Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈಗಾಗಲೆ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ, ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನು ಅತಿಕ್ರಮ ಪ್ರವೇಶ ಮಾಡಿ ಅನದೀಕೃತವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಧಾರ್ಮಿಕ ಕೇಂದ್ರ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲದಿದ್ದರೂ ಕಾನೂನು ಬಾಹಿರವಾಗಿ ಧಾರ್ಮಿಕ ಕೇಂದ್ರವನ್ನು ನಿರ್ಮಿಸುತ್ತಿರುವುದರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿಂದೆ ವಿಶ್ವವಿದ್ಯಾಲಯದ ಆವರಣದ ಬೇರೆ ಕಡೆ ಇದ್ದ ಗಣೇಶ ದೇವಸ್ಥಾನವನ್ನು ಸ್ಥಳಾಂತರ ಮಾಡಿ ವಿದ್ಯಾಲಯದ ಆಡಳಿತ ಕಛೇರಿಯ ಹಿಂಬಾಗ ಅನದೀಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕ್ಯಾಂಪಸ್‌‌ ಒಳಗೆ ನಿರ್ಮಾಣ ಮಾಡುತ್ತಿರುವ ದೇವಸ್ಥಾನಕ್ಕೆ ಉಪ ಕುಲಪತಿಗಳ ಸಮ್ಮತಿಯನ್ನು ಕೂಡಾ ಪಡೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಸ್ತೆ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಮಾತನಾಡಿ, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಬೆಳಿಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ವಿಶ್ವವಿದ್ಯಾಲಯದಲ್ಲಿ ತುರ್ತು ಸಭೆ ನಡೆದಿದ್ದು, ಕುಲಪತಿ ಕೂಡಾ ದೇವಸ್ಥಾನದ ನಿರ್ಮಾಣದ ಕುರಿತು ಯಾರೂ ನನ್ನ ಬಳಿ ಬಂದು ಅನುಮತಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

‘‘ಸಧ್ಯಕ್ಕೆ ಕೆಲಸವನ್ನು ನಿಲ್ಲಿಸುವಂತೆ ಕುಲಪತಿ ಹೇಳಿದ್ದಾರೆ. ಸಭೆಯೊಂದನ್ನು ನಡೆಸಿ ನಂತರ ತೀರ್ಮಾನಕ್ಕೆ ಬರುವ ಬಗ್ಗೆ ತಿಳಿಸಿದ್ದಾರೆ. ಆದರೆ ಅವರ ಮಾತಿಗೆ ಯಾವುದೆ ಬೆಲೆ ಇಲ್ಲ. ಮತ್ತಷ್ಟು ಪೊಲೀಸರನ್ನು ನಿಯೋಜಿಸಿ ದೇವಸ್ಥಾನದ ಕೆಲಸವನ್ನು ಮುಂದುವರೆಸಲಾಗಿದೆ” ಎಂದು ಚಂದ್ರು ಪೆರಿಯಾರ್‌ ಹೇಳಿದ್ದಾರೆ.

“ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ. ಈಗಾಗಲೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಇಂದು ಸಂಜೆಯ ಒಳಗೆ ಸರಿಯಾದ ನಿರ್ಧಾರವನ್ನು ಮಾಡಿ ಕೆಲಸವನ್ನು ನಿಲ್ಲಿಸದೆ ಹೋದರೆ ಬೆಂಗಳೂರು ವಿಶ್ವವಿದ್ಯಾಲಯ ಬಂದ್‌ಗೆ ಕರೆ ಕೊಡುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇವಸ್ಥಾನ ಕಟ್ಟಿದರೆ ಬ್ರಾಹ್ಮಣ್ಯ ಭಿಕ್ಷುಕರ ಸಂಖ್ಯೆ ಜಾಸ್ತಿ ಆಗುತ್ತೆ ಅವರಿಗೆ ಒಂದು ಉದ್ಯೋಗ ಸಿಕ್ಕಿದಂತೆ ಲೈಬ್ರೆರಿ ಕಟ್ಟಿದರೆ ಬೇರೆ ಯಾರಾದ್ರೂ ಬಂದು ಉದ್ಯೋಗ ಪಡೆಯುತ್ತಾರಲ್ಲ ಅದಕ್ಕೆ

  2. ವಿಶ್ವವಿದ್ಯಾಲಯವನ್ನು ತಟ್ಟೆ ಕಾಸಿನ ಕೇಂದ್ರಗಳನ್ನಾಗಿ ಮಾಡುತ್ತಿರುವ ಮನುವಾದಿಗಳ ಹುನ್ನಾರಕ್ಕೆ, ಪ್ರಜ್ಞಾವಂತರು ತಿರುಗೇಟು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....