Homeಚಳವಳಿ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠ ಗುರುವಾರ ಹೋರಾಟಗಾರ ಸವುಕ್ಕು ಶಂಕರ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಜಿ.ಆರ್.ಸ್ವಾಮಿನಾಥನ್ ಮತ್ತು ಬಿ.ಪುಗಳೇಂತಿ ಅವರ ಪೀಠವು ಈ ಆದೇಶಕ್ಕೆ ತಡೆ ನೀಡಲು ಅಥವಾ ಸವುಕ್ಕು ಶಂಕರ್ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿತು.

ತಮ್ಮ ಹೇಳಿಕೆಗಳನ್ನು ಸಂದರ್ಭಕ್ಕೆ ಹೊರತಾಗಿ ಅರ್ಥೈಸಲಾಗಿದೆ ಮತ್ತು ತಾನು ಮಾತನಾಡಿದ್ದು ನ್ಯಾಯಾಂಗದ ಕಾಳಜಿಯಿಂದ ಎಂದು ಶಂಕರ್ ಅವರು ವಾದಿಸಿದ್ದರು. “ಅವರು ತಮ್ಮ ಹೇಳಿಕೆಯ ಬಗ್ಗೆ ಎಲ್ಲಿಯೂ ತಮ್ಮ ವಿಷಾದ ಅಥವಾ ಪಶ್ಚಾತ್ತಾಪವನ್ನು ವ್ಯಕ್ತಪಡಿಸಿಲ್ಲ ಮತ್ತು ಕ್ಷಮೆಯಾಚಿಸಲಿಲ್ಲ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಷ್ಟೆ ಅಲ್ಲದೆ, ಅವರು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿದ್ದಾರೆ. ಅವರ ಹೇಳಿಕೆಯು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಪ್ರತಿಷ್ಠೆ ಮತ್ತು ಘನತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ನಾವು ಭಾವಿಸುತ್ತೇವೆ” ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

ಸವಕ್ಕು ಶಂಕರ್ ಅವರು ತಮ್ಮ ಯೂಟ್ಯೂಬ್ ಸಂದರ್ಶನದಲ್ಲಿ, “ಇಡೀ ಉನ್ನತ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂಬ ಎಂದು ಆರೋಪಿಸಿದ್ದರು. ಜೊತೆಗೆ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದರು.

ಶಂಕರ್‌ ಅವರ ನಡೆಯು ಗಮನಿಸಲು ಅರ್ಹವಾಗಿದೆ ಎಂದು ಪೀಠ ಹೇಳಿದೆ. “ಶಂಕರ್ ಅವರು ತಮ್ಮ ತಪ್ಪನ್ನು ಅರಿತು ಪ್ರಾಮಾಣಿಕವಾಗಿ ಕ್ಷಮೆಯಾಚಿಸಿದ್ದರೆ ನ್ಯಾಯಾಲಯವು ಅವರ ವಿರುದ್ಧದ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತದೆ” ಎಂದು ಹೈಕೋರ್ಟ್‌ ಹೇಳಿದೆ. ಆದರೆ ಅವರು ಈವರೆಗೆ ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಹೈಕೋರ್ಟ್ ಹೇಳಿದೆ.

ಸವಕ್ಕು ಶಂಕರ್ ಅವರು ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್’ನಲ್ಲಿ ಮಾತನಾಡುತ್ತಾ, “ಇಡೀ ನ್ಯಾಯಾಂಗ ವ್ಯವಸ್ಥೆ ಭ್ರಷ್ಟಾಚಾರದಿಂದ ಕೂಡಿದೆ” ಎಂದು ಹೇಳಿದ್ದರು. ಈ ಹೇಳಿಕೆಯ ಆಧಾರದಲ್ಲಿ ಜುಲೈ 22 ರಂದು ಶಂಕರ್ ಅವರ ವಿರುದ್ಧ ಮಧುರೈ ಪೀಠವು ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಆಗಸ್ಟ್ 4 ರಂದು ಹೈಕೋರ್ಟ್ ಶಂಕರ್ ವಿರುದ್ಧ ಎರಡನೇ ಬಾರಿಗೆ ನೊಟೀಸ್ ಜಾರಿ ಮಾಡಿ, ತಮ್ಮ ಹೇಳಿಕೆಯ ವಿರುದ್ಧ ಏಕೆ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಪ್ರಾರಂಭಿಸಬಾರದು ಎಂದು ಕೇಳಿತ್ತು. ಇದರ ನಂತರ ಅವರು ನ್ಯಾಯಾಂಗದ ಬಗ್ಗೆ ತಾನು ನೀಡಿದ ಹೇಳಿಕೆಯನ್ನು ಸಮರ್ಥಿಸುವುದಾಗಿ ಮಧುರೈ ಪೀಠಕ್ಕೆ ತಿಳಿಸಿದ್ದರು.

ಗುರುವಾರ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ನೇಮಕಗೊಂಡಿರುವ ಅಮಿಕಸ್ ಕ್ಯೂರಿ ವಕೀಲ ಎ.ಎಲ್.ಸೋಮಯಾಜಿ ಅವರು, “ಶಂಕರ್ ಅವರ ಹೇಳಿಕೆಯು ನ್ಯಾಯಾಲಯವನ್ನು ದೂಷಿಸುವ ಉದ್ದೇಶದಿಂದ ಮಾಡಲಾಗಿದೆ” ಎಂದು ಪೀಠಕ್ಕೆ ತಿಳಿಸಿದ್ದಾರೆ.

ಗುರುವಾರದ ವಿಚಾರಣೆಯ ಸಮಯದಲ್ಲಿ, ಶಂಕರ್ ಅವರು, “ತಮ್ಮ ದೇಶವನ್ನು ತಾನು ತೀವ್ರವಾಗಿ ಪ್ರೀತಿಸುತ್ತೇನೆ ಮತ್ತು ರಾಷ್ಟ್ರದ ಸಂಸ್ಥೆಗಳನ್ನು ಬಲಪಡಿಸಬೇಕು. ಈ ಉದ್ದೇಶಕ್ಕಾಗಿಯೇ ತಾನು ಮಾತನಾಡುವುದು ಮತ್ತು ಬರೆಯುವುದು” ಎಂದು ಪೀಠದ ಮುಂದೆ ಲಿಖಿತ ಉತ್ತರವನ್ನು ನೀಡಿದ್ದಾರೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು, “ತಾನು ಇಂತಹ ಆದೇಶದ ಪರವಾಗಿಲ್ಲ. ಇಂತಹ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಸ್ವಲ್ಪ ಹೆಚ್ಚು ಉದಾರವಾಗಿರಬಹುದಿತ್ತು. ಬರೀ ಹೇಳಿಕೆಯೊಂದಕ್ಕೆ ಯಾರನ್ನೂ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಗುರುವಾರ ಸಂಜೆಯಿಂದ ಕನಿಷ್ಠ ಅರ್ಧ ಡಜನ್ ನ್ಯಾಯಾಧೀಶರು ನನಗೆ ಕರೆ ಮಾಡಿ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದು, ಶಿಕ್ಷೆಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿದರು. ನ್ಯಾಯಾಂಗ ನಿಂದನೆಯ ಅಧಿಕಾರವನ್ನು ತೆಗೆದುಹಾಕುವ ಪರವಾಗಿ ನಾನಿದ್ದೇನೆ. ನ್ಯಾಯಾಂಗ ನಿಂದನೆಯ ಶಿಕ್ಷೆಯು ನ್ಯಾಯಾಲಯದ ಘನತೆಯನ್ನು ಹೆಚ್ಚಿಸುವುದಿಲ್ಲ. ಈ ಸಂದರ್ಭದಲ್ಲಿ, ಅಳವಡಿಸಿಕೊಂಡ ವಿಧಾನವು ಸಂಪೂರ್ಣವಾಗಿ ದೋಷಪೂರಿತವಾಗಿದೆ. ನ್ಯಾಯಾಧೀಶರು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಬಾಕಿ ಇರುವ ಶಿಕ್ಷೆಯನ್ನು ಅಮಾನತುಗೊಳಿಸುವುದು, ಇದು ಶಾಸನಬದ್ಧ ಹಕ್ಕು” ಎಂದು ಜಸ್ಟಿಸ್ ಕೆ.ಚಂದ್ರು ಪ್ರತಿಪಾದಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಅವರ ಶಿಕ್ಷೆಯನ್ನು ಅಮಾನತುಗೊಳಿಸಲು ಮಧುರೈ ಪೀಠವು ನಿರಾಕರಿಸಿತು. ಶಂಕರ್ ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನವನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಐದನೇ ಪ್ರತಿವಾದಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸರ್ಕಾರದ ಕಾರ್ಯದರ್ಶಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...