Homeಮುಖಪುಟನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು 2016ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

2016ರಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ‘ಶಕ್ತಿ ಮತ್ತು ಸಂಪನ್ಮೂಲ ಸಂಸ್ಥೆ’ (ಟಿಇಆರ್‌ಇ) ಮಾಜಿ ಅಧ್ಯಕ್ಷ ಆರ್‌.ಕೆ.ಪಚೌರಿ ಮತ್ತು ಇತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಹೊರತಾಗಿಯೂ, ಮಾಧ್ಯಮಗಳಲ್ಲಿ ವರದಿ ಬಿತ್ತರಿಸಿದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ‌ 2016ರಲ್ಲಿ ಪ್ರಕರಣ ದಾಖಲಾದಾಗ ಗೋಸ್ವಾಮಿ ಟೈಮ್ಸ್ ನೌ ವಾಹಿನಿಯಲ್ಲಿದ್ದರು.

“ನಾನು ಈ ಮೂಲಕ ಈ ಗೌರವಾನ್ವಿತ ನ್ಯಾಯಾಲಯಕ್ಕೆ ನನ್ನ ಕ್ಷಮೆಯಾಚನೆಯನ್ನು ಸಲ್ಲಿಸುತ್ತೇನೆ. ಈ ಗೌರವಾನ್ವಿತ ನ್ಯಾಯಾಲಯವು ಕ್ಷಮಾಪಣೆಯನ್ನು ಸ್ವೀಕರಿಸಿ, ಹೇಳಿಕೆದಾರರ ವಿರುದ್ಧದ ತ್ವರಿತ ವಿಚಾರಣೆಯನ್ನು ಮುಕ್ತಾಯಗೊಳಿಸಲು ದಯಪಾಲಿಸಬೇಕೆಂದು ವಿನಂತಿಸುತ್ತೇನೆ” ಎಂದು ಗೋಸ್ವಾಮಿ ಅವರು ಏಪ್ರಿಲ್ 28 ರಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.

“ಕಾನೂನು ಪಾಲಿಸುವ ಮತ್ತು ದೇಶದ ಗೌರವಾನ್ವಿತ ನಾಗರಿಕ ಗೋಸ್ವಾಮಿ ಆಗಿದ್ದಾರೆ. ಎಲ್ಲಾ ನ್ಯಾಯಾಲಯಗಳನ್ನು ಹೆಚ್ಚು ಗೌರವಿಸುತ್ತಾರೆ. ದೆಹಲಿ ಹೈಕೋರ್ಟ್‌ದೊಂದಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ” ಎಂದು ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಲಾಗಿದೆ.

“ಈ ನ್ಯಾಯಾಲಯದ ಆದೇಶಗಳ ಅವಿಧೇಯತೆ, ಉದ್ದೇಶಪೂರ್ವಕ ಅಸಹಕಾರದಂತಹ ಯಾವುದೇ ಲೋಪವನ್ನು ಮಾಡುವ ಉದ್ದೇಶವನ್ನು ನಾನು ಹೊಂದಿರಲಿಲ್ಲ. 18.02.2015 ರಂದು ಈ ಗೌರವಾನ್ವಿತ ನ್ಯಾಯಾಲಯವು ಅಂಗೀಕರಿಸಿದ ಆದೇಶದ ಪ್ರಕಾರ ಪ್ರಸಾರಕ್ಕೆ ನಿರ್ಬಂಧವಿರಲಿಲ್ಲ ಎಂಬ ಪ್ರಾಮಾಣಿಕ ನಂಬಿಕೆಯ ಅಡಿಯಲ್ಲಿ ಆಪಾದಿತ ಪ್ರಸಾರಗಳನ್ನು ಮಾಡಲಾಗಿದೆ. ಸದರಿ ಆದೇಶದಲ್ಲಿ ಈ ನ್ಯಾಯಾಲಯವು ಗುರುತಿಸಿದಂತೆ ಭಾರತದ ಸಂವಿಧಾನದ ವಿಧಿ 19 (1) (ಎ) ಅಡಿಯಲ್ಲಿ ನ್ಯಾಯಯುತ ವರದಿಯನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ವಕೀಲ ಅಮನ್ ಅವಿನಾವ್ ಮೂಲಕ ಅಫಿಡವಿಟ್‌ ಸಲ್ಲಿಸಲಾಗಿದೆ. ಗೋಸ್ವಾಮಿ ಅವರ ವಕೀಲರಾದ ಮಾಳವಿಕಾ ತ್ರಿವೇದಿ ಅವರು, “ತಮ್ಮ ಕಕ್ಷಿದಾರರ ಪರವಾಗಿ ಒಂದು ವಾರದೊಳಗೆ ಬೇಷರತ್ ಕ್ಷಮೆಯಾಚಿಸುವ ಅಫಿಡವಿಟ್ ಅನ್ನು ಸಲ್ಲಿಸಲಾಗುವುದು” ಎಂದು ನ್ಯಾಯಾಲಯದ ಮುಂದೆ ಏಪ್ರಿಲ್ 17ರಂದು ತಿಳಿಸಿದ್ದರು. ಏಪ್ರಿಲ್ 29ರಂದು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಮುಂದೆ ನಡೆದ ವಿಚಾರಣೆಯಲ್ಲಿ, ತ್ರಿವೇದಿ ಅವರು ಅಫಿಡವಿಟ್ ಪ್ರತಿಯನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದರು.

ಮತ್ತೊಂದೆಡೆ, ರಾಘವ್ ಓಹ್ರಿ ಅವರನ್ನು ಪ್ರತಿನಿಧಿಸುವ ವಕೀಲರು ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಎದ್ದಿರುವ ಆರೋಪಗಳ ಅರ್ಹತೆಯನ್ನು ನಮೂದಿಸದೆ, ವಿವಾದವನ್ನು ಶಮನಗೊಳಿಸುವ ಸಲುವಾಗಿ ಅವರು (ಅರ್ನಬ್‌) ಬೇಷರತ್ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ದಿ ಎಕನಾಮಿಕ್ ಟೈಮ್ಸ್ ಪರವಾಗಿಯೂ ಇದೇ ರೀತಿಯ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿ ಅರೋರಾ ಅವರಿಗೆ ತಿಳಿಸಲಾಯಿತು. ನಂತರ ನ್ಯಾಯಾಲಯವು ಪ್ರಕರಣವನ್ನು ಮೇ 22ರಂದು ವಿಚಾರಣೆಗೆ ಮುಂದೂಡಿತು.

ವಿಚಾರಣೆಯ ಆದೇಶವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಇನ್ನೂ ಅಪ್‌ಲೋಡ್ ಮಾಡಲಾಗಿಲ್ಲ. ಆದರೆ, ಪ್ರಕರಣದ ಸ್ಥಿತಿ ನೋಡಿದರೆ ಅದು ವಿಲೇವಾರಿಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ತನ್ನ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ವರದಿ, ಲೇಖನ ಅಥವಾ ಅಭಿಪ್ರಾಯವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು” ಎಂದು ಆರ್‌ಕೆ ಪಚೌರಿ ಕೋರ್ಟ್ ಮೊರೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...