Homeಅಂಕಣಗಳುಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

- Advertisement -
- Advertisement -

2017ಅನ್ನಿಸತ್ತೆ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ’ಕಾನ್ಸ್ಟಿಟ್ಯೂಶನ್’ ಎಂಬ ಕ್ರೊಯೇಶಿಯನ್ ಸಿನಿಮಾದ ಪ್ರದರ್ಶನ ಇತ್ತು. ನಾಲ್ಕು ಮುಖ್ಯ ಪಾತ್ರಗಳು, ಅವುಗಳ ನಡುವಿನ ಪೂರ್ವಾಗ್ರಹಗಳು-ಭಿನ್ನಾಭಿಪ್ರಾಯಗಳು ಮತ್ತವುಗಳನ್ನು ಅವರೆಲ್ಲರೂ ಕಳಚಿಕೊಳ್ಳುವ ಅದ್ಭುತ ನಿರೂಪಣೆಯಿದ್ದ ಸಿನಿಮಾವದು.

ವೀಕೋ ಕ್ರೊಯೇಶಿಯನ್ ಪ್ರೊಫೆಸರ್ ಮತ್ತು ಹೋಮೋಸೆಕ್ಷುಯಲ್. ಗಂಡಸಿನ ಬಟ್ಟೆ ತೊಟ್ಟು ಕಾಲೇಜಿನಲ್ಲಿ ಪಾಠ ಮಾಡುವ ಪ್ರೊಫೆಸರ್ ಮನೆಯಲ್ಲಿ ಹೆಂಗಸಿನ ಬಟ್ಟೆ ಹಾಕಿ, ಮಡಿದಿರುವ ತನ್ನ ಪ್ರಿಯಕರನ ನೆನಪಿನಲ್ಲಿ ಪರಿತಪಿಸುತ್ತಿರುತ್ತಾನೆ. ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ಹಿಟ್ಲರ್‌ನ ನಾಜಿ ಸೇನೆಯ ಜೊತೆಯಾಗಿ ಹೋರಾಡಿದವರು. ಮಗನ ಸೆಕ್ಷುಯಾಲಿಟಿ ಬಗ್ಗೆ ತನ್ನ ಕೊನೆಯ ದಿನಗಳಲ್ಲೂ ಇನ್ನೂ ಕೋಪ ಇಳಿದಿಲ್ಲ. ಇದರ ಜೊತೆಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಕೆಲವರು ಪ್ರೊಫೆಸರ್ ಅವರ ಈ ನಡವಳಿಕೆಯ ವಿರುದ್ಧವಾಗಿದ್ದಾರೆ.

ಈ ಪ್ರೊಫೆಸರ್ ವಾಸಿಸುವ ಅಪಾರ್ಟ್‌ಮೆಂಟ್‌ನಲ್ಲಿಯೇ ಕೆಳಗೆ ವಾಸಿಸುವ ಒಂದು ಜೋಡಿ. ಗಂಡ ಆಂಟೆ ಸರ್ಬಿಯಾ ಮೂಲದವನು. ಪೊಲೀಸ್ ಕೆಲಸ. ಹೆಂಡತಿ ಮಾಜಾ ಆಸ್ಪತ್ರೆಯಲ್ಲಿ ನರ್ಸ್. ಆಂಟೆ ತನ್ನ ಮುಂಬಡ್ತಿಗಾಗಿ ಸಂವಿಧಾನದ ಒಂದು ಪರೀಕ್ಷೆಯನ್ನು ಪಾಸು ಮಾಡಬೇಕಿರುತ್ತದೆ. ಆದರೆ ಅದು ಆತನಿಗೆ ಬಹಳ ತ್ರಾಸದಾಯಕವಾದದ್ದು.

ಕೆಲವು ಹೋಮೋಫೋಬಿಕ್ ಯುವಕರು ರಸ್ತೆಯಲ್ಲಿ ವೀಕೋ ಮೇಲೆ ದಾಳಿ ನಡೆಸಿ ಆತನನ್ನು ಆಸ್ಪತ್ರೆಗೆ ಸೇರಿಸಬೇಕಾಗುತ್ತದೆ. ಆಸ್ಪತ್ರೆಯಲ್ಲಿ ಮಾಜಾ ಆತನನ್ನು ಗುರುತಿಸಿ ಶುಶ್ರೂಷೆ ಮಾಡುತ್ತಾಳೆ. ಅದನ್ನು ಆತನ ಮನೆಯಲ್ಲಿಯೂ ಮುಂದುವರೆಸುತ್ತಾಳೆ. ಜೊತೆಗೆ ವೀಕೋನ ತಂದೆಯನ್ನು ನೋಡಿಕೊಳ್ಳುತ್ತಾಳೆ. ಇದಕ್ಕೆ ಬದಲಾಗಿ ಆಂಟೆಗೆ ಸಂವಿಧಾನದ ಪಾಠ ಹೇಳಿಕೊಡಲು ಪ್ರೊಫೆಸರ್ ವೀಕೋಗೆ ಕೇಳಿಕೊಳ್ಳುತ್ತಾಳೆ.

ಹೀಗೆ ಏರ್ಪಾಡಾದ ಸಂಬಂಧದಲ್ಲಿ, ಕ್ರೋಯೇಶಿಯನ್ ವೀಕೋ ತಾನೇ ಲೈಂಗಿಕ ಅಲ್ಪಸಂಖ್ಯಾತನಾದರೂ, ಅದಕ್ಕಾಗಿ ದೌರ್ಜನ್ಯವನ್ನು ಎದುರಿಸುತ್ತಿದ್ದರೂ, ಆತನಿಗೆ ಸರ್ಬಿಯನ್ ಅಲ್ಪಸಂಖ್ಯಾತರ ಮೇಲೆ ಪೂರ್ವಾಗ್ರಹಪೀಡಿತ ಅಸಹನೆ. ಆಂಟೆಗೆ ವೀಕೋನ ಲೈಂಗಿಕ ಧೋರಣೆಯ ಬಗ್ಗೆ ವ್ಯಂಗ್ಯದ ಪೂರ್ವಾಗ್ರಹ. ಹೀಗೆ ಅವರ ನಡುವೆ ಘರ್ಷಣೆಗಳು ಜರುಗುತ್ತಲೇ ಇರುತ್ತವೆ.

ಆದರೆ ಸಂವಿಧಾನದ ಪಾಠ ಮಾಡುವ-ಕೇಳುವ ಜೊತೆಜೊತೆಗೇ, ಮಾನವ ಸಂಬಂಧಗಳ ಒಡನಾಟದಿಂದ ಎಲ್ಲರಿಗೂ ತಮ್ಮ ಪೂರ್ವಾಗ್ರಹಗಳನ್ನು ಕಳಚಿಕೊಳ್ಳಲು ಸಾಧ್ಯವಾಗುತ್ತದೆ. ಸಂವಿಧಾನ ಪುಸ್ತಕವನ್ನು ಚೆನ್ನಾಗಿ ಬಲ್ಲ ಪ್ರೊಫೆಸರ್‌ಗೆ ಅದರ ನೈತಿಕತೆ ದಕ್ಕಲು, ತಾವು ಶತ್ರುಗಳು ಎಂದುಕೊಂಡವರ ಪ್ರೀತಿಯ ಒಡನಾಟ ಬೇಕಿರುತ್ತದೆ! ಆಂಟೆಯಲ್ಲು ಬದಲಾವಣೆ ಸಾಧ್ಯವಾಗುತ್ತದೆ.

ಈ ಕಥೆಯನ್ನು ಭಾರತಕ್ಕೆ ಅನ್ವಯಿಸುವುದು ಕಷ್ಟವೇನಲ್ಲ. ಇಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಬರಹಗಾರರು ಮುಸ್ಲಿಂ ದ್ವೇಷವನ್ನು ತಮ್ಮ ಕಥೆ-ಕಾದಂಬರಿಗಳಲ್ಲಿ ಧಾರಾಳವಾಗಿ ಎಳೆದು ತರುತ್ತಾರೆ. ತಾವೇ ತಮ್ಮ ಲೈಂಗಿಕ ಅಲ್ಪಸಂಖ್ಯಾತ ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದರೂ, ಬ್ರಾಹ್ಮಣ್ಯ ಹೋಗಲಾಡಿಸಬೇಕೆನ್ನುವ, ಸಮ ಸಮಾಜದ, ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕೆನ್ನುವ, ಪ್ರಾತಿನಿಧ್ಯ ಸರಿಪಡಿಸಬೇಕೆನ್ನುವ ಸಾಂವಿಧಾನಿಕ ನೈತಿಕತೆಯ ವಿವೇಕ ಅವರಿಗೆ ಸುಲಭವಾಗಿ ಸಿಕ್ಕಿರುವುದಿಲ್ಲ. ತಮ್ಮ ಪ್ರಿವಿಲೆಜ್‌ಗಳನ್ನು ದಾಟಿಕೊಂಡು, ತಮ್ಮ ಹಕ್ಕುಗಳ ಜೊತೆಗೆ ಇತರ ದುರ್ಬಲ ಸಮುದಾಯಗಳ ಹಕ್ಕುಗಳನ್ನು ಗುರುತಿಸುವ, ಅವರ ಶೋಷಣೆಯನ್ನೂ ಪರಿಗಣಿಸಲು ತಮ್ಮ ಪೂರ್ವಾಗ್ರಹಗಳನ್ನು ಕಳೆದುಕೊಳ್ಳಬೇಕಿರುವ ಅಗತ್ಯವನ್ನು ಚಿತ್ರಿಸುವ ಕಾನ್ಸ್ಟಿಟ್ಯೂಶನ್ ಚಿತ್ರಕಥೆ ನೆನಪಿಗೆ ಬಂದದ್ದು ಲೈಂಗಿಕ ಅಲ್ಪಸಂಖ್ಯಾತ ಹೋರಾಟದ ಮುಂಚೂಣಿಯಲ್ಲಿರುವ ಅಕ್ಕಯ್ ಪದ್ಮಶಾಲಿ ಅವರ ಆತ್ಮಕಥನದ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದಾಗ.

ಲೈಂಗಿಕತೆಯನ್ನು, ಲೈಂಗಿಕ ಕ್ರಿಯೆಯನ್ನು ತಪ್ಪಾಗಿ ಸಂಬೋಧಿಸಲಾಗಿದ್ದ, ಮತ್ತು ಲೈಂಗಿಕ ಅಲ್ಪಸಂಖ್ಯಾತರನ್ನು ಕ್ರಿಮಿನಲೈಸ್ ಮಾಡಿದ್ದ ಸೆಕ್ಷನ್ 377ಅನ್ನು ರದ್ದುಗೊಳಿಸಲು ಚಳವಳಿ ರೂಪಿಸಿದ್ದವರಲ್ಲಿ ಒಬ್ಬರಾಗಿದ್ದವರು ಅಕ್ಕಯ್ ಪದ್ಮಶಾಲಿ. ಅದಕ್ಕಾಗಿ ಹೋರಾಡಿ ಶ್ರಮಿಸಿದ್ದವರು. 2009 ಜುಲೈ 2ರಂದು ದೆಹಲಿ ನ್ಯಾಯಾಲಯ ಈ ಚಳವಳಿಯನ್ನು ಪುರಸ್ಕರಿಸಿ ನೀಡಿದ ತೀರ್ಪು ಐತಿಹಾಸಿಕವಾದದ್ದು. ಇದರ ಬಗ್ಗೆ ತಮ್ಮ ಪುಸ್ತಕದಲ್ಲಿ ಅಕ್ಕಯ್ ಅವರು ಬರೆಯುತ್ತಾ “ಖಾಸಗಿಯಾಗಿ ವಯಸ್ಕರ ನಡುವೆ ಸಹಮತದ ಲೈಂಗಿಕತೆಯು ಶಿಕ್ಷಾರ್ಹವಲ್ಲ ಎಂದು ಅದು ಹೇಳಿತು. ತೀರ್ಪನ್ನು ಸಾಂವಿಧಾನಿಕ ನೈತಿಕತೆಯ ಹಿನ್ನೆಲೆಯಲ್ಲಿ ನೀಡಲಾಗಿತ್ತು. ನೀವು, ಸ್ವಂತ ನೈತಿಕತೆಯನ್ನು ಕ್ರಿಯಾಚರಣೆಯಲ್ಲಿ ತರಬಹುದು. ಅದು ಭಾರತಕ್ಕೆ ಸಂಬಂಧಿಸಿದಂತೆ ಅಲ್ಲ. ಸಾಂವಿಧಾನಿಕ ನೈತಿಕತೆಯು ಮುಖ್ಯ ನೈತಿಕತೆಯಾಗಿದ್ದು, ಪ್ರತಿಯೊಬ್ಬರೂ ಅದರ ಅಡಿಯಲ್ಲಿ ಬರುತ್ತಾರೆ” ಎನ್ನುತ್ತಾರೆ.

ಈ ತೀರ್ಪನ್ನು ಮತ್ತೆ ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಅದರ ವಿರುದ್ಧ ಮತ್ತೆ ಚಳವಳಿ, ಮತ್ತೆ ಸಿಕ್ಕ ಜಯ ಹೀಗೆ ಇವುಗಳ ಬಗ್ಗೆ ಪುಸ್ತಕ ಬಿಡುಗಡೆಯಲ್ಲಿಯೂ ಮಾತನಾಡಿದ ಅಕ್ಕಯ್, ಸಾಂವಿಧಾನಿಕ ನೈತಿಕತೆಯನ್ನು ಅಳವಡಿಸಿಕೊಳ್ಳುವುದರ ಅಗತ್ಯದ ಬಗ್ಗೆ ಮತ್ತು ತಮ್ಮ ಹಕ್ಕುಗಳಿಗಾಗಿ ಮಾಡುವ ಹೋರಾಟವನ್ನು ಪ್ರತ್ಯೇಕವಾಗಿ ನೋಡದೆ ಸಮಸ್ತವಾಗಿ ಎಲ್ಲ ದುರ್ಬಲ ಸಮುದಾಯಗಳ ಹೋರಾಟಗಳನ್ನು ಒಟ್ಟಿಗೆ ಕೊಂಡೊಯ್ಯುವ – ಅದು ದಲಿತ ಹೋರಾಟ ಆಗಿರಲಿ, ಅಲ್ಪಸಂಖ್ಯಾತ ಧರ್ಮೀಯರ ಹೋರಾಟವಿರಲಿ ಅಥವಾ ಮಹಿಳಾ ಹಕ್ಕುಗಳ ಹೋರಾಟವಿರಲಿ- ಎಷ್ಟು ಮುಖ್ಯ ಎಂಬುದನ್ನು ಮನಮುಟ್ಟುವಂತೆ ವಿವರಿಸುತ್ತಿದ್ದರು.

ಅಕ್ಕಯ್ ತಮ್ಮ ಆತ್ಮಕತೆಗೆ ಮೊದಲು ’ಕರುಣೆಗೊಂದು ಸವಾಲು’ ಎಂದು ಹೆಸರಿಸಿದ್ದರಂತೆ. ಪ್ರಸಕ್ತ ಸಂಚಿಕೆಯಲ್ಲಿ ಸುಭಾಷ್ ಅವರಿಗೆ ನೀಡಿರುವ ಸಂದರ್ಶನದಲ್ಲೂ ಅವರು ಇದರ ಬಗ್ಗೆ ವಿವರಿಸಿದ್ದಾರೆ. ಕರುಣೆ ಸಾಕೆನ್ನುವ ಅವರು, ಮನುಷ್ಯರಿದ್ದಾರೆ, ಅದರಲ್ಲಿ ವೈವಿಧ್ಯತೆ ಇದೆ, ಅದನ್ನು ಒಪ್ಪಿಕೊಳ್ಳುವುದನ್ನು ಕಲಿಯಿರಿ ಎಂದು ಸಮಸ್ತ ಸಹನಾಗರಿಕರಿಗೆ ಕರೆ ನೀಡುತ್ತಿದ್ದಾರೆ.

LGBTQ ಸಮುದಾಯ ಜಗತ್ತಿನಾದ್ಯಂತ ಸಂಭ್ರಮಿಸುವ ದಿನ ಜೂನ್ 28. ಅದೇ ದಿನ ಅಕ್ಕಯ್ ಪುಸ್ತಕದ ಬಿಡುಗಡೆ ಇತ್ತು. ಜೂನ್ ಅನ್ನು ಪ್ರೈಡ್ ತಿಂಗಳು ಎಂದೇ ಕರೆಯಲಾಗುತ್ತದೆ. ವೈವಿಧ್ಯತೆಯ ಬಣ್ಣಗಳನ್ನು ಅರಿತು ಅದರಲ್ಲಿ ಮಿಂದು ಒಂದಾಗಬೇಕಿರುವ ಮತ್ತು ದೇಶದ ಬಹುತ್ವವನ್ನು ಸರಿ ದಾರಿಯಲ್ಲಿ ಕೊಂಡೊಯ್ಯಬೇಕಿರುವುದಕ್ಕೆ ಹೋರಾಟದ ಬದುಕು ಸಾಗಿಸಿ, ಕರುಣೆಯ ನಿರೀಕ್ಷೆಯನ್ನು ಪಕ್ಕಕ್ಕಿಟ್ಟು, ತಮ್ಮ ನೋವುಗಳನ್ನು ಇತರ ಅಂಚಿನಲ್ಲಿರುವ ಸಮುದಾಯದ ಜನರ ನೋವುಗಳಿಗೆ ಸಮೀಕರಿಸಿಕೊಂಡು ಹೋರಾಡಿದ ಅಕ್ಕಯ್, ಮಾನವಿ ಬಂದೋಪಾಧ್ಯಾಯ, ರೇವತಿ ಇಂತಹ ಮುಂತಾದವರ ಬದುಕು ಬರಹ ನಮಗೆ ಮುಖ್ಯವಾಗುತ್ತದೆ.

ರೇವತಿ ಅವರ ಬಗ್ಗೆ ಗೌರಿಯವರ ಒಂದು ಹಳೆಯ ಬರಹ, ಅಕ್ಕಯ್ ಅವರ ಸಂದರ್ಶನ ಮತ್ತು ಮಾನವಿ ಬಂದೋಪಾಧ್ಯಾಯ ಅವರ ಆತ್ಮಕತೆಯ ಕನ್ನಡಾನುವಾದದ ಒಂದು ಭಾಗವನ್ನು ಈ ಸಂಚಿಕೆಯಲ್ಲಿ ಪ್ರಕಟ ಮಾಡುವುದರೊಂದಿಗೆ ನಾವು ಪ್ರೈಡ್‌ನಲ್ಲಿ ಭಾಗಿಯಾಗುತ್ತಿದ್ದೇವೆ ಹಾಗೂ ಈ ಮೂರು ಜನ ತೋರಿಸಿಕೊಟ್ಟ ಭ್ರಾತೃತ್ವವನ್ನು ಅಪ್ಪಿಕೊಳ್ಳಲು ಮುಂದಾಗುತ್ತಿದ್ದೇವೆ.

ಭ್ರಾತೃತ್ವವೆನ್ನುವುದು (ಬಾಬಾಸಾಹೇಬರೂ ಪ್ರತಿಪಾದಿಸಿದಂತೆ) ರಾಷ್ಟ್ರವೊಂದನ್ನು ರೂಪಿಸುವ ಪ್ರಮುಖ ಮೌಲ್ಯಗಳಲ್ಲೊಂದು. ಅದೇ ದೇಶದ ಘೋಷಿತ ಗಡಿಗಳ ಒಳಗೆ ಬದುಕುವ ಸಹಜೀವಿಯನ್ನು ತನ್ನಂತೆ ಭಾವಿಸದಿದ್ದರೆ ಅದು ಹೇಗೆ ದೇಶವಾದೀತು? ಆ ದೃಷ್ಟಿಯಲ್ಲಿ ಮಹಿಳೆ, ಲೈಂಗಿಕ ಅಲ್ಪಸಂಖ್ಯಾತರು, ದಲಿತರು ಹಾಗೂ ಮುಸ್ಲಿಮರ ಜೊತೆಗಿನ ಬಾಂಧವ್ಯವನ್ನು ’ದೇಶವಾಸಿ’ಗಳು ನೋಡಬೇಕಿದೆ. ಅತ್ಯಂತ ಸಹಜವಾಗಿ. ಆಗ ನಿಜವಾದ ಅರ್ಥದಲ್ಲಿ ರಾಷ್ಟ್ರವು ಮೈದಾಳುತ್ತದೆ; ನಿಧಾನಕ್ಕೆ ಗಡಿಗಳನ್ನೂ ದಾಟಿದ ’ಮನುಷ್ಯ ಸಮಾಜ’ ರೂಪುಗೊಳ್ಳುತ್ತದೆ.


ಇದನ್ನೂ ಓದಿ: ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...