Homeಚಳವಳಿ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠ ಗುರುವಾರ ಹೋರಾಟಗಾರ ಸವುಕ್ಕು ಶಂಕರ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಜಿ.ಆರ್.ಸ್ವಾಮಿನಾಥನ್ ಮತ್ತು ಬಿ.ಪುಗಳೇಂತಿ ಅವರ ಪೀಠವು ಈ ಆದೇಶಕ್ಕೆ ತಡೆ ನೀಡಲು ಅಥವಾ ಸವುಕ್ಕು ಶಂಕರ್ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿತು.

ತಮ್ಮ ಹೇಳಿಕೆಗಳನ್ನು ಸಂದರ್ಭಕ್ಕೆ ಹೊರತಾಗಿ ಅರ್ಥೈಸಲಾಗಿದೆ ಮತ್ತು ತಾನು ಮಾತನಾಡಿದ್ದು ನ್ಯಾಯಾಂಗದ ಕಾಳಜಿಯಿಂದ ಎಂದು ಶಂಕರ್ ಅವರು ವಾದಿಸಿದ್ದರು. “ಅವರು ತಮ್ಮ ಹೇಳಿಕೆಯ ಬಗ್ಗೆ ಎಲ್ಲಿಯೂ ತಮ್ಮ ವಿಷಾದ ಅಥವಾ ಪಶ್ಚಾತ್ತಾಪವನ್ನು ವ್ಯಕ್ತಪಡಿಸಿಲ್ಲ ಮತ್ತು ಕ್ಷಮೆಯಾಚಿಸಲಿಲ್ಲ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಷ್ಟೆ ಅಲ್ಲದೆ, ಅವರು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿದ್ದಾರೆ. ಅವರ ಹೇಳಿಕೆಯು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಪ್ರತಿಷ್ಠೆ ಮತ್ತು ಘನತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ನಾವು ಭಾವಿಸುತ್ತೇವೆ” ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

ಸವಕ್ಕು ಶಂಕರ್ ಅವರು ತಮ್ಮ ಯೂಟ್ಯೂಬ್ ಸಂದರ್ಶನದಲ್ಲಿ, “ಇಡೀ ಉನ್ನತ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂಬ ಎಂದು ಆರೋಪಿಸಿದ್ದರು. ಜೊತೆಗೆ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದರು.

ಶಂಕರ್‌ ಅವರ ನಡೆಯು ಗಮನಿಸಲು ಅರ್ಹವಾಗಿದೆ ಎಂದು ಪೀಠ ಹೇಳಿದೆ. “ಶಂಕರ್ ಅವರು ತಮ್ಮ ತಪ್ಪನ್ನು ಅರಿತು ಪ್ರಾಮಾಣಿಕವಾಗಿ ಕ್ಷಮೆಯಾಚಿಸಿದ್ದರೆ ನ್ಯಾಯಾಲಯವು ಅವರ ವಿರುದ್ಧದ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತದೆ” ಎಂದು ಹೈಕೋರ್ಟ್‌ ಹೇಳಿದೆ. ಆದರೆ ಅವರು ಈವರೆಗೆ ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಹೈಕೋರ್ಟ್ ಹೇಳಿದೆ.

ಸವಕ್ಕು ಶಂಕರ್ ಅವರು ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್’ನಲ್ಲಿ ಮಾತನಾಡುತ್ತಾ, “ಇಡೀ ನ್ಯಾಯಾಂಗ ವ್ಯವಸ್ಥೆ ಭ್ರಷ್ಟಾಚಾರದಿಂದ ಕೂಡಿದೆ” ಎಂದು ಹೇಳಿದ್ದರು. ಈ ಹೇಳಿಕೆಯ ಆಧಾರದಲ್ಲಿ ಜುಲೈ 22 ರಂದು ಶಂಕರ್ ಅವರ ವಿರುದ್ಧ ಮಧುರೈ ಪೀಠವು ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಆಗಸ್ಟ್ 4 ರಂದು ಹೈಕೋರ್ಟ್ ಶಂಕರ್ ವಿರುದ್ಧ ಎರಡನೇ ಬಾರಿಗೆ ನೊಟೀಸ್ ಜಾರಿ ಮಾಡಿ, ತಮ್ಮ ಹೇಳಿಕೆಯ ವಿರುದ್ಧ ಏಕೆ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಪ್ರಾರಂಭಿಸಬಾರದು ಎಂದು ಕೇಳಿತ್ತು. ಇದರ ನಂತರ ಅವರು ನ್ಯಾಯಾಂಗದ ಬಗ್ಗೆ ತಾನು ನೀಡಿದ ಹೇಳಿಕೆಯನ್ನು ಸಮರ್ಥಿಸುವುದಾಗಿ ಮಧುರೈ ಪೀಠಕ್ಕೆ ತಿಳಿಸಿದ್ದರು.

ಗುರುವಾರ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ನೇಮಕಗೊಂಡಿರುವ ಅಮಿಕಸ್ ಕ್ಯೂರಿ ವಕೀಲ ಎ.ಎಲ್.ಸೋಮಯಾಜಿ ಅವರು, “ಶಂಕರ್ ಅವರ ಹೇಳಿಕೆಯು ನ್ಯಾಯಾಲಯವನ್ನು ದೂಷಿಸುವ ಉದ್ದೇಶದಿಂದ ಮಾಡಲಾಗಿದೆ” ಎಂದು ಪೀಠಕ್ಕೆ ತಿಳಿಸಿದ್ದಾರೆ.

ಗುರುವಾರದ ವಿಚಾರಣೆಯ ಸಮಯದಲ್ಲಿ, ಶಂಕರ್ ಅವರು, “ತಮ್ಮ ದೇಶವನ್ನು ತಾನು ತೀವ್ರವಾಗಿ ಪ್ರೀತಿಸುತ್ತೇನೆ ಮತ್ತು ರಾಷ್ಟ್ರದ ಸಂಸ್ಥೆಗಳನ್ನು ಬಲಪಡಿಸಬೇಕು. ಈ ಉದ್ದೇಶಕ್ಕಾಗಿಯೇ ತಾನು ಮಾತನಾಡುವುದು ಮತ್ತು ಬರೆಯುವುದು” ಎಂದು ಪೀಠದ ಮುಂದೆ ಲಿಖಿತ ಉತ್ತರವನ್ನು ನೀಡಿದ್ದಾರೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು, “ತಾನು ಇಂತಹ ಆದೇಶದ ಪರವಾಗಿಲ್ಲ. ಇಂತಹ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಸ್ವಲ್ಪ ಹೆಚ್ಚು ಉದಾರವಾಗಿರಬಹುದಿತ್ತು. ಬರೀ ಹೇಳಿಕೆಯೊಂದಕ್ಕೆ ಯಾರನ್ನೂ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಗುರುವಾರ ಸಂಜೆಯಿಂದ ಕನಿಷ್ಠ ಅರ್ಧ ಡಜನ್ ನ್ಯಾಯಾಧೀಶರು ನನಗೆ ಕರೆ ಮಾಡಿ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದು, ಶಿಕ್ಷೆಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿದರು. ನ್ಯಾಯಾಂಗ ನಿಂದನೆಯ ಅಧಿಕಾರವನ್ನು ತೆಗೆದುಹಾಕುವ ಪರವಾಗಿ ನಾನಿದ್ದೇನೆ. ನ್ಯಾಯಾಂಗ ನಿಂದನೆಯ ಶಿಕ್ಷೆಯು ನ್ಯಾಯಾಲಯದ ಘನತೆಯನ್ನು ಹೆಚ್ಚಿಸುವುದಿಲ್ಲ. ಈ ಸಂದರ್ಭದಲ್ಲಿ, ಅಳವಡಿಸಿಕೊಂಡ ವಿಧಾನವು ಸಂಪೂರ್ಣವಾಗಿ ದೋಷಪೂರಿತವಾಗಿದೆ. ನ್ಯಾಯಾಧೀಶರು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಬಾಕಿ ಇರುವ ಶಿಕ್ಷೆಯನ್ನು ಅಮಾನತುಗೊಳಿಸುವುದು, ಇದು ಶಾಸನಬದ್ಧ ಹಕ್ಕು” ಎಂದು ಜಸ್ಟಿಸ್ ಕೆ.ಚಂದ್ರು ಪ್ರತಿಪಾದಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಅವರ ಶಿಕ್ಷೆಯನ್ನು ಅಮಾನತುಗೊಳಿಸಲು ಮಧುರೈ ಪೀಠವು ನಿರಾಕರಿಸಿತು. ಶಂಕರ್ ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನವನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಐದನೇ ಪ್ರತಿವಾದಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸರ್ಕಾರದ ಕಾರ್ಯದರ್ಶಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...