Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತಿಚೆಗೆ ಉದ್ಘಾಟಿಸಿದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಅಪಘಾತವೊಂದು ಸಂಭವಿಸಿ, ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ತಾಯಿ – ಮಗ ಮೃತಪಟ್ಟಿದ್ದರು. ಈ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿರುವುದು ನಡೆದಿರುವುದು ಖೇದಕರ ಸಂಗತಿ.

ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಭಾನುವಾರ ರಜಾ ದಿನವಾಗಿದ್ದರಿಂದ ಮೈಸೂರಿಗೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್ ಓಡಿಸುತ್ತಿದ್ದ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಮೃತಪಟ್ಟ ಯುವತಿಯ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಯುವತಿ ಪ್ರಿಯಾಂಕ ರಾಜು(32) ತಮಿಳುನಾಡು ಮೂಲದವಳಾಗಿದ್ದು, ಬೈಕ್‌ ಓಡಿಸುತ್ತಿದ್ದ ಯುವಕ ಹಾಸನದ ದಾಸನಕೊಪ್ಪಲು ನಿವಾಸಿ ಲಕ್ಷ್ಮೀನಾರಾಯಣ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್​ ವೇ- ಅಪಘಾತಗಳ ಹೆದ್ದಾರಿ

ಬೆಂಗಳೂರು – ಮೈಸೂರು ನಡುವಿನ ಎಕ್ಸ್​ಪ್ರೆಸ್​ ವೇ ಉದ್ಘಾಟನೆಯಾದಾಗಿನಿಂದ ಅಲ್ಲಲ್ಲಿ ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಇನ್ನೂ ಉದ್ಘಾಟನೆಗೂ ಮುನ್ನ ಕೂಡ ಈ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ವೇಳೆಯಲ್ಲೂ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಎಕ್ಸ್​ಪ್ರೆಸ್​ ವೇಯಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ವಾಹನಗಳ ಸಂಚಾರ ಪ್ರಾರಂಭವಾಯಿತು. ಅಲ್ಲಿಂದ ಇಲ್ಲಿವರೆಗೆ ಸರಿ ಸುಮಾರು 335ಕ್ಕೂ ಅಪಘಾತ ಪ್ರಕರಣಗಳು ವರದಿಯಾಗಿದ್ದು, 80ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 51 ಕಿಮೀ ಹೆದ್ದಾರಿ ಹಾದುಹೋಗಲಿದ್ದು, 6 ತಿಂಗಳಲ್ಲಿ 110ಕ್ಕೂ ಅಧಿಕ ಅಪಘಾತಗಳು ನಡೆದಿದ್ದು, 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸುಮಾರು 100 ಜನ ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 225 ಅಪಘಾತ ಪ್ರಕರಣಗಳು ವರದಿಯಾಗಿದ್ದು, 43 ಜನರು ಪ್ರಾಣಬಿಟ್ಟಿದ್ದಾರೆ. ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ 40 ಅಪಘಾತ ಸಂಭವಿಸಿದ್ದು, 9 ಜನ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಸಮೀಪ 3 ಕಾರುಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಮೂವರು ಗಾಯಾಳುಗಳಾಗಿದ್ದರು. ಹೆದ್ದಾರಿ ಕಾಮಗಾರಿ ಕೊನೆಯ ಹಂತಕ್ಕೆ ಬಂದ ಡಿಸೆಂಬರ್, ಜನವರಿ ತಿಂಗಳಲ್ಲಿಯೇ ಹೆಚ್ಚಿನ ಅಪಘಾತ ಪ್ರಕರಣಗಳು ಸಂಭವಿಸಿವೆ.

ಎಕ್ಸ್​ಪ್ರೆಸ್​ ವೇಯಲ್ಲಿ ಎಲ್ಲಿಯೂ ವೇಗ ಮಿತಿ ಹಾಗೂ ಇತರೆ ಮಾಹಿತಿಯನ್ನು ಒದಗಿಸುವ ಸೂಚನಾ ಫಲಕಗಳು ಇಲ್ಲ. ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿಯಲ್ಲಿ ಸೇತುವೆಗಳು ಹೆಚ್ಚು ತಿರುವಿನಿಂದ ಕೂಡಿರುವುದು ಅಪಘಾತಕ್ಕೆ ಕಾರವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...