Homeಕರ್ನಾಟಕದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ಬಗ್ಗೆ ಕಂದಾಯ ಸಚಿವರೊಂದಿಗೆ ಸಮಾಲೋಚನ ಸಭ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ಬಗ್ಗೆ ಕಂದಾಯ ಸಚಿವರೊಂದಿಗೆ ಸಮಾಲೋಚನ ಸಭ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.

ಕೊರಗ ಸಮುದಾಯದವರಿಗೆ ನೀಡಲೆಂದು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಿರುವ ಕೃಷಿ ಯೋಗ್ಯ ಭೂಮಿಯನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೊರಗ ಸಂಘದ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಮುಂದೆ ತಮ್ಮ ಅಹವಾಲನ್ನು ಸಲ್ಲಿಸಿದರು.

ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಕೃಷಿ ಭೂಮಿಯ ಹಂಚಿಕೆ ಉತ್ತಮ ರೀತಿಯಲ್ಲಿ ನಡೆದಿದ್ದು, ಅದೇ ಮಾದರಿಯನ್ನು ದಕ್ಷಿಣ ಕನ್ನಡದಲ್ಲೂ ಅನುಸರಿಸುವಂತೆ ಕೊರಗ ಸಂಘದ ಪ್ರತಿನಿಧಿಗಳು ಸಚಿವರಲ್ಲಿ ಮನವಿ ಮಾಡಿದರು.

ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡರು,ಈ ಹಿಂದೆ ಕೊರಗ ಸಮುದಾಯಕ್ಕೆ ಕೃಷಿ ಭೂಮಿ ಮಂಜೂರು ಮಾಡಿದ ಪ್ರಕ್ರಿಯೆಗಳನ್ನು ಜಿಲ್ಲಾಡಳಿತದೊಂದಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಲೋಚನೆ ನಡೆಸಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅತೀ ಸೂಕ್ಷ್ಮ ಹಾಗೂ ಅತೀ ಹಿಂದುಳಿದಿರುವ ಪರಿಶಿಷ್ಟ ಪಂಗಡದ ಸಮುದಾಯವಾಗಿರುವ ಕೊರಗರು ಗುಂಪು ಗುಂಪಾಗಿ ವಾಸಿಸುವ ಹಿನ್ನೆಲೆಯವರಾಗಿದ್ದು, ಕನಿಷ್ಠ 10 ರಿಂದ 15 ಕುಟುಂಬಗಳಿಗೆ ಒಟ್ಟೊಟ್ಟಿಗೆ ಯಾಗಿ ಭೂಮಿ ಮಂಜೂರು ಮಾಡಿದರೆ ತಮ್ಮ ಹಿಂದಿನ ಸಮುದಾಯ ಪರಿಕಲ್ಪನೆಯಂತೆ ಕೊರಗರು ಸ್ವತಂತ್ರವಾಗಿ
ಬದುಕಿ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಕೊರಗ
ಸಂಘದ ಅಧ್ಯಕ್ಷ ಸುಂದರ ಬೆಳವಾಯಿ ಅವರು ಸಭೆಯಲ್ಲಿ ಮನವಿ ಮಾಡಿದರು.

ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲಾ ಪ್ರಯತ್ನ ನಡೆಸುವುದಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕೊರಗ ಸಮುದಾಯದ ಹಿನ್ನೆಲೆ ಹಾಗೂ ಪ್ರಸ್ತುತ ಕೊರಗ ಸಮುದಾಯದ ಸ್ಥಿತಿಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್, ದ.ಕ ಜಿಲ್ಲಾ ಕೊರಗರ ಸಂಘದ ಅಧ್ಯಕ್ಷ ಸುಂದರ ಬೆಳುವಾಯಿ, ಉಪಾಧ್ಯಕ್ಷ ಕೊಗ್ಗ ರಮೇಶ್, ಪ್ರಧಾನ ಕಾರ್ಯದರ್ಶಿ ಶಶಿಕಲಾ, ಪದಾಧಿಕಾರಿಗಳಾದ ಸಂಜೀವ ಕೊಡಿಕಲ್, ಕಮಲ ಮೊಂಟೆಪದವು, ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯರಾದ ಬಿ.ಸಿ.ಬಸವರಾಜ್, ಲಕ್ಷ್ಮಣ್ ಕುಂದರ್, ಡಾ.ವಾಸು ಎಚ್.ವಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಇತರರು ಭಾಗವಹಿಸಿದ್ದರು.

ಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...