Homeಮುಖಪುಟಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸಬೇಕು ಎಂದು ಹೇಳಿದರು.

- Advertisement -
- Advertisement -

ಸಮಾಜದ ನಡುವೆ ಅವಮಾನ ಮತ್ತು ಅಪಹಾಸ್ಯಕ್ಕೊಳಗಾಗಿ ಬದುಕುತ್ತಿರುವ ಟ್ರಾನ್ಸ್‌ಜೆಂಡರ್ (ಮಂಗಳಮುಖಿಯರು) ಸಮುದಾಯ ಇದೀಗ ಸ್ವಲ್ಪಮಟ್ಟಿಗೆ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಲು ಆರಂಭಿಸಿದೆ. ತಮ್ಮ ದ್ವಂದ್ವತೆಯ ಅಸ್ಮಿತೆಯನ್ನು ಮೀರಿ ಸಮಕಾಲೀನ ಸಮಾಜದಲ್ಲಿ ಭದ್ರ ನೆಲೆಯೊಂದನ್ನು ಕಂಡುಕೊಳ್ಳಲು ಹವಣಿಸುತ್ತಾ ಎಲ್ಲಿಯಾದರೂ ಅವಕಾಶ ಸಿಕ್ಕರೆ ಅದನ್ನು ಸಂಪೂರ್ಣ ಉಪಯೋಗಿಸಿಕೊಳ್ಳುವತ್ತ ಸಾಗಿದೆ. ಈ ನಿಟ್ಟಿನಲ್ಲಿ ಕೇರಳದ ಎರ್ನಾಕುಳಂ ಮತ್ತು ಕಣ್ಣೂರಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಬ್ಬರು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸೇರಿದವರು ಭಾಗವಹಿಸುತ್ತಿದ್ದು, ಇತರ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ.

ಶೆರಿನ್ ಆಂಟನಿ ಮತ್ತು ಸ್ನೇಹ.ಕೆ ಎನ್ನುವವರು ಇಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದು, ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ಕೊಚ್ಚಿ ಕಾರ್ಪೊರೇಶನ್‌ನ 26 ನೇ ವಿಭಾಗದಿಂದ ಸ್ಪರ್ಧಿಸಲಿರುವ ಶೆರಿನ್, “ನಮ್ಮ ಸಮುದಾಯದ ಇತರ ಸದಸ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಒಬ್ಬ ಟ್ರಾನ್ಸ್‌ಜೆಂಡರ್ ಮಾತ್ರ ಅರ್ಥಮಾಡಿಕೊಳ್ಳಲು ಸಾಧ್ಯ. ಆದ್ದರಿಂದ, ನಾನು ಸ್ಪರ್ಧಿಸಲು ನಿರ್ಧರಿಸಿದೆ. ಇಲ್ಲಿನ ಜನರು ಜನ ಪ್ರತಿನಿಧಿಗಳ ಕೊರತೆಯಿಂದ ಬೇಸರಗೊಂಡಿದ್ದಾರೆ. ಅವರಿಗೆ ಬದಲಾವಣೆಯ ಅಗತ್ಯವಿದೆ. ಈ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯು ಅದನ್ನು ತರಬಹುದು” ಎಂದು ಸಿಪಿಎಂ ಬೆಂಬಲಿತ ಡೆಮಾಕ್ರಟಿಕ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್ ಆಫ್ ಕೇರಳದ ರಾಜ್ಯ ಅಧ್ಯಕ್ಷೆ ಶೆರಿನ್ ಹೇಳಿದರು.

“ನಾವು ನೀರಿನ ಸಮಸ್ಯೆಯಿಂದ ಹಿಡಿದು ನಾಗರಿಕ ಮತ್ತು ಅಭಿವೃದ್ಧಿ-ಸಂಬಂಧಿತ ಸಮಸ್ಯೆಗಳವರೆಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ನಾನು ಅವುಗಳನ್ನು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಶೆರಿನ್ ಹೇಳಿದರು.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ಕಣ್ಣೂರು ವಿಭಾಗದ ಕಿಳುನ್ನಾದಿಂದ (ವಿಭಾಗ 36) ಸ್ಪರ್ಧಿಸುತ್ತಿರುವ ತೊಟ್ಟಡಾದ ಸಮಾಜವಾದಿ ಕಾಲೋನಿಯ ನಿವಾಸಿ ಸ್ನೇಹಾ.ಕೆ, ಮುಖ್ಯವಾಹಿನಿಯ ರಾಜಕೀಯ ಪಕ್ಷಗಳ ಪುರುಷರು ಮತ್ತು ಮಹಿಳೆಯರು ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈಗ ನಮ್ಮ ಸಮುದಾಯವು ಹೆಜ್ಜೆ ಹಾಕುವ ಸಮಯ ಇದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ ಅಥವಾ ಭರವಸೆಗಳಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಬದಲಿಗೆ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸುವುದು ಅಗತ್ಯವಾಗಿದೆ. ನಮ್ಮ ಕ್ಷೇತ್ರದಲ್ಲಿರುವ ಜನರೆಲ್ಲರೂ ಉತ್ತಮವಾದ ಬೆಂಬಲವನ್ನು ಸೂಚಿಸಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...