Homeಮುಖಪುಟನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು 2016ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

2016ರಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ‘ಶಕ್ತಿ ಮತ್ತು ಸಂಪನ್ಮೂಲ ಸಂಸ್ಥೆ’ (ಟಿಇಆರ್‌ಇ) ಮಾಜಿ ಅಧ್ಯಕ್ಷ ಆರ್‌.ಕೆ.ಪಚೌರಿ ಮತ್ತು ಇತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಹೊರತಾಗಿಯೂ, ಮಾಧ್ಯಮಗಳಲ್ಲಿ ವರದಿ ಬಿತ್ತರಿಸಿದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ‌ 2016ರಲ್ಲಿ ಪ್ರಕರಣ ದಾಖಲಾದಾಗ ಗೋಸ್ವಾಮಿ ಟೈಮ್ಸ್ ನೌ ವಾಹಿನಿಯಲ್ಲಿದ್ದರು.

“ನಾನು ಈ ಮೂಲಕ ಈ ಗೌರವಾನ್ವಿತ ನ್ಯಾಯಾಲಯಕ್ಕೆ ನನ್ನ ಕ್ಷಮೆಯಾಚನೆಯನ್ನು ಸಲ್ಲಿಸುತ್ತೇನೆ. ಈ ಗೌರವಾನ್ವಿತ ನ್ಯಾಯಾಲಯವು ಕ್ಷಮಾಪಣೆಯನ್ನು ಸ್ವೀಕರಿಸಿ, ಹೇಳಿಕೆದಾರರ ವಿರುದ್ಧದ ತ್ವರಿತ ವಿಚಾರಣೆಯನ್ನು ಮುಕ್ತಾಯಗೊಳಿಸಲು ದಯಪಾಲಿಸಬೇಕೆಂದು ವಿನಂತಿಸುತ್ತೇನೆ” ಎಂದು ಗೋಸ್ವಾಮಿ ಅವರು ಏಪ್ರಿಲ್ 28 ರಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.

“ಕಾನೂನು ಪಾಲಿಸುವ ಮತ್ತು ದೇಶದ ಗೌರವಾನ್ವಿತ ನಾಗರಿಕ ಗೋಸ್ವಾಮಿ ಆಗಿದ್ದಾರೆ. ಎಲ್ಲಾ ನ್ಯಾಯಾಲಯಗಳನ್ನು ಹೆಚ್ಚು ಗೌರವಿಸುತ್ತಾರೆ. ದೆಹಲಿ ಹೈಕೋರ್ಟ್‌ದೊಂದಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ” ಎಂದು ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಲಾಗಿದೆ.

“ಈ ನ್ಯಾಯಾಲಯದ ಆದೇಶಗಳ ಅವಿಧೇಯತೆ, ಉದ್ದೇಶಪೂರ್ವಕ ಅಸಹಕಾರದಂತಹ ಯಾವುದೇ ಲೋಪವನ್ನು ಮಾಡುವ ಉದ್ದೇಶವನ್ನು ನಾನು ಹೊಂದಿರಲಿಲ್ಲ. 18.02.2015 ರಂದು ಈ ಗೌರವಾನ್ವಿತ ನ್ಯಾಯಾಲಯವು ಅಂಗೀಕರಿಸಿದ ಆದೇಶದ ಪ್ರಕಾರ ಪ್ರಸಾರಕ್ಕೆ ನಿರ್ಬಂಧವಿರಲಿಲ್ಲ ಎಂಬ ಪ್ರಾಮಾಣಿಕ ನಂಬಿಕೆಯ ಅಡಿಯಲ್ಲಿ ಆಪಾದಿತ ಪ್ರಸಾರಗಳನ್ನು ಮಾಡಲಾಗಿದೆ. ಸದರಿ ಆದೇಶದಲ್ಲಿ ಈ ನ್ಯಾಯಾಲಯವು ಗುರುತಿಸಿದಂತೆ ಭಾರತದ ಸಂವಿಧಾನದ ವಿಧಿ 19 (1) (ಎ) ಅಡಿಯಲ್ಲಿ ನ್ಯಾಯಯುತ ವರದಿಯನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ವಕೀಲ ಅಮನ್ ಅವಿನಾವ್ ಮೂಲಕ ಅಫಿಡವಿಟ್‌ ಸಲ್ಲಿಸಲಾಗಿದೆ. ಗೋಸ್ವಾಮಿ ಅವರ ವಕೀಲರಾದ ಮಾಳವಿಕಾ ತ್ರಿವೇದಿ ಅವರು, “ತಮ್ಮ ಕಕ್ಷಿದಾರರ ಪರವಾಗಿ ಒಂದು ವಾರದೊಳಗೆ ಬೇಷರತ್ ಕ್ಷಮೆಯಾಚಿಸುವ ಅಫಿಡವಿಟ್ ಅನ್ನು ಸಲ್ಲಿಸಲಾಗುವುದು” ಎಂದು ನ್ಯಾಯಾಲಯದ ಮುಂದೆ ಏಪ್ರಿಲ್ 17ರಂದು ತಿಳಿಸಿದ್ದರು. ಏಪ್ರಿಲ್ 29ರಂದು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಮುಂದೆ ನಡೆದ ವಿಚಾರಣೆಯಲ್ಲಿ, ತ್ರಿವೇದಿ ಅವರು ಅಫಿಡವಿಟ್ ಪ್ರತಿಯನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದರು.

ಮತ್ತೊಂದೆಡೆ, ರಾಘವ್ ಓಹ್ರಿ ಅವರನ್ನು ಪ್ರತಿನಿಧಿಸುವ ವಕೀಲರು ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಎದ್ದಿರುವ ಆರೋಪಗಳ ಅರ್ಹತೆಯನ್ನು ನಮೂದಿಸದೆ, ವಿವಾದವನ್ನು ಶಮನಗೊಳಿಸುವ ಸಲುವಾಗಿ ಅವರು (ಅರ್ನಬ್‌) ಬೇಷರತ್ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ದಿ ಎಕನಾಮಿಕ್ ಟೈಮ್ಸ್ ಪರವಾಗಿಯೂ ಇದೇ ರೀತಿಯ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿ ಅರೋರಾ ಅವರಿಗೆ ತಿಳಿಸಲಾಯಿತು. ನಂತರ ನ್ಯಾಯಾಲಯವು ಪ್ರಕರಣವನ್ನು ಮೇ 22ರಂದು ವಿಚಾರಣೆಗೆ ಮುಂದೂಡಿತು.

ವಿಚಾರಣೆಯ ಆದೇಶವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಇನ್ನೂ ಅಪ್‌ಲೋಡ್ ಮಾಡಲಾಗಿಲ್ಲ. ಆದರೆ, ಪ್ರಕರಣದ ಸ್ಥಿತಿ ನೋಡಿದರೆ ಅದು ವಿಲೇವಾರಿಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ತನ್ನ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ವರದಿ, ಲೇಖನ ಅಥವಾ ಅಭಿಪ್ರಾಯವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು” ಎಂದು ಆರ್‌ಕೆ ಪಚೌರಿ ಕೋರ್ಟ್ ಮೊರೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....