Homeಮುಖಪುಟಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

- Advertisement -
- Advertisement -

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಇಬ್ಬರು ಕಾನೂನು ವಿದ್ಯಾರ್ಥಿಗಳಾದ ನಿಶಾಂತ್ ಕಾಟ್ನೇಶ್ವರ್ಕರ್ ಮತ್ತು ಸ್ಕಂದ್ ಬಾಜ್ಪೈ ಮತ್ತು ವಕೀಲ ಅಭಿಜುದಾಯ ಮಿಶ್ರಾ ಸಲ್ಲಿಸಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರಕ್ಕೆ ಕಾದಿರಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ನಾಳೆ ಶುಕ್ರವಾರ ಆದೇಶ ಹೊರಡಿಸಲಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕಮ್ರಾ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿ, ಕಮ್ರಾ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದರು.

ಇದೆ ವೇಳೆ,  “ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ತಿಳಿಸಿದ್ದರು.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

ಇದರಿಂದ, ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

ಪ್ರಕರಣದ ಕುರಿತು ಮತ್ತೆ ಟ್ವೀಟ್ ಮಾಡಿದ್ದ ಕಮ್ರಾ, ’ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದಿದ್ದರು. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಅಟರ್ನಿ ಜನರಲ್ ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು.


ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...