Homeಮುಖಪುಟಸಂವಿಧಾನದ ಪೀಠಿಕೆಯ 'ಸಮಾಜವಾದಿ' & 'ಜಾತ್ಯಾತೀತ' ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

ಸಂವಿಧಾನದ ಪೀಠಿಕೆಯ ‘ಸಮಾಜವಾದಿ’ & ‘ಜಾತ್ಯಾತೀತ’ ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ರಾಜ್ಯಸಭಾ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ವಕೀಲ ವಿಷ್ಣು ಶಂಕರ್ ಜೈನ್ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನವೆಂಬರ್‌ 25ರಲ್ಲಿ ತನ್ನ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದೆ. ಸಂವಿಧಾನದ ಪೀಠಿಕೆಯ

“ತಿದ್ದುಪಡಿಯನ್ನು (42 ನೇ ತಿದ್ದುಪಡಿ) ಈ ನ್ಯಾಯಾಲಯವು ಸಾಕಷ್ಟು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಿದೆ. ಸಂಸತ್ತು ಮಧ್ಯಪ್ರವೇಶಿಸಿದೆ. ಆ ಸಮಯದಲ್ಲಿ (ತುರ್ತು ಪರಿಸ್ಥಿತಿ) ಸಂಸತ್ತು ಏನೂ ಮಾಡಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಪ್ರಕರಣವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವಂತೆ ಅರ್ಜಿದಾರರು ಕೋರಿದ್ದ ಮನವಿಯನ್ನು ಪೀಠವು ನಿರಾಕರಿಸಿದ್ದು, “ಸಮಾಜವಾದಿಯಾಗಿರುವುದು” ಎಂಬುವುದು ಭಾರತೀಯ ಅರ್ಥದಲ್ಲಿ “ಕಲ್ಯಾಣ ರಾಜ್ಯ” ಎಂದು ತಿಳಿಯಲಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಪೀಠಿಕೆಯ

ವಿಚಾರಣೆ ವೇಳೆ “ಸಮಾಜವಾದಿ” ಪದದ ವ್ಯಾಖ್ಯಾನವನ್ನು ಬಹುಸಂಖ್ಯಾತರು ಅನುಮಾನಿಸಿದ್ದಾರೆ ಎಂದು ವಕೀಲ ಜೈನ್ ಪ್ರತಿಪಾದಿಸಿದ್ದಾರೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು ಜೂನ್ 25, 1975 ರಿಂದ ಮಾರ್ಚ್ 21, 1977 ರವರೆಗೆ ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

“ಭಾರತದಲ್ಲಿ ನಾವು ಸಮಾಜವಾದವನ್ನು ಅರ್ಥಮಾಡಿಕೊಳ್ಳುವ ವಿಧಾನವು ಇತರ ದೇಶಗಳಿಗಿಂತ ಬಹಳ ಭಿನ್ನವಾಗಿದೆ. ನಮ್ಮ ಸಂದರ್ಭದಲ್ಲಿ, ಸಮಾಜವಾದವು ಪ್ರಾಥಮಿಕವಾಗಿ ಕಲ್ಯಾಣ ರಾಜ್ಯ ಎಂದರ್ಥ. ಅಷ್ಟೆ. ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿರುವ ಖಾಸಗಿ ವಲಯವನ್ನು ಅದು ಎಂದಿಗೂ ತಡೆಯಲಿಲ್ಲ. ನಾವೆಲ್ಲರೂ ಅದರಿಂದ ಪ್ರಯೋಜನ ಪಡೆದಿದ್ದೇವೆ” ಎಂದು ಪೀಠವು ಹೇಳಿದೆ.

ಸಮಾಜವಾದ ಎಂಬ ಪದವನ್ನು ವಿಶ್ವಾದ್ಯಂತ ವಿವಿಧ ಸಂದರ್ಭಗಳಲ್ಲಿ ಬಳಸಲಾಗಿದೆ ಮತ್ತು ಭಾರತದಲ್ಲಿ ಇದರರ್ಥ ಕಲ್ಯಾಣ ರಾಜ್ಯವಾಗಿದೆ. ಅಂದರೆ, ಜನರ ಕಲ್ಯಾಣಕ್ಕಾಗಿ ನಿಲ್ಲಬೇಕು ಮತ್ತು ಸಮಾನ ಅವಕಾಶಗಳನ್ನು ಒದಗಿಸಬೇಕು ಎಂಬ ಅರ್ಥವಾಗಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ. 1994 ರ ಎಸ್‌ಆರ್ ಬೊಮ್ಮಾಯಿ ಪ್ರಕರಣದಲ್ಲಿ ‘ಜಾತ್ಯಾತೀತೆಯು’ ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇನ್ನೊಬ್ಬ ಅರ್ಜಿದಾರರಾದ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ನಾವು “ಸಮಾಜವಾದ” ಮತ್ತು “ಜಾತ್ಯತೀತತೆ” ಪರಿಕಲ್ಪನೆಗಳಿಗೆ ವಿರುದ್ಧವಾಗಿಲ್ಲ. ಆದರೆ ಪೀಠಿಕೆಗೆ ಅವುಗಳ ಅಳವಡಿಕೆಯನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

368ನೇ ವಿಧಿಯು ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರವನ್ನು ಸಂಸತ್ತಿಗೆ ನೀಡಿದೆ ಮತ್ತು ಅದು ಪೀಠಿಕೆಗೂ ವಿಸ್ತರಿಸಿದೆ ಎಂದು ಪೀಠ ಹೇಳಿದೆ. “ಪೀಠಿಕೆಯು ಸಂವಿಧಾನದ ಒಂದು ಭಾಗವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...