Homeಚಳವಳಿ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠ ಗುರುವಾರ ಹೋರಾಟಗಾರ ಸವುಕ್ಕು ಶಂಕರ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಜಿ.ಆರ್.ಸ್ವಾಮಿನಾಥನ್ ಮತ್ತು ಬಿ.ಪುಗಳೇಂತಿ ಅವರ ಪೀಠವು ಈ ಆದೇಶಕ್ಕೆ ತಡೆ ನೀಡಲು ಅಥವಾ ಸವುಕ್ಕು ಶಂಕರ್ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿತು.

ತಮ್ಮ ಹೇಳಿಕೆಗಳನ್ನು ಸಂದರ್ಭಕ್ಕೆ ಹೊರತಾಗಿ ಅರ್ಥೈಸಲಾಗಿದೆ ಮತ್ತು ತಾನು ಮಾತನಾಡಿದ್ದು ನ್ಯಾಯಾಂಗದ ಕಾಳಜಿಯಿಂದ ಎಂದು ಶಂಕರ್ ಅವರು ವಾದಿಸಿದ್ದರು. “ಅವರು ತಮ್ಮ ಹೇಳಿಕೆಯ ಬಗ್ಗೆ ಎಲ್ಲಿಯೂ ತಮ್ಮ ವಿಷಾದ ಅಥವಾ ಪಶ್ಚಾತ್ತಾಪವನ್ನು ವ್ಯಕ್ತಪಡಿಸಿಲ್ಲ ಮತ್ತು ಕ್ಷಮೆಯಾಚಿಸಲಿಲ್ಲ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಷ್ಟೆ ಅಲ್ಲದೆ, ಅವರು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿದ್ದಾರೆ. ಅವರ ಹೇಳಿಕೆಯು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಪ್ರತಿಷ್ಠೆ ಮತ್ತು ಘನತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ನಾವು ಭಾವಿಸುತ್ತೇವೆ” ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

ಸವಕ್ಕು ಶಂಕರ್ ಅವರು ತಮ್ಮ ಯೂಟ್ಯೂಬ್ ಸಂದರ್ಶನದಲ್ಲಿ, “ಇಡೀ ಉನ್ನತ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂಬ ಎಂದು ಆರೋಪಿಸಿದ್ದರು. ಜೊತೆಗೆ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದರು.

ಶಂಕರ್‌ ಅವರ ನಡೆಯು ಗಮನಿಸಲು ಅರ್ಹವಾಗಿದೆ ಎಂದು ಪೀಠ ಹೇಳಿದೆ. “ಶಂಕರ್ ಅವರು ತಮ್ಮ ತಪ್ಪನ್ನು ಅರಿತು ಪ್ರಾಮಾಣಿಕವಾಗಿ ಕ್ಷಮೆಯಾಚಿಸಿದ್ದರೆ ನ್ಯಾಯಾಲಯವು ಅವರ ವಿರುದ್ಧದ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತದೆ” ಎಂದು ಹೈಕೋರ್ಟ್‌ ಹೇಳಿದೆ. ಆದರೆ ಅವರು ಈವರೆಗೆ ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಹೈಕೋರ್ಟ್ ಹೇಳಿದೆ.

ಸವಕ್ಕು ಶಂಕರ್ ಅವರು ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್’ನಲ್ಲಿ ಮಾತನಾಡುತ್ತಾ, “ಇಡೀ ನ್ಯಾಯಾಂಗ ವ್ಯವಸ್ಥೆ ಭ್ರಷ್ಟಾಚಾರದಿಂದ ಕೂಡಿದೆ” ಎಂದು ಹೇಳಿದ್ದರು. ಈ ಹೇಳಿಕೆಯ ಆಧಾರದಲ್ಲಿ ಜುಲೈ 22 ರಂದು ಶಂಕರ್ ಅವರ ವಿರುದ್ಧ ಮಧುರೈ ಪೀಠವು ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಆಗಸ್ಟ್ 4 ರಂದು ಹೈಕೋರ್ಟ್ ಶಂಕರ್ ವಿರುದ್ಧ ಎರಡನೇ ಬಾರಿಗೆ ನೊಟೀಸ್ ಜಾರಿ ಮಾಡಿ, ತಮ್ಮ ಹೇಳಿಕೆಯ ವಿರುದ್ಧ ಏಕೆ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಪ್ರಾರಂಭಿಸಬಾರದು ಎಂದು ಕೇಳಿತ್ತು. ಇದರ ನಂತರ ಅವರು ನ್ಯಾಯಾಂಗದ ಬಗ್ಗೆ ತಾನು ನೀಡಿದ ಹೇಳಿಕೆಯನ್ನು ಸಮರ್ಥಿಸುವುದಾಗಿ ಮಧುರೈ ಪೀಠಕ್ಕೆ ತಿಳಿಸಿದ್ದರು.

ಗುರುವಾರ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ನೇಮಕಗೊಂಡಿರುವ ಅಮಿಕಸ್ ಕ್ಯೂರಿ ವಕೀಲ ಎ.ಎಲ್.ಸೋಮಯಾಜಿ ಅವರು, “ಶಂಕರ್ ಅವರ ಹೇಳಿಕೆಯು ನ್ಯಾಯಾಲಯವನ್ನು ದೂಷಿಸುವ ಉದ್ದೇಶದಿಂದ ಮಾಡಲಾಗಿದೆ” ಎಂದು ಪೀಠಕ್ಕೆ ತಿಳಿಸಿದ್ದಾರೆ.

ಗುರುವಾರದ ವಿಚಾರಣೆಯ ಸಮಯದಲ್ಲಿ, ಶಂಕರ್ ಅವರು, “ತಮ್ಮ ದೇಶವನ್ನು ತಾನು ತೀವ್ರವಾಗಿ ಪ್ರೀತಿಸುತ್ತೇನೆ ಮತ್ತು ರಾಷ್ಟ್ರದ ಸಂಸ್ಥೆಗಳನ್ನು ಬಲಪಡಿಸಬೇಕು. ಈ ಉದ್ದೇಶಕ್ಕಾಗಿಯೇ ತಾನು ಮಾತನಾಡುವುದು ಮತ್ತು ಬರೆಯುವುದು” ಎಂದು ಪೀಠದ ಮುಂದೆ ಲಿಖಿತ ಉತ್ತರವನ್ನು ನೀಡಿದ್ದಾರೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು, “ತಾನು ಇಂತಹ ಆದೇಶದ ಪರವಾಗಿಲ್ಲ. ಇಂತಹ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಸ್ವಲ್ಪ ಹೆಚ್ಚು ಉದಾರವಾಗಿರಬಹುದಿತ್ತು. ಬರೀ ಹೇಳಿಕೆಯೊಂದಕ್ಕೆ ಯಾರನ್ನೂ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಗುರುವಾರ ಸಂಜೆಯಿಂದ ಕನಿಷ್ಠ ಅರ್ಧ ಡಜನ್ ನ್ಯಾಯಾಧೀಶರು ನನಗೆ ಕರೆ ಮಾಡಿ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದು, ಶಿಕ್ಷೆಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿದರು. ನ್ಯಾಯಾಂಗ ನಿಂದನೆಯ ಅಧಿಕಾರವನ್ನು ತೆಗೆದುಹಾಕುವ ಪರವಾಗಿ ನಾನಿದ್ದೇನೆ. ನ್ಯಾಯಾಂಗ ನಿಂದನೆಯ ಶಿಕ್ಷೆಯು ನ್ಯಾಯಾಲಯದ ಘನತೆಯನ್ನು ಹೆಚ್ಚಿಸುವುದಿಲ್ಲ. ಈ ಸಂದರ್ಭದಲ್ಲಿ, ಅಳವಡಿಸಿಕೊಂಡ ವಿಧಾನವು ಸಂಪೂರ್ಣವಾಗಿ ದೋಷಪೂರಿತವಾಗಿದೆ. ನ್ಯಾಯಾಧೀಶರು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಬಾಕಿ ಇರುವ ಶಿಕ್ಷೆಯನ್ನು ಅಮಾನತುಗೊಳಿಸುವುದು, ಇದು ಶಾಸನಬದ್ಧ ಹಕ್ಕು” ಎಂದು ಜಸ್ಟಿಸ್ ಕೆ.ಚಂದ್ರು ಪ್ರತಿಪಾದಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಅವರ ಶಿಕ್ಷೆಯನ್ನು ಅಮಾನತುಗೊಳಿಸಲು ಮಧುರೈ ಪೀಠವು ನಿರಾಕರಿಸಿತು. ಶಂಕರ್ ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನವನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಐದನೇ ಪ್ರತಿವಾದಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸರ್ಕಾರದ ಕಾರ್ಯದರ್ಶಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...