Homeಕರ್ನಾಟಕಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಮೃತರ ಸಂಖ್ಯೆ 3ಕ್ಕೆ ಏರಿಕೆ, 78 ಜನ ಅಸ್ವಸ್ಥ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಮೃತರ ಸಂಖ್ಯೆ 3ಕ್ಕೆ ಏರಿಕೆ, 78 ಜನ ಅಸ್ವಸ್ಥ

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಬುಧವಾರ ನಡೆದಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 78 ಜನ ಅಸ್ವಸ್ಥರಾಗಿದ್ದಾರೆ.

ಈ ಘಟನೆ ಬಗ್ಗೆ ಮಾತನಾಡಿದ ಎಸ್​​ಪಿ ಪರಶುರಾಮ್ ಅವರು, ”ಪ್ರಕರಣ ದಾಖಲಿಸಲಾಗಿದ್ದು, ಕಲುಷಿತ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ವಾಟರ್​ಮ್ಯಾನ್​ ಸುರೇಶ್ ಅವರನ್ನು ಈಗಾಗಲೇ​ ವಿಚಾರಣೆ ಮಾಡಲಾಗಿದೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸುರೇಶ್​ಗೆ ತಿಳಿಸಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಜುಳಾ ಎಂಬುವವರು ಮೃತಪಟ್ಟ ಬಳಿಕ ಅವರ ಮೃತದೇಹವನ್ನು ಪರೀಕ್ಷೆ ನಡೆಸಿದ ಬಳಿಕ ಕವಾಡಿಗರಹಟ್ಟಿಗೆ ಮೃತದೇಹ ತರಲಾಯಿತು. ಮೃತ ಮಹಿಳೆಯ ಸಂಬಂಧಿಕರು, ಬಡಾವಣೆಯ ಜನರ ಆಕ್ರೋಶ ಕಟ್ಟೆಯೊಡೆಯಿತು. ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಪಟ್ಟು ಹಿಡಿದು ಬುಧವಾರ ಪ್ರತಿಭಟನೆ ಆರಂಭಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದಂತೆ ಪರಿಹಾರವನ್ನು ಕೂಡಲೇ ವಿತರಣೆ ಮಾಡಬೇಕು. ಎಂದು ಒತ್ತಾಯಿಸಿದರು. ಹೊಳಲ್ಕೆರೆ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ತಡೆದು ಪ್ರತಿಭಟನೆ ನಡೆಸಲು ಮುಂದಾದರು ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದರು.

ಪೋಕ್ಸೊ ಕೇಸ್ ದಾಖಲಿಸಿದ ದ್ವೇಷಕ್ಕೆ ನೀರಿಗೆ ವಿಷ ಬೆರೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ ವರ್ಷ ದಲಿತ ಯುವಕನೊಬ್ಬನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿರುವ ದ್ವೇಷಕ್ಕೆ ನೀರಿನ ಟ್ಯಾಂಕ್​ಗೆ ವಿಷ ಬೆರೆಸಿದ್ದಾರೆ ಎನ್ನುವ ಆರೋಪ ಮಾಡಲಾಗುತ್ತಿದೆ. ಮೃತ ಮಂಜುಳಾ ಅವರ ಕುಟುಂಬಸ್ಥರು ವಾಟರ್​ಮ್ಯಾನ್ ಟ್ಯಾಂಕ್​ನಲ್ಲಿ ವಿಷ ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದರು.

ಕಲುಷಿತ ನೀರು ಸೇವಿಸಿ ಒಟ್ಟು 3 ಮಂದಿ ಮೃತಪಟ್ಟಿದ್ದು, 42 ಜನ ಅಸ್ವಸ್ಥಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಕವಾಡಿಗರಹಟ್ಟಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದೇವೆ. ಕುಡಿಯುವ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕವಾಡಿಗರಹಟ್ಟಿಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಮಂಜುಳಾ ಸಾವಿನ ಕಾರಣ ಏನೆಂಬುದು ಪರೀಕ್ಷೆ ಬಳಿಕ ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿರುವುದರಿಂದ ಕವಾಡಿಗರಹಟ್ಟಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೊಳವೆ ಭಾವಿ ನೀರನ್ನು ಮನೆ-ಮನೆಗೂ ಸರಬರಾಜು ಮಾಡಲಾಗುತ್ತಿದೆ. ಎರಡು ದಿನಗಳಿಂದ ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡ ನೀರನ್ನು ಚೆಲ್ಲುವಂತೆ ನಗರಸಭೆ ಸಿಬ್ಬಂದಿ ಜನರ ಮನವೊಲಿಸುತ್ತಿದ್ದಾರೆ. ಬಡಾವಣೆಯಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಕವಾಡಿಗರಹಟ್ಟಿಯಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮಂಗಳವಾರ ರಾತ್ರಿ ಕಲ್ಲು ಬೀಸಲಾಗಿದೆ. ಘಟಕದ ಗಾಜು ಪುಡಿಯಾಗಿದ್ದು ಆಕ್ರೋಶಗೊಂಡ ಸ್ಥಳೀಯರು ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಜೂನ್ 10ರಂದು ಕುಷ್ಟಗಿಯ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 9 ವರ್ಷದ ಹುಡುಗಿ ನಿರ್ಮಲಾಳ ಸಾವಿಗೀಡಾಗಿದ್ದಳು. ಈ ಭಾಗದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಆಸ್ಪತ್ರೆ ಸೇರುವವರ ಸಂಖ್ಯೆ ಅಧಿಕವಾಗಿದೆ ಎಂದು ಇಲ್ಲಿಯ ವೈದ್ಯರೇ ಹೇಳುತ್ತಾರೆ.

ಇದನ್ನೂ ಓದಿ: ಕಲುಷಿತ ನೀರಿಗೆ ನಾಲ್ವರು ಬಲಿ; ಇನ್ನಾದರೂ ಎಚ್ಚೆತ್ತುಕೊಳ್ಳುವುದೇ ಕಲ್ಯಾಣ ಕರ್ನಾಟಕ ಆಡಳಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...