Homeಮುಖಪುಟಸಂವಿಧಾನದ ಪೀಠಿಕೆಯ 'ಸಮಾಜವಾದಿ' & 'ಜಾತ್ಯಾತೀತ' ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

ಸಂವಿಧಾನದ ಪೀಠಿಕೆಯ ‘ಸಮಾಜವಾದಿ’ & ‘ಜಾತ್ಯಾತೀತ’ ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ರಾಜ್ಯಸಭಾ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ವಕೀಲ ವಿಷ್ಣು ಶಂಕರ್ ಜೈನ್ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನವೆಂಬರ್‌ 25ರಲ್ಲಿ ತನ್ನ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದೆ. ಸಂವಿಧಾನದ ಪೀಠಿಕೆಯ

“ತಿದ್ದುಪಡಿಯನ್ನು (42 ನೇ ತಿದ್ದುಪಡಿ) ಈ ನ್ಯಾಯಾಲಯವು ಸಾಕಷ್ಟು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಿದೆ. ಸಂಸತ್ತು ಮಧ್ಯಪ್ರವೇಶಿಸಿದೆ. ಆ ಸಮಯದಲ್ಲಿ (ತುರ್ತು ಪರಿಸ್ಥಿತಿ) ಸಂಸತ್ತು ಏನೂ ಮಾಡಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಪ್ರಕರಣವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವಂತೆ ಅರ್ಜಿದಾರರು ಕೋರಿದ್ದ ಮನವಿಯನ್ನು ಪೀಠವು ನಿರಾಕರಿಸಿದ್ದು, “ಸಮಾಜವಾದಿಯಾಗಿರುವುದು” ಎಂಬುವುದು ಭಾರತೀಯ ಅರ್ಥದಲ್ಲಿ “ಕಲ್ಯಾಣ ರಾಜ್ಯ” ಎಂದು ತಿಳಿಯಲಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಪೀಠಿಕೆಯ

ವಿಚಾರಣೆ ವೇಳೆ “ಸಮಾಜವಾದಿ” ಪದದ ವ್ಯಾಖ್ಯಾನವನ್ನು ಬಹುಸಂಖ್ಯಾತರು ಅನುಮಾನಿಸಿದ್ದಾರೆ ಎಂದು ವಕೀಲ ಜೈನ್ ಪ್ರತಿಪಾದಿಸಿದ್ದಾರೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು ಜೂನ್ 25, 1975 ರಿಂದ ಮಾರ್ಚ್ 21, 1977 ರವರೆಗೆ ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

“ಭಾರತದಲ್ಲಿ ನಾವು ಸಮಾಜವಾದವನ್ನು ಅರ್ಥಮಾಡಿಕೊಳ್ಳುವ ವಿಧಾನವು ಇತರ ದೇಶಗಳಿಗಿಂತ ಬಹಳ ಭಿನ್ನವಾಗಿದೆ. ನಮ್ಮ ಸಂದರ್ಭದಲ್ಲಿ, ಸಮಾಜವಾದವು ಪ್ರಾಥಮಿಕವಾಗಿ ಕಲ್ಯಾಣ ರಾಜ್ಯ ಎಂದರ್ಥ. ಅಷ್ಟೆ. ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿರುವ ಖಾಸಗಿ ವಲಯವನ್ನು ಅದು ಎಂದಿಗೂ ತಡೆಯಲಿಲ್ಲ. ನಾವೆಲ್ಲರೂ ಅದರಿಂದ ಪ್ರಯೋಜನ ಪಡೆದಿದ್ದೇವೆ” ಎಂದು ಪೀಠವು ಹೇಳಿದೆ.

ಸಮಾಜವಾದ ಎಂಬ ಪದವನ್ನು ವಿಶ್ವಾದ್ಯಂತ ವಿವಿಧ ಸಂದರ್ಭಗಳಲ್ಲಿ ಬಳಸಲಾಗಿದೆ ಮತ್ತು ಭಾರತದಲ್ಲಿ ಇದರರ್ಥ ಕಲ್ಯಾಣ ರಾಜ್ಯವಾಗಿದೆ. ಅಂದರೆ, ಜನರ ಕಲ್ಯಾಣಕ್ಕಾಗಿ ನಿಲ್ಲಬೇಕು ಮತ್ತು ಸಮಾನ ಅವಕಾಶಗಳನ್ನು ಒದಗಿಸಬೇಕು ಎಂಬ ಅರ್ಥವಾಗಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ. 1994 ರ ಎಸ್‌ಆರ್ ಬೊಮ್ಮಾಯಿ ಪ್ರಕರಣದಲ್ಲಿ ‘ಜಾತ್ಯಾತೀತೆಯು’ ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇನ್ನೊಬ್ಬ ಅರ್ಜಿದಾರರಾದ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ನಾವು “ಸಮಾಜವಾದ” ಮತ್ತು “ಜಾತ್ಯತೀತತೆ” ಪರಿಕಲ್ಪನೆಗಳಿಗೆ ವಿರುದ್ಧವಾಗಿಲ್ಲ. ಆದರೆ ಪೀಠಿಕೆಗೆ ಅವುಗಳ ಅಳವಡಿಕೆಯನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

368ನೇ ವಿಧಿಯು ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರವನ್ನು ಸಂಸತ್ತಿಗೆ ನೀಡಿದೆ ಮತ್ತು ಅದು ಪೀಠಿಕೆಗೂ ವಿಸ್ತರಿಸಿದೆ ಎಂದು ಪೀಠ ಹೇಳಿದೆ. “ಪೀಠಿಕೆಯು ಸಂವಿಧಾನದ ಒಂದು ಭಾಗವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...