Homeಮುಖಪುಟಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ, ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ  ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ವಯನಾಡ್ ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಪಡಿಂಜರಥರ ರಸ್ತೆಯುದ್ದಕ್ಕೂ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ, ದೇಶದ ಒಗ್ಗಟ್ಟು, ಮತ್ತು ಏಕತೆಗಾಗಿ ಅಜ್ಜಿ ಇಂದಿರಾ ಗಾಂಧಿ ಮತ್ತು ತಂದೆ ರಾಜೀವ್ ಅವರ ತ್ಯಾಗವನ್ನು ನೆನಪಿಸಿಕೊಂಡಿದ್ದಾರೆ. ಈ ಚುನಾವಣೆಯು ಸಂವಿಧಾನವನ್ನು ರಕ್ಷಿಸಲು ಬಯಸುವವರು ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುವವರ ನಡುವಿನ ಹೋರಾಟವಾಗಿದೆ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಹೇಳಿದರು.

ಒಂದೆಡೆ, ಒಬ್ಬ ನಾಯಕ, ಒಂದು ಭಾಷೆ ಮತ್ತು ಒಂದು ರಾಷ್ಟ್ರದ ಕಲ್ಪನೆ ಇದೆ ಮತ್ತು ಇನ್ನೊಂದೆಡೆ ಭಾರತದ ಕಲ್ಪನೆಯಿದೆ. ಒಂದು ಭಾಷೆಯ ಕಲ್ಪನೆಯು ಪ್ರತಿಯೊಬ್ಬ ಕೇರಳೀಯನಿಗೆ ಅವಮಾನವಾಗಿದೆ. ಮಲಯಾಳಂ ಕೇವಲ ಒಂದು ಭಾಷೆಯಲ್ಲ, ಅದು ಸಂಸ್ಕೃತಿ ಮತ್ತು ಜೀವನ ವಿಧಾನವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರ್ಯಾಲಿಯಲ್ಲಿ ಅನೇಕ ಮುಸ್ಲಿಂ ಮಹಿಳೆಯರೂ ತಮ್ಮ ಮಕ್ಕಳೊಂದಿಗೆ  ಭಾಗವಹಿಸಿದ್ದರು. ತನ್ನ ಕಾರಿನಿಂದ, ರಸ್ತೆಯಲ್ಲಿ ತುಂಬಿದ್ದ ಸಾವಿರಾರು ಜನರತ್ತ ರಾಹುಲ್ ಕೈಬೀಸಿ ವಂದನೆಯನ್ನು ಸಲ್ಲಿಸಿದ್ದಾರೆ. ರ್ಯಾಲಿಯಲ್ಲಿ  ಕಾಂಗ್ರೆಸ್ ಅಲ್ಲದೆ ಅದರ ಮಿತ್ರಪಕ್ಷಗಳ ವಿಶೇಷವಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಯಾವುದೇ ಧ್ವಜಗಳು ಇರಲಿಲ್ಲ. ಬದಲಾಗಿ ಜನರು ರಾಹುಲ್ ಅವರ ಫೋಟೋಗಳನ್ನು ಹಿಡಿದಿದ್ದರು.

ಒಂದು ರಾಷ್ಟ್ರ, ಒಂದು ಭಾಷೆ ಮತ್ತು ಒಂದು ಸಂಸ್ಕೃತಿ ಎಂದು ಹೇಳುವ ಯಾವುದೇ ಭಾರತೀಯನಿಗೆ ಭಾರತ ಅರ್ಥವಾಗುವುದಿಲ್ಲ. ಒಬ್ಬ ನಾಯಕ, ಒಂದು ಭಾಷೆಯನ್ನೇ ಹೇರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಕೇರಳವನ್ನು ನಾಗ್ಪುರದಿಂದ ಏಕೆ ಆಳಬೇಕು. ಯಾರವರು? ಕೇರಳವನ್ನು ಇಲ್ಲಿಂದ, ರಾಜ್ಯದ ಬೀದಿಗಳು ಮತ್ತು ಹಳ್ಳಿಗಳಿಂದ ಆಳಬೇಕು. ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯವರ ವೈಯಕ್ತಿಕ ಆಸ್ತಿಯಲ್ಲ. ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ. ಪ್ರತಿನಿತ್ಯ ಕೆಲವು ಬಿಜೆಪಿ ಸಂಸದರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುವುದನ್ನು ಕೇಳುತ್ತೀರಿ. ಸಂವಿಧಾನವನ್ನು ಬದಲಾಯಿಸಲು ಆರೆಸ್ಸೆಸ್‌ಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ವಿಷಯವು ವಯನಾಡ್‌ಗೆ ದೊಡ್ಡ ಸಮಸ್ಯೆಯಾಗಿದೆ. ರಾತ್ರಿ ಸಂಚಾರ ನಿಷೇಧವೂ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗಿದ್ದೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಅವರ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸುತ್ತೇವೆ. ನಾವು ಕೇಂದ್ರದಲ್ಲಿ ಮತ್ತು ಕೇರಳದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...