆ ರಾಜೀವ್ ಅವರ ತ್ಯಾಗವನ್ನು ನೆನಪಿಸಿಕೊಂಡಿದ್ದಾರೆ. ಈ ಚುನಾವಣೆಯು ಸಂವಿಧಾನವನ್ನು ರಕ್ಷಿಸಲು ಬಯಸುವವರು ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುವವರ ನಡುವಿನ ಹೋರಾಟವಾಗಿದೆ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಹೇಳಿದರು.

ಒಂದೆಡೆ, ಒಬ್ಬ ನಾಯಕ, ಒಂದು ಭಾಷೆ ಮತ್ತು ಒಂದು ರಾಷ್ಟ್ರದ ಕಲ್ಪನೆ ಇದೆ ಮತ್ತು ಇನ್ನೊಂದೆಡೆ ಭಾರತದ ಕಲ್ಪನೆಯಿದೆ. ಒಂದು ಭಾಷೆಯ ಕಲ್ಪನೆಯು ಪ್ರತಿಯೊಬ್ಬ ಕೇರಳೀಯನಿಗೆ ಅವಮಾನವಾಗಿದೆ. ಮಲಯಾಳಂ ಕೇವಲ ಒಂದು ಭಾಷೆಯಲ್ಲ, ಅದು ಸಂಸ್ಕೃತಿ ಮತ್ತು ಜೀವನ ವಿಧಾನವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರ್ಯಾಲಿಯಲ್ಲಿ ಅನೇಕ ಮುಸ್ಲಿಂ ಮಹಿಳೆಯರೂ ತಮ್ಮ ಮಕ್ಕಳೊಂದಿಗೆ  ಭಾಗವಹಿಸಿದ್ದರು. ತನ್ನ ಕಾರಿನಿಂದ, ರಸ್ತೆಯಲ್ಲಿ ತುಂಬಿದ್ದ ಸಾವಿರಾರು ಜನರತ್ತ ರಾಹುಲ್ ಕೈಬೀಸಿ ವಂದನೆಯನ್ನು ಸಲ್ಲಿಸಿದ್ದಾರೆ. ರ್ಯಾಲಿಯಲ್ಲಿ  ಕಾಂಗ್ರೆಸ್ ಅಲ್ಲದೆ ಅದರ ಮಿತ್ರಪಕ್ಷಗಳ ವಿಶೇಷವಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಯಾವುದೇ ಧ್ವಜಗಳು ಇರಲಿಲ್ಲ. ಬದಲಾಗಿ ಜನರು ರಾಹುಲ್ ಅವರ ಫೋಟೋಗಳನ್ನು ಹಿಡಿದಿದ್ದರು.

ಒಂದು ರಾಷ್ಟ್ರ, ಒಂದು ಭಾಷೆ ಮತ್ತು ಒಂದು ಸಂಸ್ಕೃತಿ ಎಂದು ಹೇಳುವ ಯಾವುದೇ ಭಾರತೀಯನಿಗೆ ಭಾರತ ಅರ್ಥವಾಗುವುದಿಲ್ಲ. ಒಬ್ಬ ನಾಯಕ, ಒಂದು ಭಾಷೆಯನ್ನೇ ಹೇರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಕೇರಳವನ್ನು ನಾಗ್ಪುರದಿಂದ ಏಕೆ ಆಳಬೇಕು. ಯಾರವರು? ಕೇರಳವನ್ನು ಇಲ್ಲಿಂದ, ರಾಜ್ಯದ ಬೀದಿಗಳು ಮತ್ತು ಹಳ್ಳಿಗಳಿಂದ ಆಳಬೇಕು. ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯವರ ವೈಯಕ್ತಿಕ ಆಸ್ತಿಯಲ್ಲ. ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ. ಪ್ರತಿನಿತ್ಯ ಕೆಲವು ಬಿಜೆಪಿ ಸಂಸದರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುವುದನ್ನು ಕೇಳುತ್ತೀರಿ. ಸಂವಿಧಾನವನ್ನು ಬದಲಾಯಿಸಲು ಆರೆಸ್ಸೆಸ್‌ಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ವಿಷಯವು ವಯನಾಡ್‌ಗೆ ದೊಡ್ಡ ಸಮಸ್ಯೆಯಾಗಿದೆ. ರಾತ್ರಿ ಸಂಚಾರ ನಿಷೇಧವೂ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗಿದ್ದೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಅವರ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸುತ್ತೇವೆ. ನಾವು ಕೇಂದ್ರದಲ್ಲಿ ಮತ್ತು ಕೇರಳದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...