Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತಿಚೆಗೆ ಉದ್ಘಾಟಿಸಿದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಅಪಘಾತವೊಂದು ಸಂಭವಿಸಿ, ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ತಾಯಿ – ಮಗ ಮೃತಪಟ್ಟಿದ್ದರು. ಈ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿರುವುದು ನಡೆದಿರುವುದು ಖೇದಕರ ಸಂಗತಿ.

ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಭಾನುವಾರ ರಜಾ ದಿನವಾಗಿದ್ದರಿಂದ ಮೈಸೂರಿಗೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್ ಓಡಿಸುತ್ತಿದ್ದ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಮೃತಪಟ್ಟ ಯುವತಿಯ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಯುವತಿ ಪ್ರಿಯಾಂಕ ರಾಜು(32) ತಮಿಳುನಾಡು ಮೂಲದವಳಾಗಿದ್ದು, ಬೈಕ್‌ ಓಡಿಸುತ್ತಿದ್ದ ಯುವಕ ಹಾಸನದ ದಾಸನಕೊಪ್ಪಲು ನಿವಾಸಿ ಲಕ್ಷ್ಮೀನಾರಾಯಣ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್​ ವೇ- ಅಪಘಾತಗಳ ಹೆದ್ದಾರಿ

ಬೆಂಗಳೂರು – ಮೈಸೂರು ನಡುವಿನ ಎಕ್ಸ್​ಪ್ರೆಸ್​ ವೇ ಉದ್ಘಾಟನೆಯಾದಾಗಿನಿಂದ ಅಲ್ಲಲ್ಲಿ ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಇನ್ನೂ ಉದ್ಘಾಟನೆಗೂ ಮುನ್ನ ಕೂಡ ಈ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ವೇಳೆಯಲ್ಲೂ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಎಕ್ಸ್​ಪ್ರೆಸ್​ ವೇಯಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ವಾಹನಗಳ ಸಂಚಾರ ಪ್ರಾರಂಭವಾಯಿತು. ಅಲ್ಲಿಂದ ಇಲ್ಲಿವರೆಗೆ ಸರಿ ಸುಮಾರು 335ಕ್ಕೂ ಅಪಘಾತ ಪ್ರಕರಣಗಳು ವರದಿಯಾಗಿದ್ದು, 80ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 51 ಕಿಮೀ ಹೆದ್ದಾರಿ ಹಾದುಹೋಗಲಿದ್ದು, 6 ತಿಂಗಳಲ್ಲಿ 110ಕ್ಕೂ ಅಧಿಕ ಅಪಘಾತಗಳು ನಡೆದಿದ್ದು, 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸುಮಾರು 100 ಜನ ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 225 ಅಪಘಾತ ಪ್ರಕರಣಗಳು ವರದಿಯಾಗಿದ್ದು, 43 ಜನರು ಪ್ರಾಣಬಿಟ್ಟಿದ್ದಾರೆ. ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ 40 ಅಪಘಾತ ಸಂಭವಿಸಿದ್ದು, 9 ಜನ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಸಮೀಪ 3 ಕಾರುಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಮೂವರು ಗಾಯಾಳುಗಳಾಗಿದ್ದರು. ಹೆದ್ದಾರಿ ಕಾಮಗಾರಿ ಕೊನೆಯ ಹಂತಕ್ಕೆ ಬಂದ ಡಿಸೆಂಬರ್, ಜನವರಿ ತಿಂಗಳಲ್ಲಿಯೇ ಹೆಚ್ಚಿನ ಅಪಘಾತ ಪ್ರಕರಣಗಳು ಸಂಭವಿಸಿವೆ.

ಎಕ್ಸ್​ಪ್ರೆಸ್​ ವೇಯಲ್ಲಿ ಎಲ್ಲಿಯೂ ವೇಗ ಮಿತಿ ಹಾಗೂ ಇತರೆ ಮಾಹಿತಿಯನ್ನು ಒದಗಿಸುವ ಸೂಚನಾ ಫಲಕಗಳು ಇಲ್ಲ. ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿಯಲ್ಲಿ ಸೇತುವೆಗಳು ಹೆಚ್ಚು ತಿರುವಿನಿಂದ ಕೂಡಿರುವುದು ಅಪಘಾತಕ್ಕೆ ಕಾರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...