HomeUncategorizedಕೊರೋನಾ ಕಾರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಇನ್ನೂ ವಿಳಂಬ

ಕೊರೋನಾ ಕಾರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಇನ್ನೂ ವಿಳಂಬ

- Advertisement -
- Advertisement -

ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ 10 ಲೈನ್‌ಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ವಿಳಂಬವಾಗುತ್ತಲೇ ಸಾಗುತ್ತಿದೆ. ಮೊದಲಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಗೊಂದಲಗಳಿಂದ ತಡವಾದ ರಸ್ತೆ ಕಾಮಗಾರಿಯ ಆರಂಭ, ಈಗ ಕೊರೋನಾ ಲಾಕ್‌ಡೌನ್ ಕಾರಣದಿಂದ ಇನ್ನಷ್ಟು ವಿಳಂಬಗೊಳ್ಳುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2018 ರಲ್ಲಿ ಕಾಮಗಾರಿ ಆರಂಭಿಸಿ 30 ತಿಂಗಳಲ್ಲಿ ಅಂತ್ಯಗೊಳಿಸಬೇಕೆಂದು ಗಡುವು ಹಾಕಿಕೊಂಡಿತ್ತು. ಆರಂಭದಲ್ಲಿ ಭೂಮಿ ವರ್ಗಾವಣೆ, ಭೂ ವಂಚಿತರಿಗೆ ಪರಿಹಾರ, ಕಾನೂನು ವ್ಯಾಜ್ಯ ಸೇರಿ ರಸ್ತೆ ನಿರ್ಮಾಣ ಕಾರ್ಯ ವಿಳಂಬವಾಗುತ್ತಲೇ ಸಾಗುತ್ತಿತ್ತು. ರಸ್ತೆ ಕಾರ್ಯ ಆರಂಭವಾದ ಮೇಲೆ ಕೊರೋನಾ ಕಾರಣದಿಂದ ಬೆಂಗಳೂರು ಮೈಸೂರು 10 ಲೈನ್‌ ಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಇನ್ನಷ್ಟು ವಿಳಂಬವಾಗುತ್ತಿದೆ.

ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಪ್ರಕಾರ ಬೆಂಗಳೂರಿನ ನೈಸ್‌ ರಸ್ತೆಯಿಂದ ಮೈಸೂರಿನ ರಿಂಗ್‌ ರೋಡ್‌ ಜಂಕ್ಷನ್‌ ವರೆಗಿನ 116 ಕಿಲೋಮೀಟರ್‌ ರಾಷ್ಟ್ರೀಯ ಹೆದ್ದಾರಿಯು 2021 ರ ಕೊನೆಯಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಬೇಕಿತ್ತು. ಬೆಂಗಳೂರು ಮೈಸೂರಿನ ನಡುವೆ ಓಡಾಟದ ಅವಧಿಯನ್ನು 90 ನಿಮಿಷಕ್ಕೆ ಇಳಿಸಲಾಗುತ್ತದೆ ಎನ್ನುವ ಈ ರಾಷ್ಟ್ರೀಯ ಹೆದ್ದಾರಿ ಕಾರ್ಯ ಸದ್ಯ ಕುಂಟುತ್ತ ಸಾಗುತ್ತಿದೆ.

ಬೆಂಗಳೂರಿನಿಂದ ಮದ್ದೂರು ಸಮೀಪದ ನಿಡಘಟ್ಟ(56.2km), ನಿಡಘಟ್ಟದಿಂದ ಮೈಸೂರಿಗೆ (60 km) ಹೀಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH275) ಯ ಕಾಮಗಾರಿಯನ್ನು ಎರಡು ಹಂತದಲ್ಲಿ ವಿಭಾಗಿಸಲಾಗಿದೆ. 7400 ಕೋಟಿ ಅಂದಾಜು ವೆಚ್ಚದ ಈ ರಸ್ತೆ ಕಾಮಗಾರಿಯ ಎರಡೂ ಹಂತಗಳ ಕಾಮಗಾರಿಗಳು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. 9 ದೊಡ್ಡ ಸೇತುವೆಗಳು, 44 ಸಣ್ಣ ಸೇತುವೆಗಳು, ರಸ್ತೆ ಸೇತುವೆಗಳನ್ನೊಳಗೊಂಡ ಈ ಮಾರ್ಗದಲ್ಲಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀ ರಂಗಪಟ್ಟಣದಲ್ಲಿ ಬೈ ಪಾಸ್‌ಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ರಸ್ತೆ ನಿರ್ಮಾಣ ಯೋಜನೆಯ ಡೆಡ್‌ಲೈನ್‌ ಮಾತ್ರ ಮೇಲಿಂದ ಮೇಲೆ ಮುಂದಕ್ಕೆ ಹೋಗುತ್ತಲೇ ಇದೆ. ರಸ್ತೆ ನಿರ್ಮಾಣ ನಡೆಯುತ್ತಿರುವ ಕಾರಣದಿಂದ ಈಗಿರುವ ರಸ್ತೆಯಲ್ಲಿ ಸಹ ಹೆಚ್ಚಿನ ವಾಹನ ದಟ್ಟಣೆ ಸಂಭವಿಸುತ್ತಿದೆ. ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಈ ವರ್ಷಾಂತ್ಯದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಮುಂದಾದರೆ ಬೆಂಗಳೂರು ಮೈಸೂರು ಮಧ್ಯೆ ದಿನ ನಿತ್ಯ ಓಡಾಡುವ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದು.


ಇದನ್ನೂ ಓದಿ : ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....