Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈಗಾಗಲೆ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ, ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನು ಅತಿಕ್ರಮ ಪ್ರವೇಶ ಮಾಡಿ ಅನದೀಕೃತವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಧಾರ್ಮಿಕ ಕೇಂದ್ರ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲದಿದ್ದರೂ ಕಾನೂನು ಬಾಹಿರವಾಗಿ ಧಾರ್ಮಿಕ ಕೇಂದ್ರವನ್ನು ನಿರ್ಮಿಸುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿಂದೆ ವಿಶ್ವವಿದ್ಯಾಲಯದ ಆವರಣದ ಬೇರೆ ಕಡೆ ಇದ್ದ ಗಣೇಶ ದೇವಸ್ಥಾನವನ್ನು ಸ್ಥಳಾಂತರ ಮಾಡಿ ವಿದ್ಯಾಲಯದ ಆಡಳಿತ ಕಛೇರಿಯ ಹಿಂಬಾಗ ಅನದೀಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕ್ಯಾಂಪಸ್‌‌ ಒಳಗೆ ನಿರ್ಮಾಣ ಮಾಡುತ್ತಿರುವ ದೇವಸ್ಥಾನಕ್ಕೆ ಉಪ ಕುಲಪತಿಗಳ ಸಮ್ಮತಿಯನ್ನು ಕೂಡಾ ಪಡೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಸ್ತೆ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಮಾತನಾಡಿ, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಬೆಳಿಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ವಿಶ್ವವಿದ್ಯಾಲಯದಲ್ಲಿ ತುರ್ತು ಸಭೆ ನಡೆದಿದ್ದು, ಕುಲಪತಿ ಕೂಡಾ ದೇವಸ್ಥಾನದ ನಿರ್ಮಾಣದ ಕುರಿತು ಯಾರೂ ನನ್ನ ಬಳಿ ಬಂದು ಅನುಮತಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

‘‘ಸಧ್ಯಕ್ಕೆ ಕೆಲಸವನ್ನು ನಿಲ್ಲಿಸುವಂತೆ ಕುಲಪತಿ ಹೇಳಿದ್ದಾರೆ. ಸಭೆಯೊಂದನ್ನು ನಡೆಸಿ ನಂತರ ತೀರ್ಮಾನಕ್ಕೆ ಬರುವ ಬಗ್ಗೆ ತಿಳಿಸಿದ್ದಾರೆ. ಆದರೆ ಅವರ ಮಾತಿಗೆ ಯಾವುದೆ ಬೆಲೆ ಇಲ್ಲ. ಮತ್ತಷ್ಟು ಪೊಲೀಸರನ್ನು ನಿಯೋಜಿಸಿ ದೇವಸ್ಥಾನದ ಕೆಲಸವನ್ನು ಮುಂದುವರೆಸಲಾಗಿದೆ” ಎಂದು ಚಂದ್ರು ಪೆರಿಯಾರ್‌ ಹೇಳಿದ್ದಾರೆ.

“ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ. ಈಗಾಗಲೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಇಂದು ಸಂಜೆಯ ಒಳಗೆ ಸರಿಯಾದ ನಿರ್ಧಾರವನ್ನು ಮಾಡಿ ಕೆಲಸವನ್ನು ನಿಲ್ಲಿಸದೆ ಹೋದರೆ ಬೆಂಗಳೂರು ವಿಶ್ವವಿದ್ಯಾಲಯ ಬಂದ್‌ಗೆ ಕರೆ ಕೊಡುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇವಸ್ಥಾನ ಕಟ್ಟಿದರೆ ಬ್ರಾಹ್ಮಣ್ಯ ಭಿಕ್ಷುಕರ ಸಂಖ್ಯೆ ಜಾಸ್ತಿ ಆಗುತ್ತೆ ಅವರಿಗೆ ಒಂದು ಉದ್ಯೋಗ ಸಿಕ್ಕಿದಂತೆ ಲೈಬ್ರೆರಿ ಕಟ್ಟಿದರೆ ಬೇರೆ ಯಾರಾದ್ರೂ ಬಂದು ಉದ್ಯೋಗ ಪಡೆಯುತ್ತಾರಲ್ಲ ಅದಕ್ಕೆ

  2. ವಿಶ್ವವಿದ್ಯಾಲಯವನ್ನು ತಟ್ಟೆ ಕಾಸಿನ ಕೇಂದ್ರಗಳನ್ನಾಗಿ ಮಾಡುತ್ತಿರುವ ಮನುವಾದಿಗಳ ಹುನ್ನಾರಕ್ಕೆ, ಪ್ರಜ್ಞಾವಂತರು ತಿರುಗೇಟು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...