Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈಗಾಗಲೆ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ, ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನು ಅತಿಕ್ರಮ ಪ್ರವೇಶ ಮಾಡಿ ಅನದೀಕೃತವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಧಾರ್ಮಿಕ ಕೇಂದ್ರ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲದಿದ್ದರೂ ಕಾನೂನು ಬಾಹಿರವಾಗಿ ಧಾರ್ಮಿಕ ಕೇಂದ್ರವನ್ನು ನಿರ್ಮಿಸುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿಂದೆ ವಿಶ್ವವಿದ್ಯಾಲಯದ ಆವರಣದ ಬೇರೆ ಕಡೆ ಇದ್ದ ಗಣೇಶ ದೇವಸ್ಥಾನವನ್ನು ಸ್ಥಳಾಂತರ ಮಾಡಿ ವಿದ್ಯಾಲಯದ ಆಡಳಿತ ಕಛೇರಿಯ ಹಿಂಬಾಗ ಅನದೀಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕ್ಯಾಂಪಸ್‌‌ ಒಳಗೆ ನಿರ್ಮಾಣ ಮಾಡುತ್ತಿರುವ ದೇವಸ್ಥಾನಕ್ಕೆ ಉಪ ಕುಲಪತಿಗಳ ಸಮ್ಮತಿಯನ್ನು ಕೂಡಾ ಪಡೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಸ್ತೆ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಮಾತನಾಡಿ, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಬೆಳಿಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ವಿಶ್ವವಿದ್ಯಾಲಯದಲ್ಲಿ ತುರ್ತು ಸಭೆ ನಡೆದಿದ್ದು, ಕುಲಪತಿ ಕೂಡಾ ದೇವಸ್ಥಾನದ ನಿರ್ಮಾಣದ ಕುರಿತು ಯಾರೂ ನನ್ನ ಬಳಿ ಬಂದು ಅನುಮತಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

‘‘ಸಧ್ಯಕ್ಕೆ ಕೆಲಸವನ್ನು ನಿಲ್ಲಿಸುವಂತೆ ಕುಲಪತಿ ಹೇಳಿದ್ದಾರೆ. ಸಭೆಯೊಂದನ್ನು ನಡೆಸಿ ನಂತರ ತೀರ್ಮಾನಕ್ಕೆ ಬರುವ ಬಗ್ಗೆ ತಿಳಿಸಿದ್ದಾರೆ. ಆದರೆ ಅವರ ಮಾತಿಗೆ ಯಾವುದೆ ಬೆಲೆ ಇಲ್ಲ. ಮತ್ತಷ್ಟು ಪೊಲೀಸರನ್ನು ನಿಯೋಜಿಸಿ ದೇವಸ್ಥಾನದ ಕೆಲಸವನ್ನು ಮುಂದುವರೆಸಲಾಗಿದೆ” ಎಂದು ಚಂದ್ರು ಪೆರಿಯಾರ್‌ ಹೇಳಿದ್ದಾರೆ.

“ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ. ಈಗಾಗಲೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಇಂದು ಸಂಜೆಯ ಒಳಗೆ ಸರಿಯಾದ ನಿರ್ಧಾರವನ್ನು ಮಾಡಿ ಕೆಲಸವನ್ನು ನಿಲ್ಲಿಸದೆ ಹೋದರೆ ಬೆಂಗಳೂರು ವಿಶ್ವವಿದ್ಯಾಲಯ ಬಂದ್‌ಗೆ ಕರೆ ಕೊಡುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇವಸ್ಥಾನ ಕಟ್ಟಿದರೆ ಬ್ರಾಹ್ಮಣ್ಯ ಭಿಕ್ಷುಕರ ಸಂಖ್ಯೆ ಜಾಸ್ತಿ ಆಗುತ್ತೆ ಅವರಿಗೆ ಒಂದು ಉದ್ಯೋಗ ಸಿಕ್ಕಿದಂತೆ ಲೈಬ್ರೆರಿ ಕಟ್ಟಿದರೆ ಬೇರೆ ಯಾರಾದ್ರೂ ಬಂದು ಉದ್ಯೋಗ ಪಡೆಯುತ್ತಾರಲ್ಲ ಅದಕ್ಕೆ

  2. ವಿಶ್ವವಿದ್ಯಾಲಯವನ್ನು ತಟ್ಟೆ ಕಾಸಿನ ಕೇಂದ್ರಗಳನ್ನಾಗಿ ಮಾಡುತ್ತಿರುವ ಮನುವಾದಿಗಳ ಹುನ್ನಾರಕ್ಕೆ, ಪ್ರಜ್ಞಾವಂತರು ತಿರುಗೇಟು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...