Homeಕರ್ನಾಟಕಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

ಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

- Advertisement -
- Advertisement -

ತೈಲ ಬೆಲೆ ಏರಿಕೆ ಆದಾಗ ಜನರಿಗೆ ತೊಂದರೆ ಆಗುತ್ತಿದೆ, ಅದರ ಬಗ್ಗೆ ಗಮನ ಹರಿಸಿ ಅದನ್ನು ಬಿಟ್ಟು ಕಾಶ್ಮೀರ ಫೈಲ್ಸು, ಆ ಫೈಲ್ಸು ಈ ಫೈಲ್ಸು ಅಂತೀರಲ್ಲ ಅಂತ ಒಂದು ಗಟ್ಟಿಯಾದ ನಿಲುವು ತೆಗೆದುಕೊಳ್ಳೊವುದಿರಲಿ, ಕನಿಷ್ಠ ಪಕ್ಷ ಆ ಬಗ್ಗೆ ಒಂದು ಪ್ರಶ್ನೆಯನ್ನೂ ಕೇಳದ ಸ್ಥಿತಿಗೆ ಕೆಲವು ಮಾಧ್ಯಮಗಳು ಬಂದು ಬಿಟ್ಟಿವೆ ಎಂದು ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ವಿಷಾದಿಸಿದ್ದಾರೆ.

ಮಾಧ್ಯಮಗಳ ವರ್ತನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕಟುವಾಗಿ ಬರೆದಿರುವ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಮಾಧ್ಯಮಗಳು ಅನುಸರಿಸಬೇಕಾದ ಸಾಂವಿಧಾನಿಕ ಮೌಲ್ಯಗಳನ್ನು ನೆನಪಿಸಿದ್ದಾರೆ.

“ಇಷ್ಟು ವರ್ಷ ಇಲ್ಲದ ಹಿಜಾಬ್ ಸಮಸ್ಯೆಯನ್ನು ಈಗೇಕೆ ಉಲ್ಬಣಗೊಳಿಸುತ್ತಿದ್ದೀರಿ, ಇದರಿಂದ ಮಕ್ಕಳ ಶಿಕ್ಷಣ ಹಾಳಾಗುತ್ತದೆ, ಶಿಕ್ಷಣ ಪಡೆಯುವ ಸ್ಥಳದ ವಾತಾವರಣ ಕೆಡುತ್ತದೆ ಎಂಬ ತಿಳುವಳಿಕೆಯ ಪರ ಒಬ್ಬರಾದರೂ ನಿಂತರೇ?” ಎಂದು ಪ್ರಶ್ನಿಸಿದ್ದಾರೆ.

ದಿನಕ್ಕಿಷ್ಟು ಎಂಬಂತೆ ದಲಿತರ ಮೇಲೆ ಹಲ್ಲೆ, ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ದಲಿತರ ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಗೊತ್ತಾದ ಪ್ರಕರಣಗಳಲ್ಲಿಯೂ ಅವರಿಗೆ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಆಗಿದೆ ಎಂದು ಎನ್‌ಸಿಆರ್‌ಬಿ (ರಾಷ್ಟ್ರೀಯ ಅಪರಾಧ ವರದಿ ಸಂಸ್ಥೆ) ವರದಿ ಹೇಳುತ್ತಿದೆ. ಈ ಬಗ್ಗೆ ಒಬ್ಬರಾದರೂ ಆ ಸತ್ತವರಿಗೆ ಇಲ್ಲವೇ ಹಲ್ಲೆಗೆ ಒಳಗಾದ ದಲಿತರಿಗೆ ನ್ಯಾಯ ಸಿಗುವ ತನಕ ತಮ್ಮ ವೇದಿಕೆಯನ್ನು ಬಳಸಿಕೊಂಡು ಹೋರಾಟ ನಡೆಸಿದ ಉದಾಹರಣೆ ಇದೆಯೇ? ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಇನ್ನು ಹೊನ್ನಾಳಿಯ ಶಾಸಕ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನೇ ಪಡೆದರೂ ಅದು ಅಸಂವಿಧಾನಿಕ ಎಂದು ಗಟ್ಟಿಯಾಗಿ ಹೇಳುವ ಧೈರ್ಯವನ್ನು ತೋರಲಿಲ್ಲ. ಮೊನ್ನೆ ವಿಧಾನ ಸಭಾ ಸ್ಪೀಕರ್ ಅದ ಕಾಗೇರಿ ಅವರು ತಾವು ಎಂತಹ ಸ್ಥಾನದಲ್ಲಿ ಕೂತಿದ್ದೇವೆ ಎಂಬುದನ್ನು ಮರೆತು ಸದನದ ಸದಸ್ಯರನ್ನು ಎಚ್ಚರಿಸಬೇಕಾದ ಜವಾಬ್ದಾರಿತನ್ನೇ ಮರೆತು “ನಾವು ಆರ್‌ಎಸ್‌ಎಸ್‌ನವರು” ಎಂದು ಬಾಲಿಶವಾಗಿ ಮಾತನಾಡುತ್ತಿದ್ದಾಗ ಅದು ಅಸಂವಿಧಾನಿಕ ನಡೆ, ಓರ್ವ ಸ್ಪೀಕರ್ ಹಾಗೆ ವರ್ತಿಸಬಾರದು ಎಂದು ಒಬ್ಬರಾದರೂ ತಮ್ಮ ಪ್ರತಿರೋಧವು ರಿಜಿಸ್ಟರ್ ಆಗುವಂತೆ ಹೇಳಿದರೇ? ಎಂದು ಪ್ರಶ್ನಿಸಿದ್ದಾರೆ.

ಪುಲ್ವಾಮ ಘಟನೆ ನಡೆದು ಎಷ್ಟು ದಿನವಾಯಿತು? ಮಡಿದ ಸೈನಿಕರ ಸಾವಿಗೆ ಕಾರಣ ಹುಡುಕಿ ಎಂದು ಒಬ್ಬರಾದರೂ ಪಟ್ಟು ಹಿಡಿಯುವ ಧೈರ್ಯ ತೋರಿದರೇ? ಇನ್ನು ಸಮಾಜವಾದಿ ನಾಡಿನ ಸಮಾಜ ವ್ಯಾಧಿ ಎನ್ನಬಹುದಾದ ಶಾಸನಬದ್ಧ ಜನ ಪ್ರತಿನಿಧಿ ಈಶ್ವರಪ್ಪ ಎಂಬಾತ ರಾಷ್ಟ್ರಧ್ವಜದ ಬಗ್ಗೆ ಅಗೌರವ ತೋರಿದಾಗ, ಅದು ಅಸಂವಿಧಾನಿಕ ನಡೆ ಎಂದು ತಾವೇ ಒಂದು ಹೆಜ್ಜೆ ಮುಂದೆ ಹೋಗಿ ಆತನಿಗೆ ತಿಳಿ ಹೇಳಬೇಕಿದ್ದ ಮಾಧ್ಯಮಗಳು “ಸದನದಲ್ಲಿ ರಾಷ್ಟ್ರಧ್ವಜ ಗದ್ದಲ, ಕಾಂಗ್ರೆಸ್ ನಿಂದ ಈಶ್ವರಪ್ಪ ರಾಜೀನಾಮೆಗೆ ಆಗ್ರಹ” ಎಂಬ ಮಾಹಿತಿಯನ್ನಷ್ಟೇ ಪ್ರಸಾರ ಮಾಡುತ್ತಿರುವಾಗ ಇವರಿಗೆ ಸಂವಿಧಾನದ ಕುರಿತು ತಿಳಿವಳಿಕೆ ಮತ್ತು ಗೌರವ ಇಲ್ಲ ಎಂದುಕೊಳ್ಳಬೇಕೋ ಅಥವಾ ಇದೆ ಎಂದುಕೊಳ್ಳಬೇಕೋ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೊಂದು ಧಾರ್ಮಿಕ ಸಂಘಟನೆಗಳ ವಿಷ ಜಂತುಗಳು ಬೀದಿಯಲ್ಲಿ ನಿಂತು ಬೇರೆ ಧರ್ಮದವರ ಅಂಗಡಿಗಳನ್ನು ತೆರವುಗೊಳಿಸುತ್ತೇವೆ, ಶಸ್ತ್ರ ಹಿಡಿಯಬೇಕು ಎಂದೆಲ್ಲಾ ಮಾತನಾಡುವಾಗ ಅವರು

“ಅನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದು, ಸಮಾಜದ ಸಾಮರಸ್ಯ ಕೆಡಿಸುತ್ತಿದ್ದಾರೆ, ಸರ್ಕಾರ ಕೂಡಲೇ ಅಂಥವರನ್ನ ಬಂಧಿಸಬೇಕು” ಎಂಬ ಅರಿವನ್ನು ಮೂಡಿಸಲು ಇವರಿಗೆ ಆಗದೇ ಇದ್ದ ಮೇಲೆ ಸಮಾಜಕ್ಕೆ ಇವರ ಅವಶ್ಯಕತೆ ಏನು? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಧರ್ಮ ಯಾವುದು, ಬದುಕಿನ ಕ್ರಮ ಯಾವುದು, ಸಂವಿಧಾನ ಏನು ಹೇಳುತ್ತದೆ? ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದಕ್ಕೆ ಪೂರಕವಾಗಿ ನಾವೇನು ಮಾಡಬೇಕು ಎಂದು ತಿಳಿಸಬೇಕಾದ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ಇನ್ಯಾವುದೋ ಸಂಗತಿಯಲ್ಲಿ ಮುಳುಗಿರುವುದು ಕಡು ಬೇಸರದ ಸಂಗತಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಸರ್ಕಾರವು 40% ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸ್ವತಃ ಗುತ್ತಿಗೆದಾರರೇ ಹೇಳುತ್ತಿದ್ದರೂ ಆ ಬಗ್ಗೆ ಸೊಲ್ಲೆತ್ತದ ಇವರು ಮುಖ್ಯಮಂತ್ರಿಗಳನ್ನು ಕೇಳಬೇಕಾದ ಬಹಳಷ್ಟು ಪ್ರಶ್ನೆಗಳನ್ನು ವಿಪಕ್ಷೀಯ ನಾಯಕರಿಗೆ ಕೇಳುತ್ತಿದ್ದರೆ ಇವರಿಗೆ ಏನು ಹೇಳೋಣ? ಎಂದು ವ್ಯಂಗ್ಯವಾಡಿದ್ದಾರೆ.

ಸಾಲದು ಎಂಬಂತೆ ಹರ್ಷ ಎಂಬಂತಹ ನಿರುದ್ಯೋಗಿ ಹುಡುಗರ ತಲೆ ಕೆಡಿಸಿ ಅವನನ್ನು ರೌಡಿ ಶೀಟರ್ ಆಗಿಸಿ ಕೊನೆಗೆ ಹಿಂಸಾ ಮಾರ್ಗದಲ್ಲೇ ಬಲಿಯಾಗುವಂತೆ ಮಾಡಿದ ಮಾರ್ಗವು ತಪ್ಪು, ಅದು ಧರ್ಮವಲ್ಲ ಮೂರ್ಖತನ ಎಂದು ಹೇಳಿದ ಒಂದೇ ಒಂದು ಮುಖ್ಯ ವಾಹಿನಿಯ ಮಾಧ್ಯಮಗಳನ್ನು ನಾನು ಕಾಣಲಿಲ್ಲ ಎಂಬುದು ಸತ್ಯ ಎಂದು ತಿಳಿಸಿದ್ದಾರೆ.

ನಾನು ಗಮನಿಸಿದಂತೆ ಮಾಧ್ಯಮ ವಲಯದಲ್ಲಿ ಸಂವಿಧಾನದ ಕುರಿತ ತಿಳಿವಳಿಕೆ ತೀರಾ ಕಡಿಮೆ ಮಟ್ಟದಲ್ಲಿ ಇದೆ. ಹೀಗಾಗಿಯೇ ಅವರಿಗೆ ಸಮಾಜ, ಸರ್ಕಾರ ಮತ್ತು ರಾಜಕೀಯದಲ್ಲಿ ಯಾವುದು ಸಂವಿಧಾನ ಬಾಹಿರ ನಡೆ ಎಂದು ಗುರುತಿಸಲು ಮತ್ತು ಆ ಬಗ್ಗೆ ಧೈರ್ಯದಿಂದ ದನಿ ಎತ್ತಲು ವಿಶ್ವಾಸವು ಸಾಲುತ್ತಿಲ್ಲ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

ಹೀಗಾಗಿ ಇನ್ನು ಮುಂದೆ ನಾವೆಲ್ಲರೂ ಪ್ರಜಾಪ್ರಭುತ್ವದ ಕಾವಲುಗಾರಿಕೆ ಮಾಡುತ್ತಾರೆ ಎಂದು ನಂಬಿರುವ ಮಾಧ್ಯಮಗಳು ತಮ್ಮ ಕಚೇರಿಯಲ್ಲಿ ತಮ್ಮ ಸಿಬ್ಬಂದಿಗಳಿಗೆ ಸಂವಿಧಾನವನ್ನು ತಪ್ಪದೇ ಬೋಧಿಸಲಿ ಎಂದು ವಿನಂತಿಸಿಕೊಳ್ಳುತ್ತೇನೆ. ಸಂವಿಧಾನದ ತಿಳಿವಳಿಕೆ ಇಲ್ಲದೇ, ಪ್ರಜಾಪ್ರಭುತ್ವದಲ್ಲಿ ಅನಾರೋಗ್ಯ ಹೆಚ್ಚಾಗುತ್ತಿದ್ದರೂ ಆ ಕುರಿತು ದನಿ ಮಾಡದ, ಸಂವಿಧಾನಾತ್ಮಕವಾದ ವಾತಾವರಣವನ್ನು ಕಾಪಾಡದ ಮಾಧ್ಯಮಗಳು ಇದ್ದರೆಷ್ಟು ಹೋದರೆಷ್ಟು ಎಂದು ಕಟುವಾಗಿ ಟೀಕಿಸಿದ್ದಾರೆ.

ಇನ್ನು ಕೇವಲ ಮಾಧ್ಯಮ ಅಷ್ಟೇ ಅಲ್ಲದೇ, ಶಾಲೆ ಕಾಲೇಜು, ಧಾರ್ಮಿಕ ಸಂಘಟನೆಗಳು, ಸೇವಾ ಸಂಸ್ಥೆಗಳು, ಕಲಾವಿದರ ಸಂಸ್ಥೆಗಳು, ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಆದಿಯಾಗಿ ಎಲ್ಲರೂ ಕೂಡಾ ಸಂವಿಧಾನದ ಕುರಿತು ಸಮರ್ಪಕವಾದ ತಿಳಿವಳಿಯನ್ನು ಹೊಂದಬೇಕು, ಆಗಷ್ಟೇ ತಪ್ಪು ಮಾಹಿತಿಯನ್ನು ಹರಡುತ್ತಾ ಸಮಾಜದ ಹಿತ ಕೆಡಿಸುತ್ತಿರುವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂಬುದು ನನ್ನ ಬಲವಾದ ನಂಬಿಕೆ ಎಂದಿದ್ದಾರೆ.


ಇದನ್ನೂ ಓದಿರಿ: ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...