Homeಕರ್ನಾಟಕಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

‘ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ’ ಎಂದು ದುರಹಂಕಾರ ಮೆರೆದ ಕೆಎಫ್‌ಸಿ; ಆರೋಪ

- Advertisement -
- Advertisement -

ಕೆಎಫ್‌ಸಿ ಸಂಸ್ಥೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ ಅಭಿಯಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಂಗಳವಾರ ಹುಬ್ಬಳ್ಳಿಯ ಕೆಎಫ್‌ಸಿ ಮಳಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಿಗ್ಬಂಧನ ಹೂಡಿದರು.

ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ, ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ್ ಹಳವದ ಅವರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳು ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ, ಅಲ್ಲಿನ ಸಿಬ್ಬಂದಿಗೆ ಕನ್ನಡದ ಪಾಠ ಹೇಳಿದರು.

ಕೆಎಫ್‌ಸಿ ಮಳಿಗೆಗಳಲ್ಲಿ ಸಂಪೂರ್ಣ ಕನ್ನಡವನ್ನೇ ಬಳಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಎಲ್ಲ ನಾಮಫಲಕಗಳೂ ಕನ್ನಡದಲ್ಲಿ ಇರಬೇಕು, ಕನ್ನಡದ ಹಾಡುಗಳನ್ನು ಹಾಕಬೇಕು. ಇದಕ್ಕಾಗಿ ಒಂದು ವಾರದ ಗಡುವು ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವಕ್ಕೆ ಮುನ್ನ ಕೆಎಫ್‌ಸಿ ಕನ್ನಡೀಕರಣವಾಗಬೇಕು. ಬೆಂಗಳೂರಿನ ಇಂದಿರಾನಗರ ಕೆಎಫ್‌ಸಿ ಮಾಲ್‌ನಲ್ಲಿ ಕನ್ನಡಿಗರ ವಿರುದ್ಧ ಮಾತಾಡಿದ್ದಕ್ಕೆ ಸಂಸ್ಥೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆಗ ಆಗುವ ಅನಾಹುತಗಳಿಗೆ ಕೆಎಫ್‌ಸಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕರವೇ ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ ಹಳವದ ಎಚ್ಚರಿಕೆ ನೀಡಿದರು.

ಕನ್ನಡವನ್ನು ಅಪಮಾನಿಸಿದ ಕೆಎಫ್‌ಸಿ ವಿರುದ್ಧ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಭಾನುವಾರ #RejectKFC #KFCಕನ್ನಡಬೇಕು ಎಂಬ ಹ್ಯಾಶ್ ಟ್ಯಾಗ್‌ಗಳು ರಾಷ್ಟ್ರಮಟ್ಟದಲ್ಲಿ ಟ್ರೆಂಡ್ ಆಗಿದ್ದವು. ಸೋಮವಾರ ದಾವಣಗೆರೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡರ ನೇತೃತ್ವದಲ್ಲಿ ಕೆಎಫ್‌ಸಿ ಮುಂಭಾಗ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿರಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಂಗಳವಾರ ಕರವೇ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಹುಬ್ಬಳ್ಳಿ ಗೋಕುಲ ರೋಡ್ ಕೆ.ಎಫ್.ಸಿ ಮಳಿಗೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಕರವೇ ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ಕರವೇ ರಾಜ್ಯ ಪದವೀಧರ ಘಟಕದ ಕಾರ್ಯದರ್ಶಿ ಪ್ರಭುಗೌಡ ಸಖ್ಯಾಗೌಡಶಾನಿ, ಯುವ ಘಟಕ ಜಿಲ್ಲಾ ಧ್ಯಕ್ಷರಾದ ಸಾಗರ್ ಗಾಯಕವಾಡ, ರೈತ ಘಟಕ ಜಿಲ್ಲಾಧ್ಯಕ್ಷರಾದ ಪಾಪು ಧಾರೆ, ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಗುರಪ್ಪ ಹಳ್ಯಾಳ, ಹುಬ್ಬಳ್ಳಿ ತಾಲೂಕ ಯುವ ಘಟಕ ಅಧ್ಯಕ್ಷರಾದ ಗಂಗು ಪಾಟೀಲ್, ಧಾರವಾಡ ನಗರ ಘಟಕ ಅಧ್ಯಕ್ಷರಾದ ಮಲಿಕರೀಯಾಜ ಕಂಬಾರಗಣವಿ, ಧಾರವಾಡ ತಾಲ್ಲೂಕ ಉಪಾಧ್ಯಕ್ಷರಾದ ಕಲ್ಮೇಶ ಸಾಲಿ ಇನ್ನಿತರರು ಪಾಲ್ಗೊಂಡರು.

ಕೆಎಫ್‌ಸಿ ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ

“ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ದುರಹಂಕಾರ ಮೆರೆದ ಕೆಎಫ್‌ಸಿ ಸಂಸ್ಥೆ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ #RejectKFC ಅಭಿಯಾನಕ್ಕೆ ತಮಿಳುನಾಡಿನ ತಮಿಳು ಭಾಷಿಕರು ಭಾರಿ‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ತಮಿಳರು ಭಾನುವಾರದಿಂದ #RejectKFC ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡುತ್ತಿದ್ದು, ಕೆಎಫ್‌‌ಸಿಯಂಥ ಸಂಸ್ಥೆಗಳು ಆಯಾ ರಾಜ್ಯದ ಭಾಷೆ, ಸಂಸ್ಕೃತಿಯನ್ನು ಗೌರವಿಸಬೇಕು, ಇಲ್ಲವಾದಲ್ಲಿ ಅಂಥವುಗಳನ್ನು ನಾವೇ ಧಿಕ್ಕರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಕನ್ನಡಿಗರ ಹೋರಾಟಕ್ಕೆ ಬೆಂಬಲ‌ ನೀಡುತ್ತಿದ್ದಾರೆ.

ಸಣ್ಣಪುಟ್ಟ ವಿಷಯಗಳಿಗೆ ಸ್ಪಂದಿಸಿ ಉತ್ತರ ನೀಡುವ ಕೆಎಫ್‌ಸಿ, ಇದುವರೆಗೆ ಕನ್ನಡಿಗರ ಅಭಿಯಾನದ ಕುರಿತು ಮಾತನಾಡದೇ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಈಗಾಗಲೇ ಒಂದು‌ವಾರದ ಗಡುವು ನೀಡಿದ್ದು, ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಂಗಳೂರಿನ ರಾಜಾಜಿನಗರದ ಕೆಎಫ್‌ಸಿ ಮಳಿಗೆಗೆ ಕರವೇ ಬೆಂಗಳೂರು ನಗರ ಉಪಾಧ್ಯಕ್ಷ ಕೆ.ಪಿ.ನರಸಿಂಹ ಅವರ ನೇತೃತ್ವದ ತಂಡ ಭೇಟಿ ನೀಡಿ, ಅಲ್ಲಿನ‌ ಮೇಲ್ವಿಚಾರಕರಿಗೆ ಎಚ್ಚರಿಕೆಯ ಪತ್ರ ನೀಡಿತು.

ವಾರದ ಒಳಗೆ ಕೆಎಫ್‌ಸಿ ನಾಮಫಲಕಗಳು ಕನ್ನಡೀಕರಣಗೊಳ್ಳಬೇಕು, ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು, ಇಲ್ಲವಾದಲ್ಲಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗುತ್ತೀರಿ ಎಂದು ಕೆ.ಪಿ.ನರಸಿಂಹ ಎಚ್ಚರಿಸಿದರು.

ಕರವೇ ರಾಜಾಜಿನಗರ ಕ್ಷೇತ್ರ ಅಧ್ಯಕ್ಷರಾದ ಮಂಜುನಾಥ್, ಬಸವೇಶ್ವರನಗರ ಕ್ಷೇತ್ರ ಅಧ್ಯಕ್ಷರಾದ ಸಿದ್ಧರಾಜು, ಪ್ರಕಾಶನಗರ ವಾರ್ಡ್ ಉಪಾಧ್ಯಕ್ಷ ರವಿ, ಮುಖಂಡರಾದ ಗಂಗಣ್ಣ, ನಿರ್ಮೋಹ, ಲಕ್ಷ್ಮಿನಾರಾಯಣಪುರ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...