Homeಮುಖಪುಟನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು 2016ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

2016ರಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ‘ಶಕ್ತಿ ಮತ್ತು ಸಂಪನ್ಮೂಲ ಸಂಸ್ಥೆ’ (ಟಿಇಆರ್‌ಇ) ಮಾಜಿ ಅಧ್ಯಕ್ಷ ಆರ್‌.ಕೆ.ಪಚೌರಿ ಮತ್ತು ಇತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಹೊರತಾಗಿಯೂ, ಮಾಧ್ಯಮಗಳಲ್ಲಿ ವರದಿ ಬಿತ್ತರಿಸಿದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ‌ 2016ರಲ್ಲಿ ಪ್ರಕರಣ ದಾಖಲಾದಾಗ ಗೋಸ್ವಾಮಿ ಟೈಮ್ಸ್ ನೌ ವಾಹಿನಿಯಲ್ಲಿದ್ದರು.

“ನಾನು ಈ ಮೂಲಕ ಈ ಗೌರವಾನ್ವಿತ ನ್ಯಾಯಾಲಯಕ್ಕೆ ನನ್ನ ಕ್ಷಮೆಯಾಚನೆಯನ್ನು ಸಲ್ಲಿಸುತ್ತೇನೆ. ಈ ಗೌರವಾನ್ವಿತ ನ್ಯಾಯಾಲಯವು ಕ್ಷಮಾಪಣೆಯನ್ನು ಸ್ವೀಕರಿಸಿ, ಹೇಳಿಕೆದಾರರ ವಿರುದ್ಧದ ತ್ವರಿತ ವಿಚಾರಣೆಯನ್ನು ಮುಕ್ತಾಯಗೊಳಿಸಲು ದಯಪಾಲಿಸಬೇಕೆಂದು ವಿನಂತಿಸುತ್ತೇನೆ” ಎಂದು ಗೋಸ್ವಾಮಿ ಅವರು ಏಪ್ರಿಲ್ 28 ರಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.

“ಕಾನೂನು ಪಾಲಿಸುವ ಮತ್ತು ದೇಶದ ಗೌರವಾನ್ವಿತ ನಾಗರಿಕ ಗೋಸ್ವಾಮಿ ಆಗಿದ್ದಾರೆ. ಎಲ್ಲಾ ನ್ಯಾಯಾಲಯಗಳನ್ನು ಹೆಚ್ಚು ಗೌರವಿಸುತ್ತಾರೆ. ದೆಹಲಿ ಹೈಕೋರ್ಟ್‌ದೊಂದಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ” ಎಂದು ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಲಾಗಿದೆ.

“ಈ ನ್ಯಾಯಾಲಯದ ಆದೇಶಗಳ ಅವಿಧೇಯತೆ, ಉದ್ದೇಶಪೂರ್ವಕ ಅಸಹಕಾರದಂತಹ ಯಾವುದೇ ಲೋಪವನ್ನು ಮಾಡುವ ಉದ್ದೇಶವನ್ನು ನಾನು ಹೊಂದಿರಲಿಲ್ಲ. 18.02.2015 ರಂದು ಈ ಗೌರವಾನ್ವಿತ ನ್ಯಾಯಾಲಯವು ಅಂಗೀಕರಿಸಿದ ಆದೇಶದ ಪ್ರಕಾರ ಪ್ರಸಾರಕ್ಕೆ ನಿರ್ಬಂಧವಿರಲಿಲ್ಲ ಎಂಬ ಪ್ರಾಮಾಣಿಕ ನಂಬಿಕೆಯ ಅಡಿಯಲ್ಲಿ ಆಪಾದಿತ ಪ್ರಸಾರಗಳನ್ನು ಮಾಡಲಾಗಿದೆ. ಸದರಿ ಆದೇಶದಲ್ಲಿ ಈ ನ್ಯಾಯಾಲಯವು ಗುರುತಿಸಿದಂತೆ ಭಾರತದ ಸಂವಿಧಾನದ ವಿಧಿ 19 (1) (ಎ) ಅಡಿಯಲ್ಲಿ ನ್ಯಾಯಯುತ ವರದಿಯನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ವಕೀಲ ಅಮನ್ ಅವಿನಾವ್ ಮೂಲಕ ಅಫಿಡವಿಟ್‌ ಸಲ್ಲಿಸಲಾಗಿದೆ. ಗೋಸ್ವಾಮಿ ಅವರ ವಕೀಲರಾದ ಮಾಳವಿಕಾ ತ್ರಿವೇದಿ ಅವರು, “ತಮ್ಮ ಕಕ್ಷಿದಾರರ ಪರವಾಗಿ ಒಂದು ವಾರದೊಳಗೆ ಬೇಷರತ್ ಕ್ಷಮೆಯಾಚಿಸುವ ಅಫಿಡವಿಟ್ ಅನ್ನು ಸಲ್ಲಿಸಲಾಗುವುದು” ಎಂದು ನ್ಯಾಯಾಲಯದ ಮುಂದೆ ಏಪ್ರಿಲ್ 17ರಂದು ತಿಳಿಸಿದ್ದರು. ಏಪ್ರಿಲ್ 29ರಂದು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಮುಂದೆ ನಡೆದ ವಿಚಾರಣೆಯಲ್ಲಿ, ತ್ರಿವೇದಿ ಅವರು ಅಫಿಡವಿಟ್ ಪ್ರತಿಯನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದರು.

ಮತ್ತೊಂದೆಡೆ, ರಾಘವ್ ಓಹ್ರಿ ಅವರನ್ನು ಪ್ರತಿನಿಧಿಸುವ ವಕೀಲರು ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಎದ್ದಿರುವ ಆರೋಪಗಳ ಅರ್ಹತೆಯನ್ನು ನಮೂದಿಸದೆ, ವಿವಾದವನ್ನು ಶಮನಗೊಳಿಸುವ ಸಲುವಾಗಿ ಅವರು (ಅರ್ನಬ್‌) ಬೇಷರತ್ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ದಿ ಎಕನಾಮಿಕ್ ಟೈಮ್ಸ್ ಪರವಾಗಿಯೂ ಇದೇ ರೀತಿಯ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿ ಅರೋರಾ ಅವರಿಗೆ ತಿಳಿಸಲಾಯಿತು. ನಂತರ ನ್ಯಾಯಾಲಯವು ಪ್ರಕರಣವನ್ನು ಮೇ 22ರಂದು ವಿಚಾರಣೆಗೆ ಮುಂದೂಡಿತು.

ವಿಚಾರಣೆಯ ಆದೇಶವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಇನ್ನೂ ಅಪ್‌ಲೋಡ್ ಮಾಡಲಾಗಿಲ್ಲ. ಆದರೆ, ಪ್ರಕರಣದ ಸ್ಥಿತಿ ನೋಡಿದರೆ ಅದು ವಿಲೇವಾರಿಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ತನ್ನ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ವರದಿ, ಲೇಖನ ಅಥವಾ ಅಭಿಪ್ರಾಯವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು” ಎಂದು ಆರ್‌ಕೆ ಪಚೌರಿ ಕೋರ್ಟ್ ಮೊರೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...