Homeಮುಖಪುಟಸಂವಿಧಾನದ ಪೀಠಿಕೆಯ 'ಜಾತ್ಯತೀತ' ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ - ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಲ್ಲಿ ಇರುವ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಕನಿಷ್ಠ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಷ್ಟ್ರೀಯ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ 1976ರಲ್ಲಿ ಈ ಪದಗಳನ್ನು ಮುನ್ನುಡಿಗೆ ಸೇರಿಸಲಾಗಿತ್ತು.

ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮತ್ತು ಆರೆಸ್ಸೆಸ್‌ ಪರ ವಕೀಲ ಅಶ್ವಿನಿ ಉಪಾಧ್ಯಾಯ ಮತ್ತು ಬಲರಾಮ್ ಸಿಂಗ್ ಅವರು ಪದಗಳನ್ನು ಕಿತ್ತು ಹಾಕುವಂತೆ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಬಿನೋಯ್ ವಿಶ್ವಂ ಅವರು ವಕೀಲ ಶ್ರೀರಾಮ್ ಪರಕ್ಕಟ್ ಮೂಲಕ ವಿರೋಧಿಸಿದ್ದರು.

“ರಿಟ್ ಅರ್ಜಿಗಳಿಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ಅಗತ್ಯವಿಲ್ಲ. ಸಂವಿಧಾನದ ಮೇಲೆ ಸಂಸತ್ತಿನ ತಿದ್ದುಪಡಿ ಅಧಿಕಾರವು ಪೀಠಿಕೆಗೆ ಅನ್ವಯವಾಗುತ್ತದೆ. ಹಲವು ವರ್ಷಗಳ ನಂತರ ಪ್ರಕ್ರಿಯೆಯನ್ನು ರದ್ದು ಮಾಡುವುದಿಲ್ಲ ಎಂದು ನಾವು ವಿವರಿಸಿದ್ದೇವೆ. ತಿದ್ದಪಡಿ ಮಾಡಲಾದ ದಿನಾಂಕವು 368 ನೇ ವಿಧಿಯ ಅಡಿಯಲ್ಲಿ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ”ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ಸನ್ನಿವೇಶದಲ್ಲಿ ಸಮಾಜವಾದ ಮತ್ತು ಜಾತ್ಯತೀತತೆಯ ಅರ್ಥವೇನು ಮತ್ತು ಅದರ ಬಗ್ಗೆ ಸರ್ಕಾರವು ಹೇಗೆ ನೀತಿಯನ್ನು ರೂಪಿಸುತ್ತದೆ ಎಂಬುದನ್ನು ಇದು ಜಾಹೀರು ಮಾಡಿದೆ ಎಂದು ಪೀಠ ಹೇಳಿದೆ. “ನಂತರ ನಾವು ಸಮಾಜವಾದ ಮತ್ತು ಜಾತ್ಯತೀತತೆ ಎಂದರೇನು ಮತ್ತು ಅದನ್ನು ಸರ್ಕಾರ ಹೇಗೆ ತೆಗೆದುಕೊಳ್ಳಬೇಕು ಎಂಬುವುದಕ್ಕೆ ಮುಕ್ತವಾಗಿದೆ, ಅದೇ ನೀತಿಯನ್ನು ಹೇಗೆ ಅನುಸರಿಸಬೇಕು ಎಂದು ನಾವು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ಭಾರತದ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿದ ಭಾರತದ ಸಂವಿಧಾನದ 42 ನೇ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನವೆಂಬರ್ 22 ರಂದು, ಈ ಪ್ರಕರಣದಲ್ಲಿ ತನ್ನ ಆದೇಶವನ್ನು ಇಂದು ಪ್ರಕಟಿಸುವುದಾಗಿ ಅದು ಸೂಚಿಸಿತ್ತು.

ಅದೇ ಸಮಯದಲ್ಲಿ, ಜಾತ್ಯತೀತತೆಯು ಸಂವಿಧಾನದ ಮೂಲ ರಚನೆಯ ಭಾಗವಾಗಿದ್ದು, ಈ 42 ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆಯೂ ಪರೀಕ್ಷಿಸಿ ಎತ್ತಿಹಿಡಿದಿದೆ ಎಂದು ಅರ್ಜಿದಾರರಿಗೆ ನೆನಪಿಸಿತ್ತು.

ಜಾತ್ಯತೀತತೆಯು ಸಂವಿಧಾನದ ಪ್ರಮುಖ ಲಕ್ಷಣವಾಗಿದ್ದು, ಭಾರತೀಯ ಸಂವಿಧಾನದ ಪೀಠಿಕೆಯಲ್ಲಿನ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಪಾಶ್ಚಿಮಾತ್ಯ ದೃಷ್ಟಿಕೋನದಿಂದ ನೋಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...