Homeಮುಖಪುಟಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸಬೇಕು ಎಂದು ಹೇಳಿದರು.

- Advertisement -
- Advertisement -

ಸಮಾಜದ ನಡುವೆ ಅವಮಾನ ಮತ್ತು ಅಪಹಾಸ್ಯಕ್ಕೊಳಗಾಗಿ ಬದುಕುತ್ತಿರುವ ಟ್ರಾನ್ಸ್‌ಜೆಂಡರ್ (ಮಂಗಳಮುಖಿಯರು) ಸಮುದಾಯ ಇದೀಗ ಸ್ವಲ್ಪಮಟ್ಟಿಗೆ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಲು ಆರಂಭಿಸಿದೆ. ತಮ್ಮ ದ್ವಂದ್ವತೆಯ ಅಸ್ಮಿತೆಯನ್ನು ಮೀರಿ ಸಮಕಾಲೀನ ಸಮಾಜದಲ್ಲಿ ಭದ್ರ ನೆಲೆಯೊಂದನ್ನು ಕಂಡುಕೊಳ್ಳಲು ಹವಣಿಸುತ್ತಾ ಎಲ್ಲಿಯಾದರೂ ಅವಕಾಶ ಸಿಕ್ಕರೆ ಅದನ್ನು ಸಂಪೂರ್ಣ ಉಪಯೋಗಿಸಿಕೊಳ್ಳುವತ್ತ ಸಾಗಿದೆ. ಈ ನಿಟ್ಟಿನಲ್ಲಿ ಕೇರಳದ ಎರ್ನಾಕುಳಂ ಮತ್ತು ಕಣ್ಣೂರಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಬ್ಬರು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸೇರಿದವರು ಭಾಗವಹಿಸುತ್ತಿದ್ದು, ಇತರ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ.

ಶೆರಿನ್ ಆಂಟನಿ ಮತ್ತು ಸ್ನೇಹ.ಕೆ ಎನ್ನುವವರು ಇಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದು, ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ಕೊಚ್ಚಿ ಕಾರ್ಪೊರೇಶನ್‌ನ 26 ನೇ ವಿಭಾಗದಿಂದ ಸ್ಪರ್ಧಿಸಲಿರುವ ಶೆರಿನ್, “ನಮ್ಮ ಸಮುದಾಯದ ಇತರ ಸದಸ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಒಬ್ಬ ಟ್ರಾನ್ಸ್‌ಜೆಂಡರ್ ಮಾತ್ರ ಅರ್ಥಮಾಡಿಕೊಳ್ಳಲು ಸಾಧ್ಯ. ಆದ್ದರಿಂದ, ನಾನು ಸ್ಪರ್ಧಿಸಲು ನಿರ್ಧರಿಸಿದೆ. ಇಲ್ಲಿನ ಜನರು ಜನ ಪ್ರತಿನಿಧಿಗಳ ಕೊರತೆಯಿಂದ ಬೇಸರಗೊಂಡಿದ್ದಾರೆ. ಅವರಿಗೆ ಬದಲಾವಣೆಯ ಅಗತ್ಯವಿದೆ. ಈ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯು ಅದನ್ನು ತರಬಹುದು” ಎಂದು ಸಿಪಿಎಂ ಬೆಂಬಲಿತ ಡೆಮಾಕ್ರಟಿಕ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್ ಆಫ್ ಕೇರಳದ ರಾಜ್ಯ ಅಧ್ಯಕ್ಷೆ ಶೆರಿನ್ ಹೇಳಿದರು.

“ನಾವು ನೀರಿನ ಸಮಸ್ಯೆಯಿಂದ ಹಿಡಿದು ನಾಗರಿಕ ಮತ್ತು ಅಭಿವೃದ್ಧಿ-ಸಂಬಂಧಿತ ಸಮಸ್ಯೆಗಳವರೆಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ನಾನು ಅವುಗಳನ್ನು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಶೆರಿನ್ ಹೇಳಿದರು.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ಕಣ್ಣೂರು ವಿಭಾಗದ ಕಿಳುನ್ನಾದಿಂದ (ವಿಭಾಗ 36) ಸ್ಪರ್ಧಿಸುತ್ತಿರುವ ತೊಟ್ಟಡಾದ ಸಮಾಜವಾದಿ ಕಾಲೋನಿಯ ನಿವಾಸಿ ಸ್ನೇಹಾ.ಕೆ, ಮುಖ್ಯವಾಹಿನಿಯ ರಾಜಕೀಯ ಪಕ್ಷಗಳ ಪುರುಷರು ಮತ್ತು ಮಹಿಳೆಯರು ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈಗ ನಮ್ಮ ಸಮುದಾಯವು ಹೆಜ್ಜೆ ಹಾಕುವ ಸಮಯ ಇದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ ಅಥವಾ ಭರವಸೆಗಳಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಬದಲಿಗೆ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸುವುದು ಅಗತ್ಯವಾಗಿದೆ. ನಮ್ಮ ಕ್ಷೇತ್ರದಲ್ಲಿರುವ ಜನರೆಲ್ಲರೂ ಉತ್ತಮವಾದ ಬೆಂಬಲವನ್ನು ಸೂಚಿಸಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...