Homeಮುಖಪುಟನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು 2016ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

2016ರಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ‘ಶಕ್ತಿ ಮತ್ತು ಸಂಪನ್ಮೂಲ ಸಂಸ್ಥೆ’ (ಟಿಇಆರ್‌ಇ) ಮಾಜಿ ಅಧ್ಯಕ್ಷ ಆರ್‌.ಕೆ.ಪಚೌರಿ ಮತ್ತು ಇತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಹೊರತಾಗಿಯೂ, ಮಾಧ್ಯಮಗಳಲ್ಲಿ ವರದಿ ಬಿತ್ತರಿಸಿದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ‌ 2016ರಲ್ಲಿ ಪ್ರಕರಣ ದಾಖಲಾದಾಗ ಗೋಸ್ವಾಮಿ ಟೈಮ್ಸ್ ನೌ ವಾಹಿನಿಯಲ್ಲಿದ್ದರು.

“ನಾನು ಈ ಮೂಲಕ ಈ ಗೌರವಾನ್ವಿತ ನ್ಯಾಯಾಲಯಕ್ಕೆ ನನ್ನ ಕ್ಷಮೆಯಾಚನೆಯನ್ನು ಸಲ್ಲಿಸುತ್ತೇನೆ. ಈ ಗೌರವಾನ್ವಿತ ನ್ಯಾಯಾಲಯವು ಕ್ಷಮಾಪಣೆಯನ್ನು ಸ್ವೀಕರಿಸಿ, ಹೇಳಿಕೆದಾರರ ವಿರುದ್ಧದ ತ್ವರಿತ ವಿಚಾರಣೆಯನ್ನು ಮುಕ್ತಾಯಗೊಳಿಸಲು ದಯಪಾಲಿಸಬೇಕೆಂದು ವಿನಂತಿಸುತ್ತೇನೆ” ಎಂದು ಗೋಸ್ವಾಮಿ ಅವರು ಏಪ್ರಿಲ್ 28 ರಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.

“ಕಾನೂನು ಪಾಲಿಸುವ ಮತ್ತು ದೇಶದ ಗೌರವಾನ್ವಿತ ನಾಗರಿಕ ಗೋಸ್ವಾಮಿ ಆಗಿದ್ದಾರೆ. ಎಲ್ಲಾ ನ್ಯಾಯಾಲಯಗಳನ್ನು ಹೆಚ್ಚು ಗೌರವಿಸುತ್ತಾರೆ. ದೆಹಲಿ ಹೈಕೋರ್ಟ್‌ದೊಂದಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ” ಎಂದು ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಲಾಗಿದೆ.

“ಈ ನ್ಯಾಯಾಲಯದ ಆದೇಶಗಳ ಅವಿಧೇಯತೆ, ಉದ್ದೇಶಪೂರ್ವಕ ಅಸಹಕಾರದಂತಹ ಯಾವುದೇ ಲೋಪವನ್ನು ಮಾಡುವ ಉದ್ದೇಶವನ್ನು ನಾನು ಹೊಂದಿರಲಿಲ್ಲ. 18.02.2015 ರಂದು ಈ ಗೌರವಾನ್ವಿತ ನ್ಯಾಯಾಲಯವು ಅಂಗೀಕರಿಸಿದ ಆದೇಶದ ಪ್ರಕಾರ ಪ್ರಸಾರಕ್ಕೆ ನಿರ್ಬಂಧವಿರಲಿಲ್ಲ ಎಂಬ ಪ್ರಾಮಾಣಿಕ ನಂಬಿಕೆಯ ಅಡಿಯಲ್ಲಿ ಆಪಾದಿತ ಪ್ರಸಾರಗಳನ್ನು ಮಾಡಲಾಗಿದೆ. ಸದರಿ ಆದೇಶದಲ್ಲಿ ಈ ನ್ಯಾಯಾಲಯವು ಗುರುತಿಸಿದಂತೆ ಭಾರತದ ಸಂವಿಧಾನದ ವಿಧಿ 19 (1) (ಎ) ಅಡಿಯಲ್ಲಿ ನ್ಯಾಯಯುತ ವರದಿಯನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ವಕೀಲ ಅಮನ್ ಅವಿನಾವ್ ಮೂಲಕ ಅಫಿಡವಿಟ್‌ ಸಲ್ಲಿಸಲಾಗಿದೆ. ಗೋಸ್ವಾಮಿ ಅವರ ವಕೀಲರಾದ ಮಾಳವಿಕಾ ತ್ರಿವೇದಿ ಅವರು, “ತಮ್ಮ ಕಕ್ಷಿದಾರರ ಪರವಾಗಿ ಒಂದು ವಾರದೊಳಗೆ ಬೇಷರತ್ ಕ್ಷಮೆಯಾಚಿಸುವ ಅಫಿಡವಿಟ್ ಅನ್ನು ಸಲ್ಲಿಸಲಾಗುವುದು” ಎಂದು ನ್ಯಾಯಾಲಯದ ಮುಂದೆ ಏಪ್ರಿಲ್ 17ರಂದು ತಿಳಿಸಿದ್ದರು. ಏಪ್ರಿಲ್ 29ರಂದು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಮುಂದೆ ನಡೆದ ವಿಚಾರಣೆಯಲ್ಲಿ, ತ್ರಿವೇದಿ ಅವರು ಅಫಿಡವಿಟ್ ಪ್ರತಿಯನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದರು.

ಮತ್ತೊಂದೆಡೆ, ರಾಘವ್ ಓಹ್ರಿ ಅವರನ್ನು ಪ್ರತಿನಿಧಿಸುವ ವಕೀಲರು ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಎದ್ದಿರುವ ಆರೋಪಗಳ ಅರ್ಹತೆಯನ್ನು ನಮೂದಿಸದೆ, ವಿವಾದವನ್ನು ಶಮನಗೊಳಿಸುವ ಸಲುವಾಗಿ ಅವರು (ಅರ್ನಬ್‌) ಬೇಷರತ್ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ದಿ ಎಕನಾಮಿಕ್ ಟೈಮ್ಸ್ ಪರವಾಗಿಯೂ ಇದೇ ರೀತಿಯ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿ ಅರೋರಾ ಅವರಿಗೆ ತಿಳಿಸಲಾಯಿತು. ನಂತರ ನ್ಯಾಯಾಲಯವು ಪ್ರಕರಣವನ್ನು ಮೇ 22ರಂದು ವಿಚಾರಣೆಗೆ ಮುಂದೂಡಿತು.

ವಿಚಾರಣೆಯ ಆದೇಶವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಇನ್ನೂ ಅಪ್‌ಲೋಡ್ ಮಾಡಲಾಗಿಲ್ಲ. ಆದರೆ, ಪ್ರಕರಣದ ಸ್ಥಿತಿ ನೋಡಿದರೆ ಅದು ವಿಲೇವಾರಿಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ತನ್ನ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ವರದಿ, ಲೇಖನ ಅಥವಾ ಅಭಿಪ್ರಾಯವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು” ಎಂದು ಆರ್‌ಕೆ ಪಚೌರಿ ಕೋರ್ಟ್ ಮೊರೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...